AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಹನುಮಂತನ ಭಕ್ತ ಈ ಮುಸ್ಲಿಂ ವ್ಯಕ್ತಿ! ರಾಮ ಮಂದಿರ ಉದ್ಘಾಟನೆ ನಂತರ ಅಯೋಧ್ಯೆಗೂ ಭೇಟಿ ನೀಡಲಿದ್ದಾರೆ ಮೈಬೂಸಾಬ್

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇದ್ದು, ದೇಶಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ವಿಜಯಪುರದಲ್ಲಿ ಭಾವೈಕ್ಯತೆಯನ್ನು ಸಾರುತ್ತಿರುವ ಮುಸ್ಲಿಂ ವ್ಯಕ್ತಿಯೊಬ್ಬರು ಗಮನಸೆಳೆಯುತ್ತಿದ್ದಾರೆ. ಹೌದು, ರಾಮನ ಭಕ್ತ ಹನುಮಂತ ಎಂಬುದು ಗೊತ್ತೇ ಇದೆ. ಆದರೆ, ಈ ಹನುಮಂತನ ಭಕ್ತ ಈ ಮುಸ್ಲಿಂ ವ್ಯಕ್ತಿ. ಅಷ್ಟೇ ಅಲ್ಲದೆ, ಕಳೆದ 40 ವರ್ಷಗಳಿಂದ ಆಂಜನೇಯನನ್ನು ಪೂಜಿಸುತ್ತಾ ಬರುತ್ತಿದ್ದಾರೆ.

ವಿಜಯಪುರ: ಹನುಮಂತನ ಭಕ್ತ ಈ ಮುಸ್ಲಿಂ ವ್ಯಕ್ತಿ! ರಾಮ ಮಂದಿರ ಉದ್ಘಾಟನೆ ನಂತರ ಅಯೋಧ್ಯೆಗೂ ಭೇಟಿ ನೀಡಲಿದ್ದಾರೆ ಮೈಬೂಸಾಬ್
ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ಹನುಮಾನ್ ದೇವಸ್ಥಾನದಲ್ಲಿ ಪೂಜೆ ಮಾಡುತ್ತಿರುವ ಮುಸ್ಲಿಂ ವ್ಯಕ್ತಿ ಮೈಬೂಸಾಬ್ ನದಾಫ್
ಅಶೋಕ ಯಡಳ್ಳಿ, ವಿಜಯಪುರ
| Edited By: Rakesh Nayak Manchi|

Updated on: Jan 15, 2024 | 3:26 PM

Share

ವಿಜಯಪುರ, ಜ.15: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ (Ayodhya Ram Mandir) ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಇದ್ದು, ದೇಶಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ವಿಜಯಪುರದಲ್ಲಿ (Vijayapura) ಭಾವೈಕ್ಯತೆಯನ್ನು ಸಾರುತ್ತಿರುವ ಮುಸ್ಲಿಂ ವ್ಯಕ್ತಿಯೊಬ್ಬರು ಗಮನಸೆಳೆಯುತ್ತಿದ್ದಾರೆ. ರಾಮನ ಭಕ್ತ ಹನುಮಂತ ಎಂಬುದು ಗೊತ್ತೇ ಇದೆ. ಆದರೆ, ಈ ಹನುಮಂತನ ಭಕ್ತ ಈ ಮುಸ್ಲಿಂ ವ್ಯಕ್ತಿ. ಅಷ್ಟೇ ಅಲ್ಲದೆ, ಕಳೆದ 40 ವರ್ಷಗಳಿಂದ ಆಂಜನೇಯನನ್ನು ಪೂಜಿಸುತ್ತಾ ಬರುತ್ತಿದ್ದಾರೆ.

ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ನಿವಾಸಿಯಾಗಿರುವ ಮೈಬೂಸಾಬ್ ನದಾಫ್ ಅವರು ಗ್ರಾಮದ ಹನುಮಂತ ದೇವಸ್ಥಾನದಲ್ಲಿ ಪೂಜೆ ಮಾಡಿಕೊಂಡು ಬರುತ್ತಿದ್ದಾರೆ. ಮೈಬೂಸಾಬ್​ ಅವರು ತಮ್ಮ ಮನೆಯಲ್ಲಿ ಜಾತಿ ಬೇಧ ಭಾವವಿಲ್ಲದೇ ನಿತ್ಯ ಎಲ್ಲ ಸಮುದಾಯಗಳ ದೇವರ ಪೂಜೆಯೂ ಮಾಡುತ್ತಾರೆ.

ಇದನ್ನೂ ಓದಿ: ಎಲ್ಲ ಧರ್ಮಗಳ ಹಬ್ಬ ತನ್ನ ಗ್ರಂಥಾಲಯದಲ್ಲಿ ಆಚರಿಸುವ ಮೈಸೂರಿನ ಸಯ್ಯದ್ ಇಶಾಕ್ ಭಾವೈಕ್ಯತೆಯ ಪ್ರತೀಕ!

ಗ್ರಾಮದಲ್ಲಿ ಕೋಮು ಸೌಹಾರ್ಧತೆಗೆ ವೇದಿಕೆಯಾಗಿರೋ ಮೈಬೂಸಾಬ್ ನದಾಫ್ 40 ವರ್ಷಗಳಿಂದ ನಿತ್ಯ ತಪ್ಪದೇ ರಾಮನ ಬಂಟ ಹನುಮಂತನ ಪೂಜೆ ಮಾಡುತ್ತಿದ್ದಾರೆ. ಹನುಮಂತನ ಸೇವೆಯಿಂದ ತನಗೆ ಹಾಗೂ ಕುಟುಂಬಕ್ಕೆ ಒಳ್ಳೆಯದೇ ಆಗಿದೆ ಎಂದು ಅವರು ಹೇಳಿದ್ದಾರೆ. ನನಗೆ ನಮ್ಮ ಸಮುದಾಯದಿಂದ ವಿರೋಧ ವ್ಯಕ್ತವಾಗಿಲ್ಲ. ಇಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರಂತೆ ಇದ್ದೇವೆ ಎಂದಿದ್ದಾರೆ.

ಹನುಮಂನತ ಪೂಜೆ ನಂತರವೇ ಆಹಾರ ಸೇವನೆ

ಮೈಬೂಸಾಬ್ ನದಾಫ್ ಅವರಿಗೆ ಹನುಮಂನತ ಮೇಲೆ ಎಷ್ಟು ಭಕ್ತಿ ಇಟ್ಟುಕೊಂಡಿದ್ದಾರೆ ಎಂದರೆ, ದೇವರಿಗೆ ಪೂಜೆ ಮಾಡಿದ ನಂತರವೇ ನೀರು ಆಹಾರ ಸೇವನೆ ಮಾಡುತ್ತಾರೆ. ಹೊತ್ತು ಮುಳುಗಿದರೂ ಏನನ್ನೂ ಸೇವಿಸಲ್ಲ. ಹೀಗೇ ಇರುತ್ತೇನೆ ಎಂದು ಮೈಬೂಸಾಬ್ ಹೇಳುತ್ತಾರೆ.

ಸದ್ಯ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕುರಿತು ಅತೀವ ಸಂತಸ ವ್ಯಕ್ತಪಡಿಸಿರುವ ಮೈಬೂಸಾಬ್, ಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆಗೆ ತೆರಳಿ ರಾಮಮಂದಿರ ದರ್ಶನ ಪಡೆಯುವುದಾಗಿ ಹೇಳಿದ್ದಾರೆ. ಮೈಬೂಸಾಬ್​ಗೆ ಡೋಮನಾಳ ಗ್ರಾಮದ ಜನರು ಸಾಥ್ ನೀಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ