AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾದಗಿರಿ: ಚಿಕಿತ್ಸೆ ಕೊಡಿಸಲು ಪುತ್ರಿಯನ್ನು ಹೆಗಲ ಮೇಲೆ 8 ಕಿಲೋಮೀಟರ್ ಹೊತ್ತುಕೊಂಡು ಬಂದ ತಂದೆ

ಬಸ್​ಗಳಿಲ್ಲದೆ ಜನ ಸಾಮಾನ್ಯರು ಪಡುವ ಪರದಾಟ ಹೇಳತೀರದಂತಾಗಿದೆ. ಆದರೂ ಆಸ್ಪತ್ರೆಗೆ ಹೋಗಲೇ ಬೇಕಾದ್ದರಿಂದ ಕಿಲೋಮೀಟರ್ ಗಟ್ಟಲೆ ನಡೆದುಕೊಂಡು ಹೋಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗೆ ಜಿಲ್ಲೆಯಲ್ಲೊಬ್ಬರು ಚಿಕಿತ್ಸೆ ಕೊಡಿಸಲು ತನ್ನ ಮಗಳನ್ನು ಹೆಗಲ ಮೇಲೆ ಹೊತ್ತಿಕೊಂಡು ಸುಮಾರು 8 ಕಿಲೋಮೀಟರ್ ನಡೆದು ಆಸ್ಪತ್ರೆಗೆ ಬಂದಿದ್ದಾರೆ.

ಯಾದಗಿರಿ: ಚಿಕಿತ್ಸೆ ಕೊಡಿಸಲು ಪುತ್ರಿಯನ್ನು ಹೆಗಲ ಮೇಲೆ 8 ಕಿಲೋಮೀಟರ್ ಹೊತ್ತುಕೊಂಡು ಬಂದ ತಂದೆ
ಹೆಗಲ ಮೇಲೆ ಮಗಳನ್ನು ಹೊತ್ತುಕೊಂಡು ಬಂದ ತಂದೆ
sandhya thejappa
|

Updated on: May 20, 2021 | 12:13 PM

Share

ಯಾದಗಿರಿ: ಮಹಾಮಾರಿ ಕೊರೊನಾ ಎರಡನೇ ಅಲೆಯ ಆರ್ಭಟ ರಾಜ್ಯದಲ್ಲಿ ಜೋರಾಗಿದೆ. ಹೀಗಾಗಿ ಸೋಂಕನ್ನು ನಿಯಂತ್ರಿಸಲು ಸರ್ಕಾರ ಲಾಕ್​ಡೌನ್​ ಕೂಡಾ ಜಾರಿಗೊಳಿಸಿದೆ. ಇನ್ನು ಲಾಕ್​ಡೌನ್​ ಮುಂದೂಡುವ ಸಾಧ್ಯತೆಯೂ ಇದೆ. ಅಗತ್ಯ ವಸ್ತುಗಳನ್ನು ಖರೀದಿಸಲು ಬೆಳಿಗ್ಗೆ 6 ಗಂಟೆಯಿಂದ ಬೆಳಿಗ್ಗೆ 10 ಗಂಟೆಯವರೆಗೆ ಅವಕಾಶ ನೀಡಿದೆ. ಆದರೆ ಯಾವುದೇ ಬಸ್​ಗಳು, ಇತರೆ ವಾಹನಗಳು ಓಡಾಡದಂತೆ ಸರ್ಕಾರ ಕಠಿಣ ನಿಯಮಗಳನ್ನು ವಿಧಿಸಿದೆ. ಹೀಗಾಗಿ ಜನ ಸಾಮಾನ್ಯರಿಗೆ ಆಸ್ಪತ್ರೆಗೂ ಹೋಗಲು ಪರದಾಡುತ್ತಿದ್ದಾರೆ.

ಆಸ್ಪತ್ರೆಗೆ ಹೋಗಲು ಬಸ್​ಗಳಿಲ್ಲದೆ ಜನ ಸಾಮಾನ್ಯರು ಪಡುವ ಪರದಾಟ ಹೇಳತೀರದಂತಾಗಿದೆ. ಆದರೂ ಆಸ್ಪತ್ರೆಗೆ ಹೋಗಲೇ ಬೇಕಾದ್ದರಿಂದ ಕಿಲೋಮೀಟರ್ ಗಟ್ಟಲೆ ನಡೆದುಕೊಂಡು ಹೋಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗೆ ಜಿಲ್ಲೆಯಲ್ಲೊಬ್ಬರು ಚಿಕಿತ್ಸೆ ಕೊಡಿಸಲು ತನ್ನ ಮಗಳನ್ನು ಹೆಗಲ ಮೇಲೆ ಹೊತ್ತಿಕೊಂಡು ಸುಮಾರು 8 ಕಿಲೋಮೀಟರ್ ನಡೆದು ಆಸ್ಪತ್ರೆಗೆ ಬಂದಿದ್ದಾರೆ. ಪುತ್ರಿ ಅನುಶಾ ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆ ಕೊಡಿಸಲು ತಂದೆ ಮರೇಪ್ಪ ನಡೆದುಕೊಂಡು ಮಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಯಾದಗಿರಿಗೆ ಬಂದಿದ್ದಾರೆ.

ತಂದೆ ಮರೇಪ್ಪ ಯಾದಗಿರಿ ತಾಲೂಕಿನ ಪಗಲಾಪುರ ಗ್ರಾಮದಿಂದ ಯಾದಗಿರಿ ಜಿಲ್ಲಾ ಕೇಂದ್ರಕ್ಕೆ ಮಗಳನ್ನು ಕರೆದುಕೊಂಡು ಬಂದಿದ್ದಾರೆ. ಯಾದಗಿರಿಯಲ್ಲಿ ನಿನ್ನೆಯಿಂದ (ಮೇ 19) ಮೂರು ದಿನಗಳ ಕಾಲ ಕಠಿಣ ಲಾಕ್​ಡೌನ್​ ಹಿನ್ನೆಲೆ ಓಡಾಡುವ ವಾಹನಗಳನ್ನು ಪೊಲೀಸರು ಸೀಜ್ ಮಾಡುತ್ತಾರೆ. ಗಾಡಿಯನ್ನು ಸೀಜ್ ಮಾಡುತ್ತಾರೆಂದು ತಿಳಿದು ಪೊಲೀಸರಿಗೆ ಹೆದರಿ ಬೈಕ್ ಬಿಟ್ಟು ಸುಮಾರು 8 ಕಿಲೋಮೀಟರ್ ಮಗಳನ್ನು ಹೊತ್ತಿಕೊಂಡು ಬಂದಿದ್ದಾರೆ.

ಇದನ್ನೂ ಓದಿ

ಜಿಂದಾಲ್ ಕಂಪನಿ ಸಹಯೋಗದಿಂದ ರಾಜ್ಯದಲ್ಲಿ ಮೊದಲ ಬಾರಿಗೆ 1 ಸಾವಿರ ಆಕ್ಸಿಜನ್ ಬೆಡ್​ಗಳ ಆಸ್ಪತ್ರೆ ಬಳ್ಳಾರಿಯಲ್ಲಿ ಆರಂಭ

ಎರಡು ವರ್ಷದ ನನ್ನ ಮಗನನ್ನು ನನ್ನೊಟ್ಟಿಗೆ ಕರೆದೊಯ್ಯಲು ಅನುಮತಿ ಕೊಡಿ: ಸಾನಿಯಾ ಮಿರ್ಜಾ

(A Yadgir father carrying his daughter on shoulder for 8 kilometer for treatment)

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?