AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಮಗು ಜನನ

ಅಪರೂಪದ ಮಗುವಿಗೆ ಸೊಂಟದ ಕೆಳಗೆ ಕೇವಲ ಒಂದು ಕಾಲಿನ ಆಕಾರ ಬಿಟ್ಟರೆ ಸಾಮಾನ್ಯ ದೈಹಿಕ ಭಾಗಗಳು ಇರಲಿಲ್ಲ. ಇದು ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದೆ. ಅಲ್ಲದೇ ಕಿಮ್ಸ್ನ ಮಕ್ಕಳ ವಿಭಾಗದ ತಜ್ಞರು ಜನಿಸಿದ ವಿಚಿತ್ರ ಮಗುವಿನ ಬಗ್ಗೆ ಮಾಹಿತಿ ಸಂಗ್ರಹಿಸಲು ಹಲವು ಕಡೆಗಳಲ್ಲಿ ಸಿದ್ಧತೆ ನಡೆಸಿದ್ದರು.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಮಗು ಜನನ
ಒಂದು ಕಾಲಿನ ಮಗು
TV9 Web
| Edited By: |

Updated on: Jun 21, 2021 | 9:54 AM

Share

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಒಂಟಿಗಾಲಿನ ಅಪರೂಪದ ಮಗುವಿನ ಜನನವಾಗಿದೆ. ಮಗುವಿನ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ. ನಿನ್ನೆ (ಜೂನ್ 20) ಮಧ್ಯಾಹ್ನ ಹೇರಿಗೆ ನೋವಿನಿಂದ ಬಳಲುತಿದ್ದ ಮಹಿಳೆ ಕಿಮ್ಸ್​ಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಕೆಲವೇ ಗಂಟೆಗಳಲ್ಲಿ ಹೆರಿಗೆ ಮಾಡಿಸಲಾಗಿತ್ತು. ಮಗು ವಿಚಿತ್ರ ಅಂಗಾಗದ ಮೂಲಕ ಜನಿಸಿದ್ದರಿಂದ ವೈದ್ಯರಲ್ಲಿ ಅಚ್ಚರಿ ಮೂಡುವಂತೆ ಮಾಡಿದೆ.

ಅಪರೂಪದ ಮಗುವಿಗೆ ಸೊಂಟದ ಕೆಳಗೆ ಕೇವಲ ಒಂದು ಕಾಲಿನ ಆಕಾರ ಬಿಟ್ಟರೆ ಸಾಮಾನ್ಯ ದೈಹಿಕ ಭಾಗಗಳು ಇರಲಿಲ್ಲ. ಇದು ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದೆ. ಅಲ್ಲದೇ ಕಿಮ್ಸ್ನ ಮಕ್ಕಳ ವಿಭಾಗದ ತಜ್ಞರು ಜನಿಸಿದ ವಿಚಿತ್ರ ಮಗುವಿನ ಬಗ್ಗೆ ಮಾಹಿತಿ ಸಂಗ್ರಹಿಸಲು ಹಲವು ಕಡೆಗಳಲ್ಲಿ ಸಿದ್ಧತೆ ನಡೆಸಿದ್ದರು. ಆದರೆ ಜನಿಸಿದ 20 ನಿಮಿಷದಲ್ಲಿ ಮಗು ಸಾವನ್ನಪ್ಪಿದೆ.

ಹಳೇ ಹುಬ್ಬಳ್ಳಿಯ ಕೊಳೆಕಾರಾ ಫ್ಲಾಟ್ನ ನಿವಾಸಿ ಹುಸೇನ್ ಸಾಬ್ ಹಾಗೂ ರೇಷ್ಮಾ ಬಾನು ದಂಪತಿಗೆ ವಿಚಿತ್ರ ಮಗು ಜನಿಸಿತ್ತು. ಗರ್ಭಿಣಿಯಾಗಿ ಏಳು ತಿಂಗಳ ಬಳಿಕ ರೇಷ್ಮಾ ಬಾನುಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಕಿಮ್ಸ್​​ಗೆ ದಾಖಲಾಗಿದ್ದರು. ಸಮಯಕ್ಕಿಂತ ಮುಂಚೆಯೇ ಹೆರಿಗೆ ಆಗಿದ್ದರಿಂದ ಸಹಜವಾಗಿ ಮಗು ಬೆಳವಣಿಗೆ ಕಡಿಮೆಯಾಗಿರಬಹುದೆಂದು ಎಂದು ವೈದ್ಯರು ನಿರೀಕ್ಷಿಸಿದ್ದರು. ಆದರೆ ಒಂದೆ ಕಾಲಿನ ವಿಚಿತ್ರ ಮಗು ಜನಿಸಿದ್ದರಿಂದ ವೈದ್ಯಕೀಯ ಲೋಕಕ್ಕೆ ಸವಾಲಾಗಿತ್ತು. ಕೆಲ ಹೊತ್ತಿನಲ್ಲೆ ಮಗು ಸಾವನ್ನಪ್ಪಿದ್ದರಿಂದ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಾಗಿದೆ.

ಅನುವಂಶೀಯ ಸಮಸ್ಯೆಯೇ ಕಾರಣ ವಿಚಿತ್ರ ಮಗು ಜನನಕ್ಕೆ ಅನುವಂಶೀಯ ಸಮಸ್ಯೆ ಕಾರಣವೆಂದು ಕಿಮ್ಸ್ ವೈದ್ಯರು ಹೇಳುತ್ತಿದ್ದಾರೆ. ಅನುವಂಶೀಯ ಸಮಸ್ಯೆಯಿಂದ ವಿಚಿತ್ರ ಮಗುವಿನ ಜನನವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಕೊಪ್ಪಳದಲ್ಲಿ ಎಂಟು ಕಾಲಿರುವ ಅಪರೂಪದ ಕುರಿ ಜನನ

ತುಮಕೂರಿನಲ್ಲಿ ಎರಡು ತಲೆಯ ಹಸುವಿನ ಕರು ಜನನ; ಅಚ್ಚರಿಗೊಂಡ ಗ್ರಾಮಸ್ಥರು

(A single legged baby was born at KIMS Hospital in hubli)

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?