Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಮಗು ಜನನ

ಅಪರೂಪದ ಮಗುವಿಗೆ ಸೊಂಟದ ಕೆಳಗೆ ಕೇವಲ ಒಂದು ಕಾಲಿನ ಆಕಾರ ಬಿಟ್ಟರೆ ಸಾಮಾನ್ಯ ದೈಹಿಕ ಭಾಗಗಳು ಇರಲಿಲ್ಲ. ಇದು ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದೆ. ಅಲ್ಲದೇ ಕಿಮ್ಸ್ನ ಮಕ್ಕಳ ವಿಭಾಗದ ತಜ್ಞರು ಜನಿಸಿದ ವಿಚಿತ್ರ ಮಗುವಿನ ಬಗ್ಗೆ ಮಾಹಿತಿ ಸಂಗ್ರಹಿಸಲು ಹಲವು ಕಡೆಗಳಲ್ಲಿ ಸಿದ್ಧತೆ ನಡೆಸಿದ್ದರು.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಒಂದೇ ಕಾಲಿನ ಮಗು ಜನನ
ಒಂದು ಕಾಲಿನ ಮಗು
Follow us
TV9 Web
| Updated By: sandhya thejappa

Updated on: Jun 21, 2021 | 9:54 AM

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಒಂಟಿಗಾಲಿನ ಅಪರೂಪದ ಮಗುವಿನ ಜನನವಾಗಿದೆ. ಮಗುವಿನ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ. ನಿನ್ನೆ (ಜೂನ್ 20) ಮಧ್ಯಾಹ್ನ ಹೇರಿಗೆ ನೋವಿನಿಂದ ಬಳಲುತಿದ್ದ ಮಹಿಳೆ ಕಿಮ್ಸ್​ಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಕೆಲವೇ ಗಂಟೆಗಳಲ್ಲಿ ಹೆರಿಗೆ ಮಾಡಿಸಲಾಗಿತ್ತು. ಮಗು ವಿಚಿತ್ರ ಅಂಗಾಗದ ಮೂಲಕ ಜನಿಸಿದ್ದರಿಂದ ವೈದ್ಯರಲ್ಲಿ ಅಚ್ಚರಿ ಮೂಡುವಂತೆ ಮಾಡಿದೆ.

ಅಪರೂಪದ ಮಗುವಿಗೆ ಸೊಂಟದ ಕೆಳಗೆ ಕೇವಲ ಒಂದು ಕಾಲಿನ ಆಕಾರ ಬಿಟ್ಟರೆ ಸಾಮಾನ್ಯ ದೈಹಿಕ ಭಾಗಗಳು ಇರಲಿಲ್ಲ. ಇದು ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದೆ. ಅಲ್ಲದೇ ಕಿಮ್ಸ್ನ ಮಕ್ಕಳ ವಿಭಾಗದ ತಜ್ಞರು ಜನಿಸಿದ ವಿಚಿತ್ರ ಮಗುವಿನ ಬಗ್ಗೆ ಮಾಹಿತಿ ಸಂಗ್ರಹಿಸಲು ಹಲವು ಕಡೆಗಳಲ್ಲಿ ಸಿದ್ಧತೆ ನಡೆಸಿದ್ದರು. ಆದರೆ ಜನಿಸಿದ 20 ನಿಮಿಷದಲ್ಲಿ ಮಗು ಸಾವನ್ನಪ್ಪಿದೆ.

ಹಳೇ ಹುಬ್ಬಳ್ಳಿಯ ಕೊಳೆಕಾರಾ ಫ್ಲಾಟ್ನ ನಿವಾಸಿ ಹುಸೇನ್ ಸಾಬ್ ಹಾಗೂ ರೇಷ್ಮಾ ಬಾನು ದಂಪತಿಗೆ ವಿಚಿತ್ರ ಮಗು ಜನಿಸಿತ್ತು. ಗರ್ಭಿಣಿಯಾಗಿ ಏಳು ತಿಂಗಳ ಬಳಿಕ ರೇಷ್ಮಾ ಬಾನುಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಕಿಮ್ಸ್​​ಗೆ ದಾಖಲಾಗಿದ್ದರು. ಸಮಯಕ್ಕಿಂತ ಮುಂಚೆಯೇ ಹೆರಿಗೆ ಆಗಿದ್ದರಿಂದ ಸಹಜವಾಗಿ ಮಗು ಬೆಳವಣಿಗೆ ಕಡಿಮೆಯಾಗಿರಬಹುದೆಂದು ಎಂದು ವೈದ್ಯರು ನಿರೀಕ್ಷಿಸಿದ್ದರು. ಆದರೆ ಒಂದೆ ಕಾಲಿನ ವಿಚಿತ್ರ ಮಗು ಜನಿಸಿದ್ದರಿಂದ ವೈದ್ಯಕೀಯ ಲೋಕಕ್ಕೆ ಸವಾಲಾಗಿತ್ತು. ಕೆಲ ಹೊತ್ತಿನಲ್ಲೆ ಮಗು ಸಾವನ್ನಪ್ಪಿದ್ದರಿಂದ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಾಗಿದೆ.

ಅನುವಂಶೀಯ ಸಮಸ್ಯೆಯೇ ಕಾರಣ ವಿಚಿತ್ರ ಮಗು ಜನನಕ್ಕೆ ಅನುವಂಶೀಯ ಸಮಸ್ಯೆ ಕಾರಣವೆಂದು ಕಿಮ್ಸ್ ವೈದ್ಯರು ಹೇಳುತ್ತಿದ್ದಾರೆ. ಅನುವಂಶೀಯ ಸಮಸ್ಯೆಯಿಂದ ವಿಚಿತ್ರ ಮಗುವಿನ ಜನನವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ

ಕೊಪ್ಪಳದಲ್ಲಿ ಎಂಟು ಕಾಲಿರುವ ಅಪರೂಪದ ಕುರಿ ಜನನ

ತುಮಕೂರಿನಲ್ಲಿ ಎರಡು ತಲೆಯ ಹಸುವಿನ ಕರು ಜನನ; ಅಚ್ಚರಿಗೊಂಡ ಗ್ರಾಮಸ್ಥರು

(A single legged baby was born at KIMS Hospital in hubli)

ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ತುಮಕೂರು ಜಿಲ್ಲೆ ನೀರಿನ ಯೋಜನೆಗಳ ಬಗ್ಗೆ ಶ್ರೀಗಳಿಗೆ ವಿವರಿಸಿದ ಪರಮೇಶ್ವರ್
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ಕಾಂಗ್ರೆಸ್ ಅಧಿಕಾರದಲ್ಲಿ 50 ವಸ್ತುಗಳ ಬೆಲೆ ಜಾಸ್ತಿಯಾಗಿದೆ: ಹಿರಿಯ ನಾಗರಿಕ
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರು: ಪರಮೇಶ್ವರ್ ಹೇಳಿದ್ದಿಷ್ಟು
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಹಿಂದಿನಿಂದ ಗುದ್ದಿದ ಮಿನಿಬಸ್ ಚಾಲಕ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!