AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಘಲ್ ಚಕ್ರವರ್ತಿ ಕಮ್ ಬಕ್ಷ್ ಕಾಲದ 10.9 ಗ್ರಾಂ ಚಿನ್ನದ ನಾಣ್ಯ ಹರಾಜಿಗೆ; ಮೂಲ ಬೆಲೆ 45ರಿಂದ 50 ಲಕ್ಷ!

10.9 ಗ್ರಾಂ ತೂಕದ ಚಿನ್ನದ ನಾಣ್ಯ ಬಹುತೇಕ ಚಲಾವಣೆಗೊಳ್ಳದೆ ಉಳಿದಿದೆ. ಹಾಗಾಗಿ, ಈ ನಾಣ್ಯ ವೈಶಿಷ್ಟ್ಯಪೂರ್ಣ ಎನಿಸಿಕೊಂಡಿದೆ ಎಂದು ಹರಾಜು ಪ್ರಕ್ರಿಯೆ ಆಯೋಜಕ ಹಾಗೂ ಮರುಧಾರ್ ಆರ್ಟ್ಸ್​ನ ಸಿಇಒ ರಾಜೇಂದ್ರ ಮರು ತಿಳಿಸಿದ್ದಾರೆ.

ಮೊಘಲ್ ಚಕ್ರವರ್ತಿ ಕಮ್ ಬಕ್ಷ್ ಕಾಲದ 10.9 ಗ್ರಾಂ ಚಿನ್ನದ ನಾಣ್ಯ ಹರಾಜಿಗೆ; ಮೂಲ ಬೆಲೆ 45ರಿಂದ 50 ಲಕ್ಷ!
ಚಿನ್ನದ ನಾಣ್ಯ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Apr 06, 2022 | 7:40 PM

Share

ಬೆಂಗಳೂರು: ಐತಿಹಾಸಿಕ ಮಹತ್ವ ಹೊಂದಿರುವ ಅಪರೂಪದ ಚಿನ್ನದ ನಾಣ್ಯವೊಂದು ನಗರದಲ್ಲಿ ಹರಾಜಿಗೆ ಹಾಕಲಾಗಿದೆ. 10.9 ಗ್ರಾಂ ತೂಕವಿರುವ ಚಿನ್ನದ ನಾಣ್ಯ ಮೊಘಲ್ ಚಕ್ರವರ್ತಿ ಔರಂಗಜೇಬನ ಐದನೇ ಪುತ್ರ ಕಮ್ ಬಕ್ಷ್​ನದ್ದಾಗಿದೆ. ಇಲ್ಲಿನ ಪ್ರಮುಖ ನಾಣ್ಯಶಾಸ್ತ್ರೀಯ ವೇದಿಕೆ, ಮರುಧಾರ್ ಆರ್ಟ್ಸ್ ಹರಾಜು ಪ್ರಕ್ರಿಯೆ ನಡೆಸಿಕೊಡಲಿದೆ. ಇತಿಹಾಸ ಕಾಲದ 10.9 ಗ್ರಾಂ ತೂಗುವ ಚಿನ್ನದ ನಾಣ್ಯದ ಮೂಲ ಬೆಲೆ ಸುಮಾರು 45ರಿಂದ 50 ಲಕ್ಷ ರೂಪಾಯಿ ಆಗಿರಲಿದೆ.

ಈ ನಾಣ್ಯವು ಚಲಾವಣೆಯಾಗಿಲ್ಲ. 10.9 ಗ್ರಾಂ ತೂಕದ ಚಿನ್ನದ ನಾಣ್ಯ ಬಹುತೇಕ ಚಲಾವಣೆಗೊಳ್ಳದೆ ಉಳಿದಿದೆ. ಹಾಗಾಗಿ, ಈ ನಾಣ್ಯ ವೈಶಿಷ್ಟ್ಯಪೂರ್ಣ ಎನಿಸಿಕೊಂಡಿದೆ ಎಂದು ಹರಾಜು ಪ್ರಕ್ರಿಯೆ ಆಯೋಜಕ ಹಾಗೂ ಮರುಧಾರ್ ಆರ್ಟ್ಸ್​ನ ಸಿಇಒ ರಾಜೇಂದ್ರ ಮರು ತಿಳಿಸಿದ್ದಾರೆ.

ಮರುಧಾರ್ ಆರ್ಟ್ಸ್ ಪೋರ್ಟಲ್ ನೀಡುವ ಮಾಹಿತಿಯಂತೆ, ಕಮ್ ಬಕ್ಷ್ ಯುದ್ಧಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದವರಾಗಿದ್ದ. 1707ರಲ್ಲಿ ಬಿಜಾಪುರವನ್ನು (ಈಗಿನ ವಿಜಯಪುರ) ವಶಪಡಿಸಿಕೊಂಡ ಔರಂಗಜೇಬನ ಐದನೇ ಪುತ್ರ ಕಮ್ ಬಕ್ಷ್, ತನ್ನನ್ನು ತಾನು ರಾಜನೆಂದು ಘೋಷಿಸಿಕೊಂಡಿದ್ದ.

ಕ್ರಮೇಣ ಕಮ್ ಬಕ್ಷ್ ದಖ್ಖನ್ ಪ್ರದೇಶದ ವಿವಿಧೆಡೆ ಕಮ್ ಬಕ್ಷ್ ಅಧಿಕಾರ ವಿಸ್ತರಿಸಿಕೊಂಡ. ಗುಲ್ಬರ್ಗಾ (ಈಗಿನ ಕಲಬುರ್ಗಿ), ಹೈದರಾಬಾದ್, ಶಾಪುರ್ ಮತ್ತು ವಾಕಿನ್​ಖೆರ ಪ್ರದೇಶಗಳನ್ನು ಆತ ತನ್ನದಾಗಿಸಿಕೊಂಡಿದ್ದ. ಆದರೆ, ಆಡಳಿತವನ್ನು ಸುಸೂತ್ರವಾಗಿ ನಡೆಸಲು ಆಗದ ಕಾರಣ ಕಮ್ ಬಕ್ಷ್ ಸಾಮ್ರಾಜ್ಯ ಪತನಗೊಂಡಿತು. ಜನವರಿ 13, 1709ರಲ್ಲಿ ಕಮ್ ಬಕ್ಷ್ ಯುದ್ಧವೊಂದರಲ್ಲಿ ಸೆರೆಯಾಗಿದ್ದ. ಯುದ್ಧದಲ್ಲಿ ತೀವ್ರ ಗಾಯಗಳಾಗಿದ್ದ ಪರಿಣಾಮ ಮಾರನೇ ದಿನವೇ ಮೃತಪಟ್ಟಿದ್ದ.

ಈ ನಾಣ್ಯವು ವಿಶಿಷ್ಟ ಮತ್ತು ಪ್ರಮುಖವಾದದ್ದಾಗಿದೆ. ಬಿಜಾಪುರ, ಅಶಾನಬಾದ್, ನುಸ್ರತಾಬಾದ್, ಹೈದರಾಬಾದ್, ತೋರ್ಗಲ್, ಗೋಕಾಕ್, ಇಮ್ತಿಯಾಜ್​ಘರ್ ಮುಂತಾದೆಡೆಗಳ ನಾಣ್ಯ ಮುದ್ರಣ ಸ್ಥಳಗಳಿಂದ ಕಮ್ ಬಕ್ಷ್ ಕಾಲದ ನಾಣ್ಯವು ಪ್ರಖ್ಯಾತಿ ಹೊಂದಿದೆ.

ಕಮ್ ಬಕ್ಷ್ ತನ್ನನ್ನು ತಾನು ರಾಜ ಎಂದು ಯಾವಾಗ ಘೋಷಿಸಿಕೊಂಡ ಎಂಬ ಬಗ್ಗೆ ತಿಳಿದಿಲ್ಲ. ಮಾರ್ಚ್ 1707ರ ಸುಮಾರಿಗೆ ತನ್ನನ್ನು ತಾನು ರಾಜ ಎಂದು ಘೋಷಿಸಿಕೊಂಡಿದ್ದ ಎಂಬ ಮಾಹಿತಿ ಇದೆ. ಬಿಜಾಪುರದ ಕೋಟೆ ಅವನ ಸುಪರ್ದಿಗೆ ಬಂದ ಮೇಲೆ ಕಮ್ ಬಕ್ಷ್ ರಾಜನಾಗಿದ್ದ. ಈ ಘಟನೆಯ ದಿನಾಂಕ ತಿಳಿದಿಲ್ಲ ಎಂದು ಮರು ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Motera Stadium: ಐತಿಹಾಸಿಕ ಟೆಸ್ಟ್​ಗೆ ವಿಶ್ವದ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ರೆಡಿ.. ಮೊಟೆರಾ ಕ್ರೀಡಾಂಗಣದ 10 ವಿಶೇಷತೆಗಳು ಹೀಗಿವೆ..!

ಉಡುಪಿಯ ಹೊಸಂಗಡಿಯಲ್ಲಿದೆ ಐತಿಹಾಸಿಕ ಹಿನ್ನೆಲೆಯ ಮಹಾ ಗಣಪತಿ ದೇವಸ್ಥಾನ

Published On - 8:24 pm, Sat, 27 February 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ