AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಘಲ್ ಚಕ್ರವರ್ತಿ ಕಮ್ ಬಕ್ಷ್ ಕಾಲದ 10.9 ಗ್ರಾಂ ಚಿನ್ನದ ನಾಣ್ಯ ಹರಾಜಿಗೆ; ಮೂಲ ಬೆಲೆ 45ರಿಂದ 50 ಲಕ್ಷ!

10.9 ಗ್ರಾಂ ತೂಕದ ಚಿನ್ನದ ನಾಣ್ಯ ಬಹುತೇಕ ಚಲಾವಣೆಗೊಳ್ಳದೆ ಉಳಿದಿದೆ. ಹಾಗಾಗಿ, ಈ ನಾಣ್ಯ ವೈಶಿಷ್ಟ್ಯಪೂರ್ಣ ಎನಿಸಿಕೊಂಡಿದೆ ಎಂದು ಹರಾಜು ಪ್ರಕ್ರಿಯೆ ಆಯೋಜಕ ಹಾಗೂ ಮರುಧಾರ್ ಆರ್ಟ್ಸ್​ನ ಸಿಇಒ ರಾಜೇಂದ್ರ ಮರು ತಿಳಿಸಿದ್ದಾರೆ.

ಮೊಘಲ್ ಚಕ್ರವರ್ತಿ ಕಮ್ ಬಕ್ಷ್ ಕಾಲದ 10.9 ಗ್ರಾಂ ಚಿನ್ನದ ನಾಣ್ಯ ಹರಾಜಿಗೆ; ಮೂಲ ಬೆಲೆ 45ರಿಂದ 50 ಲಕ್ಷ!
ಚಿನ್ನದ ನಾಣ್ಯ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Apr 06, 2022 | 7:40 PM

Share

ಬೆಂಗಳೂರು: ಐತಿಹಾಸಿಕ ಮಹತ್ವ ಹೊಂದಿರುವ ಅಪರೂಪದ ಚಿನ್ನದ ನಾಣ್ಯವೊಂದು ನಗರದಲ್ಲಿ ಹರಾಜಿಗೆ ಹಾಕಲಾಗಿದೆ. 10.9 ಗ್ರಾಂ ತೂಕವಿರುವ ಚಿನ್ನದ ನಾಣ್ಯ ಮೊಘಲ್ ಚಕ್ರವರ್ತಿ ಔರಂಗಜೇಬನ ಐದನೇ ಪುತ್ರ ಕಮ್ ಬಕ್ಷ್​ನದ್ದಾಗಿದೆ. ಇಲ್ಲಿನ ಪ್ರಮುಖ ನಾಣ್ಯಶಾಸ್ತ್ರೀಯ ವೇದಿಕೆ, ಮರುಧಾರ್ ಆರ್ಟ್ಸ್ ಹರಾಜು ಪ್ರಕ್ರಿಯೆ ನಡೆಸಿಕೊಡಲಿದೆ. ಇತಿಹಾಸ ಕಾಲದ 10.9 ಗ್ರಾಂ ತೂಗುವ ಚಿನ್ನದ ನಾಣ್ಯದ ಮೂಲ ಬೆಲೆ ಸುಮಾರು 45ರಿಂದ 50 ಲಕ್ಷ ರೂಪಾಯಿ ಆಗಿರಲಿದೆ.

ಈ ನಾಣ್ಯವು ಚಲಾವಣೆಯಾಗಿಲ್ಲ. 10.9 ಗ್ರಾಂ ತೂಕದ ಚಿನ್ನದ ನಾಣ್ಯ ಬಹುತೇಕ ಚಲಾವಣೆಗೊಳ್ಳದೆ ಉಳಿದಿದೆ. ಹಾಗಾಗಿ, ಈ ನಾಣ್ಯ ವೈಶಿಷ್ಟ್ಯಪೂರ್ಣ ಎನಿಸಿಕೊಂಡಿದೆ ಎಂದು ಹರಾಜು ಪ್ರಕ್ರಿಯೆ ಆಯೋಜಕ ಹಾಗೂ ಮರುಧಾರ್ ಆರ್ಟ್ಸ್​ನ ಸಿಇಒ ರಾಜೇಂದ್ರ ಮರು ತಿಳಿಸಿದ್ದಾರೆ.

ಮರುಧಾರ್ ಆರ್ಟ್ಸ್ ಪೋರ್ಟಲ್ ನೀಡುವ ಮಾಹಿತಿಯಂತೆ, ಕಮ್ ಬಕ್ಷ್ ಯುದ್ಧಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದವರಾಗಿದ್ದ. 1707ರಲ್ಲಿ ಬಿಜಾಪುರವನ್ನು (ಈಗಿನ ವಿಜಯಪುರ) ವಶಪಡಿಸಿಕೊಂಡ ಔರಂಗಜೇಬನ ಐದನೇ ಪುತ್ರ ಕಮ್ ಬಕ್ಷ್, ತನ್ನನ್ನು ತಾನು ರಾಜನೆಂದು ಘೋಷಿಸಿಕೊಂಡಿದ್ದ.

ಕ್ರಮೇಣ ಕಮ್ ಬಕ್ಷ್ ದಖ್ಖನ್ ಪ್ರದೇಶದ ವಿವಿಧೆಡೆ ಕಮ್ ಬಕ್ಷ್ ಅಧಿಕಾರ ವಿಸ್ತರಿಸಿಕೊಂಡ. ಗುಲ್ಬರ್ಗಾ (ಈಗಿನ ಕಲಬುರ್ಗಿ), ಹೈದರಾಬಾದ್, ಶಾಪುರ್ ಮತ್ತು ವಾಕಿನ್​ಖೆರ ಪ್ರದೇಶಗಳನ್ನು ಆತ ತನ್ನದಾಗಿಸಿಕೊಂಡಿದ್ದ. ಆದರೆ, ಆಡಳಿತವನ್ನು ಸುಸೂತ್ರವಾಗಿ ನಡೆಸಲು ಆಗದ ಕಾರಣ ಕಮ್ ಬಕ್ಷ್ ಸಾಮ್ರಾಜ್ಯ ಪತನಗೊಂಡಿತು. ಜನವರಿ 13, 1709ರಲ್ಲಿ ಕಮ್ ಬಕ್ಷ್ ಯುದ್ಧವೊಂದರಲ್ಲಿ ಸೆರೆಯಾಗಿದ್ದ. ಯುದ್ಧದಲ್ಲಿ ತೀವ್ರ ಗಾಯಗಳಾಗಿದ್ದ ಪರಿಣಾಮ ಮಾರನೇ ದಿನವೇ ಮೃತಪಟ್ಟಿದ್ದ.

ಈ ನಾಣ್ಯವು ವಿಶಿಷ್ಟ ಮತ್ತು ಪ್ರಮುಖವಾದದ್ದಾಗಿದೆ. ಬಿಜಾಪುರ, ಅಶಾನಬಾದ್, ನುಸ್ರತಾಬಾದ್, ಹೈದರಾಬಾದ್, ತೋರ್ಗಲ್, ಗೋಕಾಕ್, ಇಮ್ತಿಯಾಜ್​ಘರ್ ಮುಂತಾದೆಡೆಗಳ ನಾಣ್ಯ ಮುದ್ರಣ ಸ್ಥಳಗಳಿಂದ ಕಮ್ ಬಕ್ಷ್ ಕಾಲದ ನಾಣ್ಯವು ಪ್ರಖ್ಯಾತಿ ಹೊಂದಿದೆ.

ಕಮ್ ಬಕ್ಷ್ ತನ್ನನ್ನು ತಾನು ರಾಜ ಎಂದು ಯಾವಾಗ ಘೋಷಿಸಿಕೊಂಡ ಎಂಬ ಬಗ್ಗೆ ತಿಳಿದಿಲ್ಲ. ಮಾರ್ಚ್ 1707ರ ಸುಮಾರಿಗೆ ತನ್ನನ್ನು ತಾನು ರಾಜ ಎಂದು ಘೋಷಿಸಿಕೊಂಡಿದ್ದ ಎಂಬ ಮಾಹಿತಿ ಇದೆ. ಬಿಜಾಪುರದ ಕೋಟೆ ಅವನ ಸುಪರ್ದಿಗೆ ಬಂದ ಮೇಲೆ ಕಮ್ ಬಕ್ಷ್ ರಾಜನಾಗಿದ್ದ. ಈ ಘಟನೆಯ ದಿನಾಂಕ ತಿಳಿದಿಲ್ಲ ಎಂದು ಮರು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Motera Stadium: ಐತಿಹಾಸಿಕ ಟೆಸ್ಟ್​ಗೆ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ರೆಡಿ.. ಮೊಟೆರಾ ಕ್ರೀಡಾಂಗಣದ 10 ವಿಶೇಷತೆಗಳು ಹೀಗಿವೆ..!

ಉಡುಪಿಯ ಹೊಸಂಗಡಿಯಲ್ಲಿದೆ ಐತಿಹಾಸಿಕ ಹಿನ್ನೆಲೆಯ ಮಹಾ ಗಣಪತಿ ದೇವಸ್ಥಾನ

Published On - 8:24 pm, Sat, 27 February 21

Follow Us
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ