AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ವಂದೇ ಭಾರತ್ ರೈಲಿನಲ್ಲಿ ಕೊಳಲಿನ ಮೂಲಕ ವಂದೇ ಮಾತರಂ ಟ್ಯೂನ್ ನುಡಿಸಿದ ಬೆಂಗಳೂರಿನ ವಿದ್ಯಾರ್ಥಿ

ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರಿನ ವಿದ್ಯಾರ್ಥಿಯೊಬ್ಬ ಕೊಳಲಿನಲ್ಲಿ ವಂದೇ ಮಾತರಂ ಟ್ಯೂನ್ ನುಡಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಈ ಬಗ್ಗೆ ಸಾರ್ವಜನಿಕವಾಗಿ ಭಾರೀ ಪ್ರಶಂಸೆ ವ್ಯಕ್ತವಾಗಿದೆ.

Video Viral: ವಂದೇ ಭಾರತ್ ರೈಲಿನಲ್ಲಿ ಕೊಳಲಿನ ಮೂಲಕ ವಂದೇ ಮಾತರಂ ಟ್ಯೂನ್ ನುಡಿಸಿದ ಬೆಂಗಳೂರಿನ ವಿದ್ಯಾರ್ಥಿ
A student from Bengaluru who played Vande Mataram tune through flute on Vande Bharat train
TV9 Web
| Edited By: |

Updated on:Nov 12, 2022 | 5:09 PM

Share

ಬೆಂಗಳೂರು: ಪ್ರಧಾನಿ ಮೋದಿ (Narendra Modi) ನಿನ್ನೆ (ನ.11) ಬೆಂಗಳೂರಿನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ (Vande Bharat Express) ಚಾಲನೆ ನೀಡಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಬೆಂಗಳೂರಿನ ವಿದ್ಯಾರ್ಥಿಯೊಬ್ಬ ಕೊಳಲಿನಲ್ಲಿ ವಂದೇ ಮಾತರಂ ಟ್ಯೂನ್ ನುಡಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದರು. ಇದು ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವಾಗಿ ಸಂಚರಿಸಲು ಸಜ್ಜಾಗಿದೆ.

ಭಾರತೀಯ ರೈಲ್ವೆ ಖಾತೆಗಳ ಸೇವೆ (IRAS) ಅಧಿಕಾರಿ ಅನಂತ್ ರೂಪನಗುಡಿ ಅವರು ಟ್ವಿಟರ್‌ನಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವಿದ್ಯಾರ್ಥಿ ರೈಲು ಚಲಿಸುತ್ತಿರುವಾಗಲೇ ಕೊಳಲು ನುಡಿಸಿದ್ದಾನೆ.  ಬೆಂಗಳೂರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಪ್ರಮೇಯ ಶೇಷಾದ್ರಿ ಕೊಳಲಿನಲ್ಲಿ ಅದ್ಭುತವಾಗಿ ವಂದೇ ಮಾತರಂ ರಾಗವನ್ನು ನುಡಿಸಿದ್ದಾರೆ ಎಂದು ಭಾರತೀಯ ರೈಲು ಇಲಾಖೆಯ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದೆ.

ಇದನ್ನು ಓದಿ: Vande Bharat Express: ವಂದೇ ಭಾರತ್ ಎಕ್ಸ್​ಪ್ರೆಸ್, ಆನ್​ಲೈನ್​ ಟಿಕೆಟ್ ಬುಕಿಂಗ್ ವಿಧಾನ ಇಲ್ಲಿದೆ ನೋಡಿ

ವೀಡಿಯೊ ಇದುವರೆಗೆ ಸುಮಾರು 4,900 ವೀಕ್ಷಣೆಗಳನ್ನು ಪಡೆದುಕೊಂಡಿದೆ. ಇತನ ಈ ಪ್ರತಿಭೆಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.  ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಒಳಭಾಗವು ವಿಮಾನದಂತೆ ಕಾಣುತ್ತದೆ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರ ಈ ವಂದೇ ಭಾರತ್ ರೈಲು ನನಗೆ ತುಂಬಾ ಇಷ್ಟವಾಗಿದೆ. ಇದು ನಮ್ಮ ರೈಲುಗಳಿಗೆ ಆಧುನಿಕ ನೋಟವನ್ನು ನೀಡುತ್ತದೆ. ಆದರೆ ಈಗಾಗಲೇ ಅಸ್ತಿತ್ವದಲ್ಲಿರುವ ಶತಾಬ್ದಿಗಳಗಿಂತ ಹೇಗೆ ವಿಭಿನ್ನವಾಗಿದೆ ಎಂಬುದನ್ನು ನೋಡಬೇಕು ಎಂದು ಹೇಳಿದ್ದಾರೆ.

Published On - 5:09 pm, Sat, 12 November 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!