AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ ಇನ್ಸ್​ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಚಿನ್ನು, ಮುದ್ದು ಚಾಟಿಂಗ್ ವೈರಲ್

ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಗಂಭೀರ ಆರೋಪ ಡಿಜೆ ಹಳ್ಳಿ ಇನ್ಸ್​ಪೆಕ್ಟರ್ ವಿರುದ್ಧ ಕೇಳಿಬಂದಿದೆ. 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆಂದು ಸಂತ್ರಸ್ತೆ ಮಹಿಳೆ ಆರೋಪಿಸಿದ್ದು, ಈ ಸಂಬಂಧ ಇದೀಗ ಮಹಿಳೆ ಪೊಲೀಸ್ ಮಹಾನಿರ್ದೇಶಕರ ಮೊರೆ ಹೋಗಿದ್ದಾರೆ. ಹಾಗಾದ್ರೆ, ಸಂತ್ರಸ್ತೆ ಮಾಡಿರುವ ಆರೋಪದಲ್ಲೇನಿದೆ?

ಡಿಜೆ ಹಳ್ಳಿ  ಇನ್ಸ್​ಪೆಕ್ಟರ್ ವಿರುದ್ಧ  ಅತ್ಯಾಚಾರ ಆರೋಪ: ಚಿನ್ನು, ಮುದ್ದು ಚಾಟಿಂಗ್ ವೈರಲ್
Dj Halli Inspector Sunil
ಶಿವಪ್ರಸಾದ್​ ಬಿ.
| Edited By: |

Updated on:Oct 22, 2025 | 12:11 PM

Share

ಬೆಗಳೂರು, (ಅಕ್ಟೋಬರ್ 22): ಡಿ.ಜೆ.ಹಳ್ಳಿ ಪೊಲೀಸ್ ಠಾಣೆ (DJ halli Police Inspector) ಇನ್ಸ್​ಪೆಕ್ಟರ್​ ಸುನೀಲ್​ ವಿರುದ್ಧ ಅಲ್ಪಸಂಖ್ಯಾತ ಸಮುದಾಯದ ಮಹಿಳೆ ಅತ್ಯಾಚಾರ ಆರೋಪ ಮಾಡಿದ್ದಾರೆ.  ಬೆಂಗಳೂರಿನ ಡಿಜೆ ಹಳ್ಳಿ ಠಾಣೆಯ ಇನ್ಸ್​ಪೆಕ್ಟರ್ ರಿಜಿಸ್ಟರ್ ಸುನಿಲ್ ಅವರು ರಿಜಿಸ್ಟರ್ ಮದುವೆಯಾಗುವುದಾಗಿ ನಂಬಿಸಿದ್ದು, 1 ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ.ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡು ನಮ್ಮ ವಿಚಾರ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದು, ನ್ಯಾಯಕ್ಕಾಗಿ ಪೊಲೀಸ್ ಮಹಾನಿರ್ದೇಶಕರ ಮೊರೆ ಹೋಗಿದ್ದಾರೆ.

ಡಿ.ಜೆ.ಹಳ್ಳಿ ಠಾಣೆ ಇನ್ಸ್​ಪೆಕ್ಟರ್​ ಸುನೀಲ್​ ಅವರು ಮದುವೆ ಆಗುವುದಾಗಿ ನಂಬಿಸಿ ಒಂದು ವರ್ಷದಲ್ಲಿ 3 ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಮನೆ‌ ಕೊಡುಸ್ತೀನಿ, ಬ್ಯೂಟಿ ಪಾರ್ಲರ್ ಕೊಡಿಸುವುದಾಗಿ ಹೇಳಿ ತಮ್ಮ ಮನೆ ಹಾಗೂ ಹೋಟೆಲ್​ ಗೆ‌ ಕರೆಸಿ ಅತ್ಯಾಚಾರವೆಸಗಿದ್ದಾರೆ. ಪ್ರತಿಬಾರಿ ವಿಡಿಯೋ ಕಾಲ್ ಮಾಡು ಎಂದು ಪೀಡಿಸುತ್ತಾರೆ. ಅಲ್ಲದೇ ಖಾಸಗಿ ಫೋಟೋ, ವಿಡಿಯೋ ಇಟ್ಟುಕೊಂಡಿದ್ದು, ನಮ್ಮ ವಿಚಾರ ಯಾರಿಗಾದರೂ ಹೇಳಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ನೋಡಿ: ಸಮಸ್ಯೆ ಹೇಳಿಕೊಂಡು ಬಂದ ಮಹಿಳೆಯನ್ನ ಬಲೆಗೆ ಬೀಳಿಸಿಕೊಂಡ ಇನ್ಸ್​​​ಪೆಕ್ಟರ್: ಪೊಲೀಸಪ್ಪನ ಕಾಮ ಪುರಾಣ ಬಟಾಬಯಲು

ಇನ್ನು ಇನ್ಸ್​ಪೆಕ್ಟರ್ ಸುನಿಲ್ ಹಾಗೂ ಸಂತ್ರಸ್ತೆಯ ನಡುವಿನ ವಾಟ್ಸಪ್ ಚಾಟಿಂಗ್ ಬಯಲಿಗೆ ಬಂದಿದ್ದು, ಇದರಲ್ಲಿ ಇಬ್ಬರು ಅನ್ಯೋನ್ಯವಾಗಿ ಚಿನ್ನು ಮುದ್ದು ಎಂದು ಮೆಸೇಜ್ ಮಾಡಿದ್ದಾರೆ. ಅಲ್ಲದೇ ವಿಡಿಯೋ ಹಾಗೂ ವಾಯ್ಸ್ ಕಾಲ್ ಮಾಡಿದ್ದಾರೆ.

ಸದ್ಯ ಸಂತ್ರಸ್ತೆ ಮಹಿಳೆ, ಡಿಜಿ ಹಳ್ಳಿ ಇನ್ಸ್​ಪೆಕ್ಟರ್ ಸುನಿಲ್ ವಿರುದ್ಧ ಪೊಲೀಸ್ ಮಹಾನಿರ್ದೇಶಕರ ಕಚೇರಿ ಮೆಟ್ಟಿಲೇರಿದ್ದು, ಮುಂದೆ ಈ ಪ್ರಕರಣ ಯಾವ ಹಂತಕ್ಕೆ ತಲುಪಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:47 am, Wed, 22 October 25

Follow Us
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳಲ್ಲಿ ಈಜಾಡಿದ ಮಕ್ಕಳು
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
ಕಾಶ್ಮೀರಿ ಪಂಡಿತರಿಗಿರುವ ಬೆದರಿಕೆ​ಗೆ ಕಳವಳ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಅಪ್ಪು ಸರ್ ನೆನಪಿನಲ್ಲಿ ಗಡ್ಡ ಬಿಟ್ಟೆ’: ಭಾವುಕವಾಗಿ ಮಾತನಾಡಿದ ಎಂ.ಕೆ. ಮಠ
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
9 ಗಂಟೆಗಳ ಶೋಧ: ಪ್ಲ್ಯಾನ್ ಮಾಡಿಯೇ ಎಸ್ಕೇಪ್ ಆದ್ರಾ ಜ್ಞಾನೇಂದ್ರ ಕುಮಾರ್?
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ