AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬ್ಯುಲೆನ್ಸ್ ವಾಹನ ತೊಳೆಯಲು ನೀರಿಗಿಳಿದಿದ್ದ ಯುವಕ ಜಲ ಸಮಾಧಿ – ಟ್ರಾಕ್ಟರ್​ಗೆ ಬೈಕ್​ ಡಿಕ್ಕಿ; ಇಬ್ಬರು ಸವಾರರ ಸಾವು

ವಾಹನ ತೊಳೆಯಲೆಂದು ಶಿರಮಗೊಂಡನ ಹಳ್ಳಿಯ ಭದ್ರಾ ಕಾಲುವೆಗೆ ಆಂಬ್ಯುಲೆನ್ಸ್ ಚಾಲಕ ವಿಜಯ್(25) ಇಳಿದಿದ್ದರು. ಅಚಾನಕ್​ ಆಗಿ ನೀರಿನಲ್ಲಿ ಮುಳುಗಿ ವಿಜಯ್​ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಜೊತೆಗಿದ್ದ ಸ್ನೇಹಿತ ವಿಜಯ್​ ಶವವನ್ನು ನೀರಿನಿಂದ ಮೇಲೆತ್ತಿದ್ದಾರೆ. ಇನ್ನೊಂದೆಡೆ, ಟ್ರಾಕ್ಟರ್​ ಮತ್ತು ಬೈಕ್​ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್​ ಸವಾರರಿಬ್ಬರು ಬಲಿಯಾಗಿದ್ದಾರೆ. ಘಟನೆ ಚಿತ್ರದುರ್ಗದ ಅವಳಿಗಟ್ಟಿ ಬಳಿ ನಡೆದಿದೆ.

ಆಂಬ್ಯುಲೆನ್ಸ್ ವಾಹನ ತೊಳೆಯಲು ನೀರಿಗಿಳಿದಿದ್ದ ಯುವಕ ಜಲ ಸಮಾಧಿ - ಟ್ರಾಕ್ಟರ್​ಗೆ ಬೈಕ್​ ಡಿಕ್ಕಿ; ಇಬ್ಬರು ಸವಾರರ ಸಾವು
ಆಂಬ್ಯುಲೆನ್ಸ್ ವಾಹನ ತೊಳೆಯಲು ನೀರಿಗಿಳಿದಿದ್ದ ವಿಜಯ್​ ನೀರು ಪಾಲು.. ವಿಜಯ್​ಗಾಗಿ ಸ್ನೇಹಿತರ ಪರದಾಟ
Follow us
shruti hegde
|

Updated on: Mar 05, 2021 | 12:06 PM

ಚಿತ್ರದುರ್ಗ: ಟ್ರಾಕ್ಟರ್​ ಮತ್ತು ಬೈಕ್​ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್​ ಸವಾರರಿಬ್ಬರು ಬಲಿಯಾಗಿದ್ದಾರೆ. ಘಟನೆ ಅವಳಿಗಟ್ಟಿ ಬಳಿ ನಡೆದಿದೆ. ಇನ್ನೊಂದೆಡೆ, ಆಂಬ್ಯುಲೆನ್ಸ್ ವಾಹನ ತೊಳೆಯಲು ನೀರಿಗಿಳಿದಿದ್ದ ಯುವಕ ಮುಳುಗಿ ಸಾವನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ತಾಲೂಕು ಶಿರಮಗೊಂಡನಹಳ್ಳಿಯ ಭದ್ರಾ ಕಾಲುವೆಯಲ್ಲಿ ಘಟನೆ ನಡೆದಿದ್ದು, ಕಾಲುವೆಯಲ್ಲಿ ಮುಳುಗಿ ಆಂಬುಲೆನ್ಸ್ ಚಾಲಕ ವಿಜಯ್ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಅವಳಿಹಟ್ಟಿ ಬಳಿ ಟ್ರ್ಯಾಕ್ಟರ್, ಬೈಕ್ ಮಧ್ಯೆ ಡಿಕ್ಕಿ ಇಬ್ಬರ ಸಾವು ಟ್ರ್ಯಾಕ್ಟರ್ ಮತ್ತು ಬೈಕ್ ಡಿಕ್ಕಿಯಾದ ರಭಸಕ್ಕೆ, ಬೈಕ್​ ಸವಾರರಾದ ಚಿತ್ತಪ್ಪ(24) ಹಾಗೂ ಮಧು(25) ದುರ್ಮರಣ ಹೊಂದಿದ್ದಾರೆ. ಓರ್ವನಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ದಾವಣಗೆರೆಯಲ್ಲಿ ವಾಹನ ತೊಳೆಯಲು ಹೋದ ಯುವಕ ಭದ್ರಾ ಚಾನಲ್​ನಲ್ಲಿ ಮುಳುಗಿ ಸಾವು ವಾಹನ ತೊಳೆಯಲೆಂದು ಶಿರಮಗೊಂಡನ ಹಳ್ಳಿಯ ಭದ್ರಾ ಕಾಲುವೆಗೆ ಆಂಬ್ಯುಲೆನ್ಸ್ ಚಾಲಕ ವಿಜಯ್(25) ಇಳಿದಿದ್ದರು. ಅಚಾನಕ್​ ಆಗಿ ನೀರಿನಲ್ಲಿ ಮುಳುಗಿ ವಿಜಯ್​ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಜೊತೆಗಿದ್ದ ಸ್ನೇಹಿತ ವಿಜಯ್​ ಶವವನ್ನು ನೀರಿನಿಂದ ಮೇಲೆತ್ತಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯುವಕನ ಸಾವಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿಜಯ್​ ಹಳೇ ಬೆಳವನೂರು ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ನೆಲಮಂಗಲದಲ್ಲಿ ಹಸುವಿಗೆ ಡಿಕ್ಕಿ ತಪ್ಪಿಸುವಾಗ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೆದ್ದಾರಿಯಲ್ಲಿ ಅಡ್ಡ ಬಂದ ಹಸುವನ್ನು ಅಪಘಾತದಿಂದ ರಕ್ಷಿಸುವ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಲ್ಯಾಂಕೊ ಟೋಲ್‌ ರಸ್ತೆಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಗಂಗಮ್ಮ(45),ಅನುಷ(19),ಲೀಲಾವತಿ (35) ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

bengaluru accident

ನೆಲಮಂಗಲದಲ್ಲಿ ಹಸುವಿಗೆ ಡಿಕ್ಕಿ ತಪ್ಪಿಸುವಾಗ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ಚಾಲಕನಿಂದ ಸರಣಿ ಅಪಘಾತ: ಬೈಕ್ ಸೇರಿದಂತೆ 5 ವಾಹನ‌ ಜಖಂ

ಇದನ್ನೂ ಓದಿ: ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಭೀಕರ ಅಪಘಾತ: ಟ್ಯಾಂಕರ್ ಲಾರಿಗೆ ಸಿಲುಕಿ ದಿನಗೂಲಿ ನೌಕರ ಸ್ಥಳದಲ್ಲೇ ಸಾವು

Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ