AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮೂರು ಆಸ್ಪತ್ರೆ ಅಲೆದರೂ ಸಿಗಲಿಲ್ಲ ಬೆಡ್​; ಉಸಿರಾಡಲಾಗದೆ ನರಳಿ ಪ್ರಾಣಬಿಟ್ಟ ವ್ಯಕ್ತಿ

ಈ ವ್ಯಕ್ತಿಯನ್ನು ಮೊದಲು ಕೆ.ಸಿ.ಜನರಲ್ ಆಸ್ಪತ್ರೆಗೆ ಕಳಿಸಲಾಗಿತ್ತು. ಅಲ್ಲಿ ಬೆಡ್ ಇಲ್ಲವೆಂದು ವಾಪಸ್ ಕಳಿಸಲಾಯಿತು. ಅಲ್ಲಿಂದ ವಿಕ್ಟೋರಿಯಾ ಆಸ್ಪತ್ರೆಗೆ ಬಂದ ವ್ಯಕ್ತಿಗೆ ಅಲ್ಲಿಯೂ ನಿರಾಸೆಯೇ ಕಾದಿತ್ತು.

ಬೆಂಗಳೂರಿನಲ್ಲಿ ಮೂರು ಆಸ್ಪತ್ರೆ ಅಲೆದರೂ ಸಿಗಲಿಲ್ಲ ಬೆಡ್​; ಉಸಿರಾಡಲಾಗದೆ ನರಳಿ ಪ್ರಾಣಬಿಟ್ಟ ವ್ಯಕ್ತಿ
ನರಳುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುತ್ತಿರುವ ದೃಶ್ಯ
Lakshmi Hegde
|

Updated on: Apr 20, 2021 | 6:31 PM

Share

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ದಿನೇದಿನೆ ಕೊರೊನಾ ಭೀಕರತೆ ಹೆಚ್ಚುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ನರಳಿ, ಜೀವ ಬಿಡುತ್ತಿರುವ ಪ್ರಕರಣಗಳು ಆಗಾಗ ಬೆಳಕಿಗೆ ಬರುತ್ತಿವೆ. ಇದೀಗ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಇಂಥದ್ದೇ ಒಂದು ಮನಕಲಕುವ ಘಟನೆ ನಡೆದಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿ, ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದೆ ನರಳಿ ನರಳಿ ಜಯದೇವ ಆಸ್ಪತ್ರೆ ಎದುರು ಪ್ರಾಣಬಿಟ್ಟಿದ್ದಾರೆ. ಈ ವ್ಯಕ್ತಿಯನ್ನು ಮೊದಲು ಕೆ.ಸಿ.ಜನರಲ್ ಆಸ್ಪತ್ರೆಗೆ ಕಳಿಸಲಾಗಿತ್ತು. ಅಲ್ಲಿ ಬೆಡ್ ಇಲ್ಲವೆಂದು ವಾಪಸ್ ಕಳಿಸಲಾಯಿತು. ಅಲ್ಲಿಂದ ವಿಕ್ಟೋರಿಯಾ ಆಸ್ಪತ್ರೆಗೆ ಬಂದ ವ್ಯಕ್ತಿಗೆ ಅಲ್ಲಿಯೂ ನಿರಾಸೆಯೇ ಕಾದಿತ್ತು. ಉಸಿರಾಡಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದರೂ ಒಂದು ಬೆಡ್​ ಸಿಗಲಿಲ್ಲ. ಹಾಗೆ, ಜಯದೇವ ಆಸ್ಪತ್ರೆಗೆ ಹೋದಾಗಲೂ ಸಹ ಅಲ್ಲಿನ ವೈದ್ಯರು ಬೆಡ್​ ಇಲ್ಲವೆಂದು ಹೇಳಿದ್ದಾರೆ. ಸರಿಯಾದ ಸಮಯಕ್ಕೆ ಬೆಡ್​ ಸಿಗದ ಕಾರಣ ವ್ಯಕ್ತಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಹೆಚ್ಚುತ್ತಿರುವ ಬೆನ್ನಲ್ಲೇ ಆಸ್ಪತ್ರೆಗಳಲ್ಲಿ ಬೆಡ್​ ಅಭಾವದ ಸಮಸ್ಯೆ ತೀವ್ರವಾಗಿ ಕಾಡುತ್ತಿದೆ. ಇದು ಜನರಲ್ಲಿ ಇನ್ನಷ್ಟು ಆತಂಕ ಹುಟ್ಟುಹಾಕಿದೆ.

ಇದನ್ನೂ ಓದಿ: ಲಾಕ್​ಡೌನ್ ಮಾಡುವಂತೆ ಸರ್ಕಾರಕ್ಕೆ ನೇರ ಸಲಹೆ ನೀಡಿದ ಮಾಜಿ ಸಿಎಂ ಹೆಚ್.​ಡಿ. ಕುಮಾರಸ್ವಾಮಿ

ದೇಶದಲ್ಲಿ ಇಲ್ಲಿಯವರೆಗೆ 44 ಲಕ್ಷ ಡೋಸ್ ಲಸಿಕೆ ವ್ಯರ್ಥ; ಅತಿ ಹೆಚ್ಚು ಪೋಲಾಗಿದ್ದು ತಮಿಳುನಾಡಿನಲ್ಲಿ

A person died near Jayadeva Hospital due to not available of beds in bengaluru

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು