Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲೊಂದು ವಿಶಿಷ್ಟ ಸಂಪ್ರದಾಯ: ಅತ್ತಿಗೆ ನಾದಿನಿಯರಿಗಾಗಿಯೇ ನಡೆಯುತ್ತೆ ಡಿಕ್ಕಿ ಹಬ್ಬ

ಚಿತ್ರದುರ್ಗದ ಚಿಕ್ಕೀರಣ್ಣನ ಮಾಳಿಗೆ ಗ್ರಾಮದಲ್ಲಿ ಆಚರಿಸಲಾಗುವ ಡಿಕ್ಕಿ ಹಬ್ಬವು ಅತ್ತಿಗೆ ಮತ್ತು ನಾದಿನಿಯರ ನಡುವಿನ ಬಾಂಧವ್ಯವನ್ನು ಸಂಕೇತಿಸುತ್ತದೆ. ಅಹೋಬಲ ನರಸಿಂಹಸ್ವಾಮಿ ಜಾತ್ರೆ ಪ್ರಯುಕ್ತ ಈ ಹಬ್ಬದಲ್ಲಿ ತಲೆಗೆ ತಲೆ ಡಿಕ್ಕಿ ಹೊಡೆಯುವುದು ವಿಶೇಷ. ಈ ಆಚರಣೆಯು ಪುರಾತನ ಕಾಲದಿಂದಲೂ ಮಾಡಲಾಗುತ್ತಿದ್ದು, ಹೆಣ್ಣುಮಕ್ಕಳ ನಡುವಿನ ಪ್ರೀತಿ ಮತ್ತು ಬಾಂಧವ್ಯವನ್ನು ಬಲಪಡಿಸುತ್ತದೆ ಎಂಬ ಭಾವನೆ ಜನರಲ್ಲಿದೆ.

ಚಿತ್ರದುರ್ಗದಲ್ಲೊಂದು ವಿಶಿಷ್ಟ ಸಂಪ್ರದಾಯ: ಅತ್ತಿಗೆ ನಾದಿನಿಯರಿಗಾಗಿಯೇ ನಡೆಯುತ್ತೆ ಡಿಕ್ಕಿ ಹಬ್ಬ
ಚಿತ್ರದುರ್ಗದಲ್ಲೊಂದು ವಿಶಿಷ್ಟ ಸಂಪ್ರದಾಯ: ಅತ್ತಿಗೆ ನಾದಿನಿಯರಿಗಾಗಿಯೇ ನಡೆಯುತ್ತೆ ಡಿಕ್ಕಿ ಹಬ್ಬ
Follow us
ಬಸವರಾಜ ಮುದನೂರ್, ಚಿತ್ರದುರ್ಗ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 16, 2024 | 6:16 PM

ಚಿತ್ರದುರ್ಗ, ಡಿಸೆಂಬರ್​ 16: ಅತ್ತಿಗೆ ನಾದಿನಿಯರ ನಡುವೆ ಶೀಥಲ ಸಮರ ನಡೆಯುವುದು ಓಪನ್ ಸೀಕ್ರೆಟ್. ಆದರೆ ಕೋಟೆನಾಡಿನಲ್ಲಿ ಅತ್ತಿಗೆ ನಾದಿನಿಯರಿಗಾಗಿಯೇ ವಿಶೇಷ ಹಬ್ಬವೊಂದು ಆಚರಣೆಯಲ್ಲಿದೆ. ಡಿಕ್ಕಿ ಹಬ್ಬದ ಆಚರಣೆ ಮೂಲಕ ತಲೆಗೆ ತಲೆ ಡಿಕ್ಕಿ (Dikki Habba) ಹೊಡೆಯುವ ಅಪರೂಪದ ಸಾಂಪ್ರದಾಯಿಕ ಆಚರಣೆಯೊಂದು ನಡೆಸಲಾಗುತ್ತದೆ. ಡಿಕ್ಕಿ ಹಬ್ಬದ ವಿಶೇಷತೆ ತಿಳಿಯಿರಿ.

ಚಿತ್ರದುರ್ಗದಲ್ಲೊಂದು ವಿಶಿಷ್ಟ ಹಬ್ಬ

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಚಿಕ್ಕೀರಣ್ಣನ ಮಾಳಿಗೆ ಗ್ರಾಮದಲ್ಲಿ ಬುಡಕಟ್ಟು ಸಮುದಾಯದ ಜನ ವಿಶಿಷ್ಟ ಹಬ್ಬವನ್ನು ಆಚರಿಸುತ್ತಾರೆ. ಅಹೋಬಲ ನರಸಿಂಹಸ್ವಾಮಿ ದೇವರ ಜಾತ್ರೆ, ಉತ್ಸವದ ಅಂಗವಾಗಿ ಈ ಆಚರಣೆ ನಡೆಯುತ್ತದೆ. ದೇವರ ಉತ್ಸವ ಮೆರವಣಿಗೆ ವೇಳೆ ನೆಲಕ್ಕೆ ಬಾಳೆ ಹಣ್ಣು, ಬೆಲ್ಲ ಹಾಕಿ ಸೇವಿಸುವ ಸಾಂಪ್ರದಾಯಿಕ ಮಣೇವು ಆಚರಿಸಲಾಗುತ್ತದೆ.

ಯುವಕರು ಟಗರುಗಳನ್ನು ತಂದು ದೇಗುಲದ ಆವರಣದಲ್ಲಿ ಡಿಕ್ಕಿ ಹೊಡೆಸಿ ಖುಷಿ ಪಡುತ್ತಾರೆ. ಆ ಬಳಿಕ ಅತ್ತಿಗೆ ನಾದಿನಿಯರು ಸಾಂಪ್ರದಾಯಿಕ ಡಿಕ್ಕಿ ಹಬ್ಬ ಆಚರಿಸುತ್ತಾರೆ. ಈ ಆಚರಣೆ ಅತ್ತಿಗೆ ನಾದಿನಿಯರ ಪ್ರೀತಿಯ ಅಪ್ಪುಗೆಯ ಹಬ್ಬವಾಗಿದ್ದು, ಪುರಾತನ ಕಾಲದಿಂದಲೂ ಆಚಿರಿಸಿಕೊಂಡು ಬರಲಾಗುತ್ತಿದೆ ಅಂತಾರೆ ಅಧ್ಯಾಪಕ ಡಾ.ಕರಿಯಪ್ಪ ಮಾಳಿಗೆ ಅವರು.

ಇದನ್ನೂ ಓದಿ: ಕೊನೆಗೂ ಮಾಜಿ ಸಿಎಂ ನಿಜಲಿಂಗಪ್ಪ ಮನೆ ಖರೀದಿಸಿದ ಕರ್ನಾಟಕ ಸರ್ಕಾರ

ಇನ್ನು ಈ ಗ್ರಾಮದ ಹೆಣ್ಣುಮಕ್ಕಳು ಅದೆಷ್ಟು ದೂರದ ಊರಿಗೆ ಸೊಸೆಯಾಗಿ ಹೋಗಿದ್ದರೂ ಸಹ ತಪ್ಪದೆ ಈ ಹಬ್ಬಕ್ಕೆ ಬರುತ್ತಾರೆ. ಅತ್ತಿಗೆ, ನಾದಿನಿಯರ ಮಧ್ಯೆ ಏನೇ ವೈಮನಸ್ಸು ಇದ್ದರೂ ಸಹ ಇಂದು ಒಂದಾಗಿ ಹಬ್ಬ ಆಚರಿಸುತ್ತಾರೆ. ಈ ಹಬ್ಬಕ್ಕೆ ಗೈರಾದರೆ ಸಣ್ಣ ತಲೆನೋವು ಬಂದರೂ ಈ ಹಬ್ಬಕ್ಕೆ ಗೈರಾಗಿದ್ದಕ್ಕೆ ಬಂತೆಂಬ ಭಾವನೆ ಮೂಡತ್ತದೆ. ಹೀಗಾಗಿ, ಅತ್ತಿಗೆ ಮತ್ತು ನಾದಿನಿಯರು ಈ ಹಬ್ಬದಲ್ಲಿ ತಪ್ಪದೇ ಪಾಲ್ಗೊಳ್ತಾರೆ ಎಂದು ಸ್ಥಳೀಯರಾದ ಚಂದ್ರಮ್ಮ ಹೇಳಿದ್ದಾರೆ.

ಚಿತ್ರದುರ್ಗದ ಸಿಎನ್ ಮಾಳಿಗೆ ಗ್ರಾಮದಲ್ಲಿ 3 ದಿನ ಕಾಲ ನಡೆದ ಅಹೋಬಲ ನರಸಿಂಹಸ್ವಾಮಿ ಉತ್ಸವಕ್ಕೆ ನಿನ್ನೆ ತೆರೆ ಬಿದ್ದಿದೆ. ಈ ಅಪರೂಪದ ಆಚರಣೆಯ ಮೂಲಕ ಬಾಂಧ್ಯವಗಳು ಮತ್ತಷ್ಟು ಗಟ್ಟಿಗೊಳ್ಳುತ್ತವೆ ಎಂಬುವುದು ಜನರ ನಂಬಿಕೆ ಆಗಿದೆ. ಒಟ್ಟಿನಲ್ಲಿ ಬುಡಕಟ್ಟು ಸಂಸ್ಕೃತಿಯ ಡಿಕ್ಕಿ ಹಬ್ಬ ಆಚರಿಸಿ ಅತ್ತಿಗೆ-ನಾದಿನಿಯರು ಖುಷಿಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ಸೀರೆಯುಟ್ಟು, ಚಪ್ಪಲಿ ಧರಿಸಿ ಲಂಡನ್​ನ ಪಾರ್ಕ್​ನಲ್ಲಿ ಮಮತಾ ಜಾಗಿಂಗ್
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ದಾವಣಗೆರೆ: ನೋಡ ನೋಡ್ತಿದ್ದಂತೆಯೇ ಸುಟ್ಟು ಕರಕಲಾದ ಕಾರುಗಳು
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಕೋಲಾರ: ಹೆಲ್ಮೆಟ್ ತೆಗೀತಿದ್ದಂತೆ ಬುಸ್ ಎಂದ ನಾಗಪ್ಪ! ಆಮೇಲೇನಾಯ್ತು ನೋಡಿ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
ಧಗ ಧಗನೆ ಹೊತ್ತಿ ಉರಿದ ಸಿಲಿಂಡರ್ ತುಂಬಿದ್ದ ಟ್ರಕ್, ಹಲವು ಬಾರಿ ಸ್ಫೋಟ
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ರನೌಟ್ ಮಾಡಲು ಕುಲ್ದೀಪ್ ಯಾದವ್​ನ ತಳ್ಳಿದ ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
VIDEO: ಗೆಲ್ಲುವ ಪಂದ್ಯವನ್ನು 'ಕೈ ಚೆಲ್ಲಿದ' ರಿಷಭ್ ಪಂತ್
Daily Devotional: ಸ್ತ್ರೀಯರಿಗೆ ಎಡಗಣ್ಣು ಅದುರುವುದರ ಹಿಂದಿನ ರಹಸ್ಯ
Daily Devotional: ಸ್ತ್ರೀಯರಿಗೆ ಎಡಗಣ್ಣು ಅದುರುವುದರ ಹಿಂದಿನ ರಹಸ್ಯ