AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ರಮೇಶ್ ಹೆಸರಿನ ಸೈಯದ್

ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕನೊಬ್ಬ 'ರಮೇಶ್' ಎಂದು ಸುಳ್ಳು ಹೆಸರು ಹೇಳಿ ಹಿಂದೂ ಬಾಲಕಿಯನ್ನು ಪರಿಚಯಿಸಿಕೊಂಡಿದ್ದಾನೆ. ಇಷ್ಟಕ್ಕೆ ಬಿಡದೇ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಯುವಕನನ್ನು ಹಿಡಿದು ಪ್ರಶ್ನಿಸಿದಾಗ ರಮೇಶ್ ಹೆಸರಿನ ಸೈಯದ್​ ನ ರಾಸಲೀಲೆಗಳು ಬಟಾಬಯಲಾಗಿವೆ.

ಹಿಂದೂ ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ರಮೇಶ್ ಹೆಸರಿನ ಸೈಯದ್
ಪ್ರಾತಿನಿಧಿಕ ಚಿತ್ರ
ಸಂಜಯ್ಯಾ ಚಿಕ್ಕಮಠ
| Edited By: |

Updated on: Oct 10, 2025 | 3:17 PM

Share

ಹುಬ್ಬಳ್ಳಿ, (ಅಕ್ಟೋಬರ್ 10): ಹಿಂದೂ (Hindu) ಧರ್ಮದ ಬಾಲಕಿಯನ್ನ ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮುಸ್ಲಿಂ ಯುವಕನೋರ್ವ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯ (Hubballi) ಗೋಕುಲ್ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೈಯದ್​ ಎನ್ನುವ ಮುಸ್ಲಿಂ ಯುವಕನೋರ್ವ ‘ರಮೇಶ್’ ಎಂದು ಸುಳ್ಳು ಹೆಸರು ಹೇಳಿ ಹಿಂದೂ ಬಾಲಕಿಯನ್ನು ಪರಿಚಯಿಸಿಕೊಂಡಿದ್ದಾನೆ. ಬಳಿಕ ಬಾಲಕಿಯೊಂದಿಗೆ ಕಾಮದಾಹ ತೀರಿಸಿಕೊಳ್ಳಲು ನಿರ್ಜನ ಪ್ರದೇಶಕ್ಕೆ ಕರೆಕೊಂಡು ಹೋಗಿದ್ದ ವೇಳೆ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ನಂತರ ಆತನ ಮೊಬೈಲ್ ಪರಿಶೀಲಿಸಿದಾಗ ಫೋನ್​​ ನಲ್ಲಿ ಬೇರೆ ರಾಸಲೀಲೆ ವಿಡಿಯೋಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಸೈಯದ್ ರಹನಾ ಮೊದಲು ಬಾಲಕಿಗೆ ತನ್ನ ಹೆಸರು ರಮೇಶ ಎಂದು ತಿಳಿಸಿ ಪರಿಚಯಿಸಿಕೊಂಡಿದ್ದು, ಸಲುಗೆ ಬೆಳೆಸಿಕೊಂಡಿದ್ದ. ಬಳಿಕ ಲೈಂಗಿಕ ಕ್ರಿಯೆಗೆಂದು ಬಾಲಕಿಯನ್ನು ಪುಸಲಾಯಿಸಿ ಹೊಲಕ್ಕೆ ಕರೆದೊಯ್ದಿದ್ದಾನೆ. ಅದೇ ವೇಳೆ ಸ್ಥಳೀಯರು ಯುವಕನನ್ನು ಹಿಡಿದುಕೊಂಡು ವಿಚಾರಿಸಿ ಮೊಬೈಲ್ ಪರಿಶೀಲನೆ ಮಾಡಿದಾಗ ಈತ ರಮೇಶ್ ಅಲ್ಲ ಸೈಯದ್ ರಹನಾ ಎನ್ನುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಲಾಡ್ಜ್​​ನಲ್ಲಿ ಹಿಂದೂ ಮಹಿಳೆ ಜತೆ ಮುಸ್ಲಿಂ ವ್ಯಕ್ತಿ ಲಾಕ್: ಅಬ್ದುಲ್ ಬದಲಿಗೆ ರಮೇಶ್ ಎಂದು ಹೆಸರು ಚೇಂಜ್

ಅಲ್ಲದೇ ಮೊಬೈಲ್‌ನಲ್ಲಿ ಯುವತಿಯೊಂದಿಗಿನ ಅಶ್ಲೀಲ ವೀಡಿಯೋ ಮತ್ತು ಫೋಟೋಗಳು ಹಾಗೂ ಇತರ ಯುವತಿಯರ ಜೊತೆಗಿನ ಫೋಟೋಗಳು ಪತ್ತೆಯಾಗಿವೆ. ಇದರಿಂದ ಕುಪಿತಗೊಂಡ ಸಾರ್ವಜನಿಕರು ಸೈಯದ್ ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ನಾನು ಬಾಲಕಿಯನ್ನು ಹೊಲಕ್ಕೆ ಕರೆದೊಯ್ದಿದ್ದೆ, ನನ್ನಿಂದ ತಪ್ಪಾಗಿದೆ. ಮುಂದೆ ಈ ರೀತಿ ಮಾಡುವುದಿಲ್ಲ ಎಂದು ಸಾರ್ವಜನಿಕರ ಎದುರು ತಪ್ಪೊಪ್ಪಿಕೊಂಡಿದ್ದಾನೆ. ಬಳಿಕ ಸ್ಥಳೀಯರು ಸೈಯದ್​ ನನ್ನು ಗೋಕುಲ್ ರೋಡ್ ಪೊಲೀಸ್ ಠಾಣೆಗೆ ಒಪ್ಪಿಸಿದ್ದು, ಈ ಸಂಬಂಧ ಗೋಕುಲ್ ರೋಡ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!