AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಮಗು ಜನನ

ಅಪರೂಪದ ಮಗುವಿಗೆ ಸೊಂಟದ ಕೆಳಗೆ ಕೇವಲ ಒಂದು ಕಾಲಿನ ಆಕಾರ ಬಿಟ್ಟರೆ ಸಾಮಾನ್ಯ ದೈಹಿಕ ಭಾಗಗಳು ಇರಲಿಲ್ಲ. ಇದು ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದೆ. ಅಲ್ಲದೇ ಕಿಮ್ಸ್ನ ಮಕ್ಕಳ ವಿಭಾಗದ ತಜ್ಞರು ಜನಿಸಿದ ವಿಚಿತ್ರ ಮಗುವಿನ ಬಗ್ಗೆ ಮಾಹಿತಿ ಸಂಗ್ರಹಿಸಲು ಹಲವು ಕಡೆಗಳಲ್ಲಿ ಸಿದ್ಧತೆ ನಡೆಸಿದ್ದರು.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಮಗು ಜನನ
ಒಂದು ಕಾಲಿನ ಮಗು
TV9 Web
| Edited By: |

Updated on: Jun 21, 2021 | 9:54 AM

Share

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಒಂಟಿಗಾಲಿನ ಅಪರೂಪದ ಮಗುವಿನ ಜನನವಾಗಿದೆ. ಮಗುವಿನ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ. ನಿನ್ನೆ (ಜೂನ್ 20) ಮಧ್ಯಾಹ್ನ ಹೇರಿಗೆ ನೋವಿನಿಂದ ಬಳಲುತಿದ್ದ ಮಹಿಳೆ ಕಿಮ್ಸ್​ಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಕೆಲವೇ ಗಂಟೆಗಳಲ್ಲಿ ಹೆರಿಗೆ ಮಾಡಿಸಲಾಗಿತ್ತು. ಮಗು ವಿಚಿತ್ರ ಅಂಗಾಗದ ಮೂಲಕ ಜನಿಸಿದ್ದರಿಂದ ವೈದ್ಯರಲ್ಲಿ ಅಚ್ಚರಿ ಮೂಡುವಂತೆ ಮಾಡಿದೆ.

ಅಪರೂಪದ ಮಗುವಿಗೆ ಸೊಂಟದ ಕೆಳಗೆ ಕೇವಲ ಒಂದು ಕಾಲಿನ ಆಕಾರ ಬಿಟ್ಟರೆ ಸಾಮಾನ್ಯ ದೈಹಿಕ ಭಾಗಗಳು ಇರಲಿಲ್ಲ. ಇದು ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದೆ. ಅಲ್ಲದೇ ಕಿಮ್ಸ್ನ ಮಕ್ಕಳ ವಿಭಾಗದ ತಜ್ಞರು ಜನಿಸಿದ ವಿಚಿತ್ರ ಮಗುವಿನ ಬಗ್ಗೆ ಮಾಹಿತಿ ಸಂಗ್ರಹಿಸಲು ಹಲವು ಕಡೆಗಳಲ್ಲಿ ಸಿದ್ಧತೆ ನಡೆಸಿದ್ದರು. ಆದರೆ ಜನಿಸಿದ 20 ನಿಮಿಷದಲ್ಲಿ ಮಗು ಸಾವನ್ನಪ್ಪಿದೆ.

ಹಳೇ ಹುಬ್ಬಳ್ಳಿಯ ಕೊಳೆಕಾರಾ ಫ್ಲಾಟ್ನ ನಿವಾಸಿ ಹುಸೇನ್ ಸಾಬ್ ಹಾಗೂ ರೇಷ್ಮಾ ಬಾನು ದಂಪತಿಗೆ ವಿಚಿತ್ರ ಮಗು ಜನಿಸಿತ್ತು. ಗರ್ಭಿಣಿಯಾಗಿ ಏಳು ತಿಂಗಳ ಬಳಿಕ ರೇಷ್ಮಾ ಬಾನುಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಕಿಮ್ಸ್​​ಗೆ ದಾಖಲಾಗಿದ್ದರು. ಸಮಯಕ್ಕಿಂತ ಮುಂಚೆಯೇ ಹೆರಿಗೆ ಆಗಿದ್ದರಿಂದ ಸಹಜವಾಗಿ ಮಗು ಬೆಳವಣಿಗೆ ಕಡಿಮೆಯಾಗಿರಬಹುದೆಂದು ಎಂದು ವೈದ್ಯರು ನಿರೀಕ್ಷಿಸಿದ್ದರು. ಆದರೆ ಒಂದೆ ಕಾಲಿನ ವಿಚಿತ್ರ ಮಗು ಜನಿಸಿದ್ದರಿಂದ ವೈದ್ಯಕೀಯ ಲೋಕಕ್ಕೆ ಸವಾಲಾಗಿತ್ತು. ಕೆಲ ಹೊತ್ತಿನಲ್ಲೆ ಮಗು ಸಾವನ್ನಪ್ಪಿದ್ದರಿಂದ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಾಗಿದೆ.

ಅನುವಂಶೀಯ ಸಮಸ್ಯೆಯೇ ಕಾರಣ ವಿಚಿತ್ರ ಮಗು ಜನನಕ್ಕೆ ಅನುವಂಶೀಯ ಸಮಸ್ಯೆ ಕಾರಣವೆಂದು ಕಿಮ್ಸ್ ವೈದ್ಯರು ಹೇಳುತ್ತಿದ್ದಾರೆ. ಅನುವಂಶೀಯ ಸಮಸ್ಯೆಯಿಂದ ವಿಚಿತ್ರ ಮಗುವಿನ ಜನನವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಕೊಪ್ಪಳದಲ್ಲಿ ಎಂಟು ಕಾಲಿರುವ ಅಪರೂಪದ ಕುರಿ ಜನನ

ತುಮಕೂರಿನಲ್ಲಿ ಎರಡು ತಲೆಯ ಹಸುವಿನ ಕರು ಜನನ; ಅಚ್ಚರಿಗೊಂಡ ಗ್ರಾಮಸ್ಥರು

(A single legged baby was born at KIMS Hospital in hubli)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್