AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲೊಂದು ವಿಶಿಷ್ಟ ಸಂಪ್ರದಾಯ: ಅತ್ತಿಗೆ ನಾದಿನಿಯರಿಗಾಗಿಯೇ ನಡೆಯುತ್ತೆ ಡಿಕ್ಕಿ ಹಬ್ಬ

ಚಿತ್ರದುರ್ಗದ ಚಿಕ್ಕೀರಣ್ಣನ ಮಾಳಿಗೆ ಗ್ರಾಮದಲ್ಲಿ ಆಚರಿಸಲಾಗುವ ಡಿಕ್ಕಿ ಹಬ್ಬವು ಅತ್ತಿಗೆ ಮತ್ತು ನಾದಿನಿಯರ ನಡುವಿನ ಬಾಂಧವ್ಯವನ್ನು ಸಂಕೇತಿಸುತ್ತದೆ. ಅಹೋಬಲ ನರಸಿಂಹಸ್ವಾಮಿ ಜಾತ್ರೆ ಪ್ರಯುಕ್ತ ಈ ಹಬ್ಬದಲ್ಲಿ ತಲೆಗೆ ತಲೆ ಡಿಕ್ಕಿ ಹೊಡೆಯುವುದು ವಿಶೇಷ. ಈ ಆಚರಣೆಯು ಪುರಾತನ ಕಾಲದಿಂದಲೂ ಮಾಡಲಾಗುತ್ತಿದ್ದು, ಹೆಣ್ಣುಮಕ್ಕಳ ನಡುವಿನ ಪ್ರೀತಿ ಮತ್ತು ಬಾಂಧವ್ಯವನ್ನು ಬಲಪಡಿಸುತ್ತದೆ ಎಂಬ ಭಾವನೆ ಜನರಲ್ಲಿದೆ.

ಚಿತ್ರದುರ್ಗದಲ್ಲೊಂದು ವಿಶಿಷ್ಟ ಸಂಪ್ರದಾಯ: ಅತ್ತಿಗೆ ನಾದಿನಿಯರಿಗಾಗಿಯೇ ನಡೆಯುತ್ತೆ ಡಿಕ್ಕಿ ಹಬ್ಬ
ಚಿತ್ರದುರ್ಗದಲ್ಲೊಂದು ವಿಶಿಷ್ಟ ಸಂಪ್ರದಾಯ: ಅತ್ತಿಗೆ ನಾದಿನಿಯರಿಗಾಗಿಯೇ ನಡೆಯುತ್ತೆ ಡಿಕ್ಕಿ ಹಬ್ಬ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Dec 16, 2024 | 6:16 PM

Share

ಚಿತ್ರದುರ್ಗ, ಡಿಸೆಂಬರ್​ 16: ಅತ್ತಿಗೆ ನಾದಿನಿಯರ ನಡುವೆ ಶೀಥಲ ಸಮರ ನಡೆಯುವುದು ಓಪನ್ ಸೀಕ್ರೆಟ್. ಆದರೆ ಕೋಟೆನಾಡಿನಲ್ಲಿ ಅತ್ತಿಗೆ ನಾದಿನಿಯರಿಗಾಗಿಯೇ ವಿಶೇಷ ಹಬ್ಬವೊಂದು ಆಚರಣೆಯಲ್ಲಿದೆ. ಡಿಕ್ಕಿ ಹಬ್ಬದ ಆಚರಣೆ ಮೂಲಕ ತಲೆಗೆ ತಲೆ ಡಿಕ್ಕಿ (Dikki Habba) ಹೊಡೆಯುವ ಅಪರೂಪದ ಸಾಂಪ್ರದಾಯಿಕ ಆಚರಣೆಯೊಂದು ನಡೆಸಲಾಗುತ್ತದೆ. ಡಿಕ್ಕಿ ಹಬ್ಬದ ವಿಶೇಷತೆ ತಿಳಿಯಿರಿ.

ಚಿತ್ರದುರ್ಗದಲ್ಲೊಂದು ವಿಶಿಷ್ಟ ಹಬ್ಬ

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಚಿಕ್ಕೀರಣ್ಣನ ಮಾಳಿಗೆ ಗ್ರಾಮದಲ್ಲಿ ಬುಡಕಟ್ಟು ಸಮುದಾಯದ ಜನ ವಿಶಿಷ್ಟ ಹಬ್ಬವನ್ನು ಆಚರಿಸುತ್ತಾರೆ. ಅಹೋಬಲ ನರಸಿಂಹಸ್ವಾಮಿ ದೇವರ ಜಾತ್ರೆ, ಉತ್ಸವದ ಅಂಗವಾಗಿ ಈ ಆಚರಣೆ ನಡೆಯುತ್ತದೆ. ದೇವರ ಉತ್ಸವ ಮೆರವಣಿಗೆ ವೇಳೆ ನೆಲಕ್ಕೆ ಬಾಳೆ ಹಣ್ಣು, ಬೆಲ್ಲ ಹಾಕಿ ಸೇವಿಸುವ ಸಾಂಪ್ರದಾಯಿಕ ಮಣೇವು ಆಚರಿಸಲಾಗುತ್ತದೆ.

ಯುವಕರು ಟಗರುಗಳನ್ನು ತಂದು ದೇಗುಲದ ಆವರಣದಲ್ಲಿ ಡಿಕ್ಕಿ ಹೊಡೆಸಿ ಖುಷಿ ಪಡುತ್ತಾರೆ. ಆ ಬಳಿಕ ಅತ್ತಿಗೆ ನಾದಿನಿಯರು ಸಾಂಪ್ರದಾಯಿಕ ಡಿಕ್ಕಿ ಹಬ್ಬ ಆಚರಿಸುತ್ತಾರೆ. ಈ ಆಚರಣೆ ಅತ್ತಿಗೆ ನಾದಿನಿಯರ ಪ್ರೀತಿಯ ಅಪ್ಪುಗೆಯ ಹಬ್ಬವಾಗಿದ್ದು, ಪುರಾತನ ಕಾಲದಿಂದಲೂ ಆಚಿರಿಸಿಕೊಂಡು ಬರಲಾಗುತ್ತಿದೆ ಅಂತಾರೆ ಅಧ್ಯಾಪಕ ಡಾ.ಕರಿಯಪ್ಪ ಮಾಳಿಗೆ ಅವರು.

ಇದನ್ನೂ ಓದಿ: ಕೊನೆಗೂ ಮಾಜಿ ಸಿಎಂ ನಿಜಲಿಂಗಪ್ಪ ಮನೆ ಖರೀದಿಸಿದ ಕರ್ನಾಟಕ ಸರ್ಕಾರ

ಇನ್ನು ಈ ಗ್ರಾಮದ ಹೆಣ್ಣುಮಕ್ಕಳು ಅದೆಷ್ಟು ದೂರದ ಊರಿಗೆ ಸೊಸೆಯಾಗಿ ಹೋಗಿದ್ದರೂ ಸಹ ತಪ್ಪದೆ ಈ ಹಬ್ಬಕ್ಕೆ ಬರುತ್ತಾರೆ. ಅತ್ತಿಗೆ, ನಾದಿನಿಯರ ಮಧ್ಯೆ ಏನೇ ವೈಮನಸ್ಸು ಇದ್ದರೂ ಸಹ ಇಂದು ಒಂದಾಗಿ ಹಬ್ಬ ಆಚರಿಸುತ್ತಾರೆ. ಈ ಹಬ್ಬಕ್ಕೆ ಗೈರಾದರೆ ಸಣ್ಣ ತಲೆನೋವು ಬಂದರೂ ಈ ಹಬ್ಬಕ್ಕೆ ಗೈರಾಗಿದ್ದಕ್ಕೆ ಬಂತೆಂಬ ಭಾವನೆ ಮೂಡತ್ತದೆ. ಹೀಗಾಗಿ, ಅತ್ತಿಗೆ ಮತ್ತು ನಾದಿನಿಯರು ಈ ಹಬ್ಬದಲ್ಲಿ ತಪ್ಪದೇ ಪಾಲ್ಗೊಳ್ತಾರೆ ಎಂದು ಸ್ಥಳೀಯರಾದ ಚಂದ್ರಮ್ಮ ಹೇಳಿದ್ದಾರೆ.

ಚಿತ್ರದುರ್ಗದ ಸಿಎನ್ ಮಾಳಿಗೆ ಗ್ರಾಮದಲ್ಲಿ 3 ದಿನ ಕಾಲ ನಡೆದ ಅಹೋಬಲ ನರಸಿಂಹಸ್ವಾಮಿ ಉತ್ಸವಕ್ಕೆ ನಿನ್ನೆ ತೆರೆ ಬಿದ್ದಿದೆ. ಈ ಅಪರೂಪದ ಆಚರಣೆಯ ಮೂಲಕ ಬಾಂಧ್ಯವಗಳು ಮತ್ತಷ್ಟು ಗಟ್ಟಿಗೊಳ್ಳುತ್ತವೆ ಎಂಬುವುದು ಜನರ ನಂಬಿಕೆ ಆಗಿದೆ. ಒಟ್ಟಿನಲ್ಲಿ ಬುಡಕಟ್ಟು ಸಂಸ್ಕೃತಿಯ ಡಿಕ್ಕಿ ಹಬ್ಬ ಆಚರಿಸಿ ಅತ್ತಿಗೆ-ನಾದಿನಿಯರು ಖುಷಿಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ