AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ; ಮಗನನ್ನು ಬಂಧಿಸಿದ ಚಿಕ್ಕಮಗಳೂರು ಪೊಲೀಸರು

52 ವರ್ಷದ ಸುಂದರ ಪೂಜಾರಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು. ಇವರು ವಿಶೇಷ ಚೇತನ ಇಬ್ಬರು ಮಕ್ಕಳು, ಪತ್ನಿ ಜೊತೆ ವಾಸವಿದ್ದರು. ಹಿರಿಯ ಮಗ ನಿಖೇಶ್ ಎಲ್ಲರನ್ನು ಬಿಟ್ಟು ಬೆಂಗಳೂರು ಸೇರಿದ್ದ. ಲಾಕ್​ಡೌನ್​ ಹಿನ್ನೆಲೆಯಲ್ಲಿ 1 ತಿಂಗಳ ಹಿಂದೆ ಪುತ್ರ ಮನೆಗೆ ಮರಳಿದ್ದ.

ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ; ಮಗನನ್ನು ಬಂಧಿಸಿದ ಚಿಕ್ಕಮಗಳೂರು ಪೊಲೀಸರು
ತಂದೆಯನ್ನು ಕೊಲೆ ಮಾಡಿದ ನಿಖೇಶ್ನನ್ನು ಪೊಲೀಸರು ಬಂಧಿಸಿದ್ದಾರೆ
Follow us
sandhya thejappa
|

Updated on: May 29, 2021 | 8:41 AM

ಚಿಕ್ಕಮಗಳೂರು: ಪಾರ್ಶ್ವವಾಯು ಪೀಡಿತ ತಂದೆ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚನ್ನಡ್ಲು ಗ್ರಾಮದಲ್ಲಿ ಸಂಭವಿಸಿದೆ. ಸುಂದರ್ ಪೂಜಾರಿ ಎಂಬುವವರು ಕೊಲೆಯಾದ ವ್ಯಕ್ತಿ. ಮಗ ನಿಖೇಶ್ ಹಣ ನೀಡುವಂತೆ ತನ್ನ ತಂದೆ, ತಾಯಿಗೆ ಪೀಡಿಸುತ್ತಿದ್ದ. ತಂದೆ, ತಾಯಿ ಹಣ ನೀಡದ ಹಿನ್ನೆಲೆಯಲ್ಲಿ ನಿಖೇಶ್ ತಂದೆ ಮೇಲೆ ಹಲ್ಲೆ ಮಾಡಿದ್ದಾನೆ. ಸದ್ಯ ತಂದೆ ಮೇಲೆ ಹಲ್ಲೆಗೈದ ಮಗ ನಿಖೇಶ್ನ್ನು​ನ ಪೊಲೀಸರು ಬಂಧಿಸಿದ್ದಾರೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

52 ವರ್ಷದ ಸುಂದರ ಪೂಜಾರಿ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದರು. ಇವರು ವಿಶೇಷ ಚೇತನ ಇಬ್ಬರು ಮಕ್ಕಳು, ಪತ್ನಿ ಜೊತೆ ವಾಸವಿದ್ದರು. ಹಿರಿಯ ಮಗ ನಿಖೇಶ್ ಎಲ್ಲರನ್ನು ಬಿಟ್ಟು ಬೆಂಗಳೂರು ಸೇರಿದ್ದ. ಲಾಕ್​ಡೌನ್​ ಹಿನ್ನೆಲೆಯಲ್ಲಿ 1 ತಿಂಗಳ ಹಿಂದೆ ಪುತ್ರ ಮನೆಗೆ ಮರಳಿದ್ದ. ಹಣ ಕೊಡಿ ಎಂದು ತಂದೆ ತಾಯಿಯನ್ನು ಪೀಡಿಸುತ್ತಿದ್ದ. ಹಣ ನೀಡದ್ದಕ್ಕೆ ಕುಪಿತಗೊಂಡು ತಂದೆಯನ್ನು ಕೊಡಲಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದಾನೆ. ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಂದೆ ಮೃತಪಟ್ಟಿದ್ದಾರೆ.

ಜಗಳ ಬಿಡಿಸಲು ಮಧ್ಯ ಪ್ರವೇಶಿಸಿದವರ ಮೇಲೆ ಹಲ್ಲೆ ತುಮಕೂರು: ಜಗಳ ಬಿಡಿಸಲು ಮಧ್ಯ ಪ್ರವೇಶಿಸಿದವರ ಮೇಲೆ ಹಲ್ಲೆ ನಡೆದಿದೆ. ತುಮಕೂರು ನಗರ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಬಸವರಾಜ್, ಆತನ ಸಹಚರರಿಂದ ಹಲ್ಲೆ ನಡೆದಿದೆ. ಈ ಘಟನೆ ತುಮಕೂರಿನ ವಿನಾಯಕ ನಗರದಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುಗೆ ಜಗಳ ನಡೆಯುತ್ತಿತ್ತು. ಈ ವೇಳೆ ಸ್ಥಳೀಯರಿಬ್ಬರು ಯಾಕಪ್ಪ ಜಗಳ ಆಡುತ್ತೀರಾ ಅಂತಾ ಬಿಡಿಸಲು ಹೋಗಿದ್ದಾರೆ. ಬುದ್ಧಿವಾದ ಹೇಳಲು ಹೋದ ಸಹೋದರರ ಮೇಲೆ ಹಲ್ಲೆ ನಡೆದಿದೆ.

ಬಸವರಾಜ್ ಸಂಬಂಧಿ ಸಂಜಯ್ ಎಂಬಾತ ಮತ್ತೊಂದು ಗುಂಪಿನ ನಡುವೆ ಜಗಳ ಮಾಡಿಕೊಳ್ಳುತ್ತಿದ್ದ. ಈ ವೇಳೆ ಸ್ಥಳೀಯರು ಜಗಳ ಬೇಡ ಸುಮ್ಮನೆ ಇರಿ ಅಂತಾ ಬಿಡಿಸಲು ಹೋಗಿದ್ದರು. ಇದರಿಂದ ಸಂಜಯ್ ತಮ್ಮ ಕಡೆಯವರಾದ ಬಸವರಾಜ್ ಹಾಗೂ ಇತರರನ್ನು ಕರೆದುಕೊಂಡು ಬಂದು ಏಕಾಏಕಿ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡಿದಾಗ ಕೇಳಲು ಹೋದವರ ಮಹಿಳೆಯರ ಮೇಲೂ ದೌರ್ಜನ್ಯ ಎಸಗಿದ್ದಾರೆ. ಈ ಬಗ್ಗೆ ತುಮಕೂರು ನಗರ ಪೊಲೀಸರಿಗೆ ದೂರು ನೀಡಿದರೂ ಪೊಲೀಸರು ಸ್ವೀಕರಿಸುತ್ತಿಲ್ಲ. ಹಲ್ಲೆ ಮಾಡುತ್ತಿರುವ ಹಾಗೂ ಬ್ಯಾಟ್ ಹಿಡಿದು ಓಡಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ಪೂಟೇಜ್ ಇದ್ದರೂ ಕ್ರಮ ಕೈಗೊಳ್ಳಲು ನಗರ ಠಾಣೆ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ.

ತುಮಕೂರು ನಗರ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಬಸವರಾಜ್

ಇದನ್ನೂ ಓದಿ

ಕೊರೊನಾ ಬಳಿಕ ಇನ್ನಿತರ ಸೋಂಕು ತಗುಲಿದ ಶೇಕಡಾ 56 ರಷ್ಟು ರೋಗಿಗಳ ಸಾವು: ಐಸಿಎಂಆರ್

ಕೊರೊನಾ ದೃಢಪಟ್ಟರೂ ಕೇರ್​ ಸೆಂಟರ್​ಗೆ ಬಾರದೇ ಕಾಡಿಗೆ ಓಡಿದ ದಂಪತಿ; ಬಿಪಿಎಲ್​ ಕಾರ್ಡ್​, ವಿದ್ಯುತ್ ಕಡಿತಗೊಳಿಸಿದ ಅಧಿಕಾರಿಗಳು

(A son has assaulted a father who was suffering from paralysis in Chikmagalur)

ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ