AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಹನುಮಂತನ ಭಕ್ತ ಈ ಮುಸ್ಲಿಂ ವ್ಯಕ್ತಿ! ರಾಮ ಮಂದಿರ ಉದ್ಘಾಟನೆ ನಂತರ ಅಯೋಧ್ಯೆಗೂ ಭೇಟಿ ನೀಡಲಿದ್ದಾರೆ ಮೈಬೂಸಾಬ್

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇದ್ದು, ದೇಶಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ವಿಜಯಪುರದಲ್ಲಿ ಭಾವೈಕ್ಯತೆಯನ್ನು ಸಾರುತ್ತಿರುವ ಮುಸ್ಲಿಂ ವ್ಯಕ್ತಿಯೊಬ್ಬರು ಗಮನಸೆಳೆಯುತ್ತಿದ್ದಾರೆ. ಹೌದು, ರಾಮನ ಭಕ್ತ ಹನುಮಂತ ಎಂಬುದು ಗೊತ್ತೇ ಇದೆ. ಆದರೆ, ಈ ಹನುಮಂತನ ಭಕ್ತ ಈ ಮುಸ್ಲಿಂ ವ್ಯಕ್ತಿ. ಅಷ್ಟೇ ಅಲ್ಲದೆ, ಕಳೆದ 40 ವರ್ಷಗಳಿಂದ ಆಂಜನೇಯನನ್ನು ಪೂಜಿಸುತ್ತಾ ಬರುತ್ತಿದ್ದಾರೆ.

ವಿಜಯಪುರ: ಹನುಮಂತನ ಭಕ್ತ ಈ ಮುಸ್ಲಿಂ ವ್ಯಕ್ತಿ! ರಾಮ ಮಂದಿರ ಉದ್ಘಾಟನೆ ನಂತರ ಅಯೋಧ್ಯೆಗೂ ಭೇಟಿ ನೀಡಲಿದ್ದಾರೆ ಮೈಬೂಸಾಬ್
ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ಹನುಮಾನ್ ದೇವಸ್ಥಾನದಲ್ಲಿ ಪೂಜೆ ಮಾಡುತ್ತಿರುವ ಮುಸ್ಲಿಂ ವ್ಯಕ್ತಿ ಮೈಬೂಸಾಬ್ ನದಾಫ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jan 15, 2024 | 3:26 PM

Share

ವಿಜಯಪುರ, ಜ.15: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ (Ayodhya Ram Mandir) ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇದ್ದು, ದೇಶಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ವಿಜಯಪುರದಲ್ಲಿ (Vijayapura) ಭಾವೈಕ್ಯತೆಯನ್ನು ಸಾರುತ್ತಿರುವ ಮುಸ್ಲಿಂ ವ್ಯಕ್ತಿಯೊಬ್ಬರು ಗಮನಸೆಳೆಯುತ್ತಿದ್ದಾರೆ. ರಾಮನ ಭಕ್ತ ಹನುಮಂತ ಎಂಬುದು ಗೊತ್ತೇ ಇದೆ. ಆದರೆ, ಈ ಹನುಮಂತನ ಭಕ್ತ ಈ ಮುಸ್ಲಿಂ ವ್ಯಕ್ತಿ. ಅಷ್ಟೇ ಅಲ್ಲದೆ, ಕಳೆದ 40 ವರ್ಷಗಳಿಂದ ಆಂಜನೇಯನನ್ನು ಪೂಜಿಸುತ್ತಾ ಬರುತ್ತಿದ್ದಾರೆ.

ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ನಿವಾಸಿಯಾಗಿರುವ ಮೈಬೂಸಾಬ್ ನದಾಫ್ ಅವರು ಗ್ರಾಮದ ಹನುಮಂತ ದೇವಸ್ಥಾನದಲ್ಲಿ ಪೂಜೆ ಮಾಡಿಕೊಂಡು ಬರುತ್ತಿದ್ದಾರೆ. ಮೈಬೂಸಾಬ್​ ಅವರು ತಮ್ಮ ಮನೆಯಲ್ಲಿ ಜಾತಿ ಬೇಧ ಭಾವವಿಲ್ಲದೇ ನಿತ್ಯ ಎಲ್ಲ ಸಮುದಾಯಗಳ ದೇವರ ಪೂಜೆಯೂ ಮಾಡುತ್ತಾರೆ.

ಇದನ್ನೂ ಓದಿ: ಎಲ್ಲ ಧರ್ಮಗಳ ಹಬ್ಬ ತನ್ನ ಗ್ರಂಥಾಲಯದಲ್ಲಿ ಆಚರಿಸುವ ಮೈಸೂರಿನ ಸಯ್ಯದ್ ಇಶಾಕ್ ಭಾವೈಕ್ಯತೆಯ ಪ್ರತೀಕ!

ಗ್ರಾಮದಲ್ಲಿ ಕೋಮು ಸೌಹಾರ್ಧತೆಗೆ ವೇದಿಕೆಯಾಗಿರೋ ಮೈಬೂಸಾಬ್ ನದಾಫ್ 40 ವರ್ಷಗಳಿಂದ ನಿತ್ಯ ತಪ್ಪದೇ ರಾಮನ ಬಂಟ ಹನುಮಂತನ ಪೂಜೆ ಮಾಡುತ್ತಿದ್ದಾರೆ. ಹನುಮಂತನ ಸೇವೆಯಿಂದ ತನಗೆ ಹಾಗೂ ಕುಟುಂಬಕ್ಕೆ ಒಳ್ಳೆಯದೇ ಆಗಿದೆ ಎಂದು ಅವರು ಹೇಳಿದ್ದಾರೆ. ನನಗೆ ನಮ್ಮ ಸಮುದಾಯದಿಂದ ವಿರೋಧ ವ್ಯಕ್ತವಾಗಿಲ್ಲ. ಇಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರಂತೆ ಇದ್ದೇವೆ ಎಂದಿದ್ದಾರೆ.

ಹನುಮಂನತ ಪೂಜೆ ನಂತರವೇ ಆಹಾರ ಸೇವನೆ

ಮೈಬೂಸಾಬ್ ನದಾಫ್ ಅವರಿಗೆ ಹನುಮಂನತ ಮೇಲೆ ಎಷ್ಟು ಭಕ್ತಿ ಇಟ್ಟುಕೊಂಡಿದ್ದಾರೆ ಎಂದರೆ, ದೇವರಿಗೆ ಪೂಜೆ ಮಾಡಿದ ನಂತರವೇ ನೀರು ಆಹಾರ ಸೇವನೆ ಮಾಡುತ್ತಾರೆ. ಹೊತ್ತು ಮುಳುಗಿದರೂ ಏನನ್ನೂ ಸೇವಿಸಲ್ಲ. ಹೀಗೇ ಇರುತ್ತೇನೆ ಎಂದು ಮೈಬೂಸಾಬ್ ಹೇಳುತ್ತಾರೆ.

ಸದ್ಯ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕುರಿತು ಅತೀವ ಸಂತಸ ವ್ಯಕ್ತಪಡಿಸಿರುವ ಮೈಬೂಸಾಬ್, ಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆಗೆ ತೆರಳಿ ರಾಮಮಂದಿರ ದರ್ಶನ ಪಡೆಯುವುದಾಗಿ ಹೇಳಿದ್ದಾರೆ. ಮೈಬೂಸಾಬ್​ಗೆ ಡೋಮನಾಳ ಗ್ರಾಮದ ಜನರು ಸಾಥ್ ನೀಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ