ದೇವರ ಭಜನೆ ಮಾಡುತ್ತಿದ್ದ ಮಹಿಳೆಯ ಸರ ಕಿಟಿಕಿಯಿಂದ ಕದ್ದು ಕಳ್ಳ ಪರಾರಿ: ಎಫ್​ಐಆರ ದಾಖಲು

ನಂದಿನಿ ಲೇಔಟ್​ನ ಶಂಕರಪುರದ ಗಣೇಶ ದೇವಸ್ಥಾನದಲ್ಲಿ ಓರ್ವ ಮಹಿಳೆ ದೇವರ ಭಜನೆಯಲ್ಲಿ ಮಗ್ನರಾಗಿ ಬಿಟ್ಟಿದ್ದಾರೆ. ಈ ವೇಳೆ ಖತರ್ನಕ್ ಕಳ್ಳ ಬಂದಿದ್ದು, ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರವನ್ನು ಕದ್ದು ಪರಾರಿಯಾಗಿರುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಎಫ್​ಐಆರ್​ ದಾಖಲಾಗಿದೆ.

ದೇವರ ಭಜನೆ ಮಾಡುತ್ತಿದ್ದ ಮಹಿಳೆಯ ಸರ ಕಿಟಿಕಿಯಿಂದ ಕದ್ದು ಕಳ್ಳ ಪರಾರಿ: ಎಫ್​ಐಆರ ದಾಖಲು
ದೇವರ ಭಜನೆ ಮಾಡುತ್ತಿದ್ದ ಮಹಿಳೆಯ ಸರ ಕಿಟಿಕಿಯಿಂದ ಕದ್ದು ಕಳ್ಳ ಪರಾರಿ: ಎಫ್​ಐಆರ ದಾಖಲು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Oct 14, 2024 | 11:06 PM

ಬೆಂಗಳೂರು, ಅಕ್ಟೋಬರ್​ 14: ದೇವರ ಭಜನೆಯಲ್ಲಿ ಮಗ್ನರಾಗಿದ್ದ ಮಹಿಳೆಯ ಸರವನ್ನು ಕಿಟಿಕಿಯಿಂದ ಕದ್ದು ಖತರ್ನಕ್ ಕಳ್ಳ (thief) ಪರಾರಿಯಾಗಿರುವಂತಹ ಘಟನೆ ನಗರದ ನಂದಿನಿ ಲೇಔಟ್​ನ ಶಂಕರಪುರದ ಗಣೇಶ ದೇವಸ್ಥಾನದಲ್ಲಿ ನಡೆದಿದೆ. ಅಕ್ಟೋಬರ್ 10ರಂದು ನಡೆದ ಘಟನೆಯ ವಿಡಿಯೋ ಭಕ್ತರೊಬ್ಬರ ಮೊಬೈಲ್ ನಲ್ಲಿ ಸೆರೆ ಆಗಿದೆ. ಸದ್ಯ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ನಂದಿನಿ ಲೇಔಟ್​ನ ಶಂಕರಪುರದ ಗಣೇಶ ದೇವಸ್ಥಾನದಲ್ಲಿ ಓರ್ವ ಮಹಿಳೆ ದೇವರ ಭಜನೆಯಲ್ಲಿ ಮಗ್ನರಾಗಿ ಬಿಟ್ಟಿದ್ದಾರೆ. ಈ ವೇಳೆ ಖತರ್ನಕ್ ಕಳ್ಳ ಬಂದಿದ್ದು, ಭಜನೆ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರಕ್ಕೆ‌ ಕೈ ಹಾಕಿ ಎಳೆದಿದ್ದಾನೆ.

ಇದನ್ನೂ ಓದಿ: ಹಾಸ್ಟೆಲ್ ಬಾತ್​ರೂಂನಲ್ಲಿ ಮದರಸಾ ವಿದ್ಯಾರ್ಥಿ ಆತ್ಮಹತ್ಯೆ: ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ ಪೋಷಕರು

ಅತ್ತ ಕಳ್ಳ ಸರ ಎಳೆಯುತ್ತಿದ್ದಂತೆ ಮಹಿಳೆ ಜೋರಾಗಿ ಕೂಗಿಕೊಳ್ಳುತಾ, ತಪ್ಪಿಸಿಕೊಳ್ಳುವಾಗ ಕಟ್ಟಾಗಿ ಅರ್ಧ ಸರ ಕಳ್ಳನ ಕೈಸೇರಿದೆ. ಸುಮಾರು ಮೂವತ್ತು ಗ್ರಾಂ ಕಿತ್ತುಕೊಂಡು ಕಳ್ಳ ಪರಾರಿಯಾಗಿದ್ದಾನೆ. ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಎಫ್​ಐಆರ್​ ದಾಖಲು ಮಾಡಿದ ನಂದಿನಿ ಲೇಔಟ್ ಪೊಲೀಸ್​​ ತನಿಖೆ ಆರಂಭಿಸಿದ್ದಾರೆ.

ಮನೆಗೆ ನುಗ್ಗಿ ಮಲಗಿದ್ದ ವೃದ್ದೆಯ ಕತ್ತಿನಲ್ಲಿದ್ದ ಸರಗಳ್ಳತನ

ಇನ್ನು ನೆಲಮಂಗಲದಲ್ಲಿ ಕೂಡ ಇಂತಹದ್ದೇ ಒಂದು ಘಟನೆ ನಡೆದಿದೆ. ಮನೆಗೆ ನುಗ್ಗಿ ಮಲಗಿದ್ದ ವೃದ್ದೆಯ ಕತ್ತಿನಲ್ಲಿದ್ದ ಚಿನ್ನದ ಸರಗಳ್ಳತನ ಮಾಡಿರುವಂತಹ ಘಟನೆ ನಡೆದಿದೆ. ಸಿಡೇದಹಳ್ಳಿಯ ಮುನ್ನಮ್ಮ ಎಂಬುವವರು ಸರ ಕಳೆದುಕೊಂಡವರು.

ಬೈಕಿನಲ್ಲಿ ಬಂದಿದ್ದ ಅಪರಿಚಿತ ದುಷ್ಕರ್ಮಿ ವೃದ್ದೆಯ ಕತ್ತಿನಲ್ಲಿದ್ದ 85 ಸಾವಿರ ರೂ. ಬೆಲೆಬಾಳುವ 13ಗ್ರಾಂ ತೂಕದ ಚಿನ್ನದ ಸರ ಎಗರಿಸಿ ದುಷ್ಕರ್ಮಿ ಪರಾರಿಯಾಗಿದ್ದಾನೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಕಾರು ಅಡ್ಡಗಟ್ಟಿ ದಂಪತಿಗೆ ಬೆದರಿಕೆ: ಬೆಂಗಳೂರಿನಲ್ಲಿ ಮತ್ತೊಂದು ರೋಡ್​ ರೇಜ್​ ಕೇಸ್​ 

ಕ್ಷುಲ್ಲಕ ಕಾರಣಕ್ಕೆ ಕಾರು ಅಡ್ಡಗಟ್ಟಿ ದಂಪತಿಗೆ ಬೆದರಿಕೆ ಹಾಕಿರುವಂತಹ ಘಟನೆ ತುರುಬರಹಳ್ಳಿಯ ವಿಬ್​ಗಯಾರ್‌‌ ಶಾಲೆ ಬಳಿ ನಿನ್ನೆ ಘಟನೆ ನಡೆದಿದೆ. ಆ ಮೂಲಕ ಬೆಂಗಳೂರಿನಲ್ಲಿ ಮತ್ತೊಂದು ರೋಡ್​ ರೇಜ್​ ಪ್ರಕರಣ ನಡೆದಿದೆ.

ಇದನ್ನೂ ಓದಿ: ವಿಜಯದಶಮಿಯಂದು ಧಾರವಾಡದಲ್ಲಿ ಘೋರ ಅಪಘಾತ: ಟಿಪ್ಪರ ಡಿಕ್ಕಿಗೆ ಯುವಕನ ಅಂಗಾಂಗಗಳು ಚೆಲ್ಲಾಪಿಲ್ಲಿ

ಉತ್ತರ ಭಾರತ ಮೂಲದ ದಂಪತಿಗೆ ವ್ಯಕ್ತಿಯಿಂದ ಧಮ್ಕಿ ಹಾಕಲಾಗಿದೆ. ಘಟನೆ ಸಂಬಂಧ ವರ್ತೂರು ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಕಾರು ಓವರ್​​ಟೇಕ್​​ ವಿಚಾರಕ್ಕೆ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಲಾಗಿದೆ. ಟ್ವಿಟರ್​ನಲ್ಲಿ ಅಪ್ಲೋಡ್​ ಮಾಡಿ ಪೊಲೀಸರಿಗೆ ಟ್ಯಾಗ್​ ಮಾಡಿದ್ದು, ವಿಡಿಯೋ ಹಂಚಿಕೊಂಡು ಸರ್ಕಾರವನ್ನು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ. ದಂಪತಿಯಿಂದ ದೂರು ಪಡೆದು FIR ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ಐಶ್ವರ್ಯಾ, ಅನುಷಾ ರೈ ನಡುವೆ ಜೋರು ಜಗಳ; ಬಿಗ್​ ಬಾಸ್​ ಮನೆಯಲ್ಲಿ ರಂಪಾಟ
ಐಶ್ವರ್ಯಾ, ಅನುಷಾ ರೈ ನಡುವೆ ಜೋರು ಜಗಳ; ಬಿಗ್​ ಬಾಸ್​ ಮನೆಯಲ್ಲಿ ರಂಪಾಟ
ರಸ್ತೆಯಲ್ಲೇ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ತಾಯಿ
ರಸ್ತೆಯಲ್ಲೇ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ತಾಯಿ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ದರ್ಶನ್ ಜಾಮೀನು ಅರ್ಜಿ ವಜಾ: ರೇಣುಕಾಸ್ವಾಮಿ ತಂದೆಯ ಮೊದಲ ಪ್ರತಿಕ್ರಿಯೆ
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಮೌಖಿಕ ಆದೇಶಗಳಿಗೆ ಕಿಮ್ಮತ್ತಿರಲ್ಲ ಅಂತ ಜಮೀರ್​​​ಗೆ ಗೊತ್ತಿಲ್ಲ: ಯತ್ನಾಳ್
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಆನೆಗಳು ಭಾವುಕ ಜೀವಿಗಳು ಅಂತ ಅರಣ್ಯಾಧಿಕಾರಿ ಹೇಳಿದ್ದು ಶತ ಪ್ರತಿಶತ ಸತ್ಯ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಪ್ರಾಧ್ಯಾಪಕಿ ಆತ್ಮಹತ್ಯೆಗೆ ಯತ್ನ: 3 ತಿಂಗಳಿನಿಂದ ಕಿರುಕುಳ ಆರೋಪ
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!
ಅ.17ರ ವರೆಗೆ ಕರ್ನಾಟಕದಲ್ಲಿ ಭಾರೀ ಮಳೆ: ಯೆಲ್ಲೋ- ಆರೆಂಜ್ ಅಲರ್ಟ್​!