AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಅಡುಗೆ ಸಹಾಯಕಿ ಜೊತೆ ಸೆಲ್ಫಿ ತೆಗೆದು ಗ್ರೂಪ್​ಗೆ ಹಾಕಿದ್ದ ಶಿಕ್ಷಕ ಅಮಾನತು

ಅಮಾನತು ಆದ ಶಿಕ್ಷಕನ ಹೆಸರು ಆಂಜನೇಯ ನಾಯ್ಕ. ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಶಿಕ್ಷಕ. ಕೊರೊನಾ ಕಾರಣ ಶಾಲೆಗಳು ಬಂದ್ ಆಗಿವೆ. ಆದರೆ ಈತ ನಿತ್ಯ ಶಾಲೆಗೆ ಬಂದು ಅಡುಗೆ ಸಹಾಯಕಿಯರನ್ನು ಕರೆಸುತ್ತಿದ್ದ. ಅಲ್ಲದೇ ಅವರೊಂದಿಗೆ ಸೆಲ್ಫಿ ತೆಗೆದುಕೊಂಡು, ಅದನ್ನ ವಿವಿಧ ಗ್ರೂಪ್​ಗಳಿಗೆ ಹಾಕುತ್ತಿದ್ದ.

ದಾವಣಗೆರೆ: ಅಡುಗೆ ಸಹಾಯಕಿ ಜೊತೆ ಸೆಲ್ಫಿ ತೆಗೆದು ಗ್ರೂಪ್​ಗೆ ಹಾಕಿದ್ದ ಶಿಕ್ಷಕ ಅಮಾನತು
ಅಡುಗೆ ಸಹಾಯಕಿ ಜೊತೆ ಸೆಲ್ಫಿ ತೆಗೆದ ಶಿಕ್ಷಕ
sandhya thejappa
|

Updated on: Jul 07, 2021 | 12:06 PM

Share

ದಾವಣಗೆರೆ: ಶಿಕ್ಷಕರು ಎಂದರೆ ಮಕ್ಕಳ ಪಾಲಿಗೆ ದೇವರು ಅಂತಾರೆ. ಆದರೆ ಇವರಲ್ಲಿ ಕೆಲವೊಬ್ಬರು ಕಿಲಾಡಿಗಳು ಇರುತ್ತಾರೆ. ಅಂತವರಿಗೆ ಪಠ್ಯಕ್ಕಿಂತ ಪಠ್ಯೇತರ ಚಟುವಟಿಕೆಗಳಲ್ಲಿಯೇ ಹೆಚ್ಚು ಆಸಕ್ತಿ. ಜಿಲ್ಲೆಯಲ್ಲಿ ಶಿಕ್ಷಕನೊಬ್ಬ ಮಾಡಬಾರದ ಕೆಲಸ ಮಾಡಿ ಅಮಾನತ್ತು ಆಗಿದ್ದಾನೆ. ಶಾಲೆ ಇಲ್ಲದಿದ್ದರೂ ಪ್ರತಿದಿನ ಶಾಲೆಗೆ ಬರುವ ಶಿಕ್ಷಕ, ಬಿಸಿಯೂಟ ಅಡುಗೆ ಸಹಾಯಕಿಯ ಜೊತೆ ಸೆಲ್ಫಿ ತೆಗೆಸಿಕೊಂಡು ಗ್ರೂಪ್​ಗಳಿಗೆ ಹಾಕುತ್ತಿದ್ದ. ಇದೊಂದೆ ಅಲ್ಲ. ಹತ್ತಾರು ಕಾರಣಕ್ಕೆ ಈತನಿಂದ ಇಡೀ ಗ್ರಾಮಸ್ಥರಿಗೆ ಬೇಸರವಾಗುತ್ತಿತ್ತು. ಮೇಲಾಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಗ್ರಾಮಸ್ಥರು ನೇರವಾಗಿ ಶಿಕ್ಷಣ ಸಚಿವರಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿದ್ದರು.

ಅಮಾನತು ಆದ ಶಿಕ್ಷಕನ ಹೆಸರು ಆಂಜನೇಯ ನಾಯ್ಕ. ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಶಿಕ್ಷಕ. ಕೊರೊನಾ ಕಾರಣ ಶಾಲೆಗಳು ಬಂದ್ ಆಗಿವೆ. ಆದರೆ ಈತ ನಿತ್ಯ ಶಾಲೆಗೆ ಬಂದು ಅಡುಗೆ ಸಹಾಯಕಿಯರನ್ನು ಕರೆಸುತ್ತಿದ್ದ. ಅಲ್ಲದೇ ಅವರೊಂದಿಗೆ ಸೆಲ್ಫಿ ತೆಗೆದುಕೊಂಡು, ಅದನ್ನ ವಿವಿಧ ಗ್ರೂಪ್​ಗಳಿಗೆ ಹಾಕುತ್ತಿದ್ದ. ಶಾಲೆಗಳು ತೆರೆದಿದ್ದಾಗ ಈತ ಕುಡಿದು ಬರುತಿದ್ದ. ಅಲ್ಲದೇ ಮಕ್ಕಳಿಂದ ಗುಟ್ಕಾ ತರಿಸುತ್ತಿದ್ದ.

ಎರಡು ವರ್ಷದ ಹಿಂದೆ ಓರ್ವ ಮಹಿಳೆ ಈತನ ವಿರುದ್ಧ ಜಗಳೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ. ಈ ಎಲ್ಲ ಕಾರಣಕ್ಕಾಗಿ ಗ್ರಾಮಸ್ಥರು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ದೂರು ನೀಡಿದ್ದರು. ಹೀಗೆ ದೂರು ನೀಡಿದ ತಕ್ಷಣವೇ ಸಚಿವವರು ಜಾಗೃತರಾಗಿ ದಾವಣಗೆರೆ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಅವರಿಗೆ ತನಿಖೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಆದೇಶ ನೀಡಿದ್ದರು.

ಪರಮೇಶ್ವರಪ್ಪ ನಡೆಸಿದ ತನಿಖೆಯಲ್ಲಿ ಗ್ರಾಮಸ್ಥರು ಮಾಡಿದ ಆರೋಪಗಳು ಸತ್ಯವಾಗಿದ್ದವು. ಜೊತೆಗೆ ಗ್ರಾಮದ ಬಹುತೇಕರು ಐತನ ವಿರುದ್ಧ ದೂರು ಹೇಳಿದರು. ಎಲ್ಲ ಸಾಕ್ಷಿಗಳನ್ನು ಆಧಾರಿಸಿ ಶಿಕ್ಷಕ ಆಂಜನೇಯ ನಾಯ್ಕ ಎಂಬಾತನನ್ನ ಸೇವೆಯಿಂದ ಅಮಾನತು ಮಾಡಲಾಗಿದೆ.

ಇದನ್ನೂ ಓದಿ

ಪಕ್ಕದಲ್ಲಿ ಪತಿ ಬಂದು ಕುಳಿತುಕೊಳ್ಳುತ್ತಿದ್ದಂತೆ ದೊಡ್ಡದಾಗಿ ಅಳುತ್ತ ಮತ್ತೊಬ್ಬ ಮಹಿಳೆಯನ್ನು ತಬ್ಬಿಕೊಂಡ ವಧು; ಈ ವಿಡಿಯೋ ನೋಡಿದ್ರೆ ನಿಮಗೂ ನಗು ಬರುತ್ತೆ..

ಪೊಲೀಸ್ ಮನೆಯಲ್ಲೇ ಕಳ್ಳತನ ಮಾಡಿ ಕ್ಷಮೆ ಪತ್ರ ಬರೆದಿಟ್ಟ ಖದೀಮ; ಮತ್ತೊಂದೆಡೆ ಕಳ್ಳನಿಗೆ ಮನೆ ಮಾಲೀಕನ ಜಾಣ ಪತ್ರ!

(A teacher who took a selfie with a kitchen maid has been suspended)

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ