AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬ್ಯುಲೆನ್ಸ್ ವಾಹನ ತೊಳೆಯಲು ನೀರಿಗಿಳಿದಿದ್ದ ಯುವಕ ಜಲ ಸಮಾಧಿ – ಟ್ರಾಕ್ಟರ್​ಗೆ ಬೈಕ್​ ಡಿಕ್ಕಿ; ಇಬ್ಬರು ಸವಾರರ ಸಾವು

ವಾಹನ ತೊಳೆಯಲೆಂದು ಶಿರಮಗೊಂಡನ ಹಳ್ಳಿಯ ಭದ್ರಾ ಕಾಲುವೆಗೆ ಆಂಬ್ಯುಲೆನ್ಸ್ ಚಾಲಕ ವಿಜಯ್(25) ಇಳಿದಿದ್ದರು. ಅಚಾನಕ್​ ಆಗಿ ನೀರಿನಲ್ಲಿ ಮುಳುಗಿ ವಿಜಯ್​ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಜೊತೆಗಿದ್ದ ಸ್ನೇಹಿತ ವಿಜಯ್​ ಶವವನ್ನು ನೀರಿನಿಂದ ಮೇಲೆತ್ತಿದ್ದಾರೆ. ಇನ್ನೊಂದೆಡೆ, ಟ್ರಾಕ್ಟರ್​ ಮತ್ತು ಬೈಕ್​ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್​ ಸವಾರರಿಬ್ಬರು ಬಲಿಯಾಗಿದ್ದಾರೆ. ಘಟನೆ ಚಿತ್ರದುರ್ಗದ ಅವಳಿಗಟ್ಟಿ ಬಳಿ ನಡೆದಿದೆ.

ಆಂಬ್ಯುಲೆನ್ಸ್ ವಾಹನ ತೊಳೆಯಲು ನೀರಿಗಿಳಿದಿದ್ದ ಯುವಕ ಜಲ ಸಮಾಧಿ - ಟ್ರಾಕ್ಟರ್​ಗೆ ಬೈಕ್​ ಡಿಕ್ಕಿ; ಇಬ್ಬರು ಸವಾರರ ಸಾವು
ಆಂಬ್ಯುಲೆನ್ಸ್ ವಾಹನ ತೊಳೆಯಲು ನೀರಿಗಿಳಿದಿದ್ದ ವಿಜಯ್​ ನೀರು ಪಾಲು.. ವಿಜಯ್​ಗಾಗಿ ಸ್ನೇಹಿತರ ಪರದಾಟ
shruti hegde
|

Updated on: Mar 05, 2021 | 12:06 PM

Share

ಚಿತ್ರದುರ್ಗ: ಟ್ರಾಕ್ಟರ್​ ಮತ್ತು ಬೈಕ್​ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್​ ಸವಾರರಿಬ್ಬರು ಬಲಿಯಾಗಿದ್ದಾರೆ. ಘಟನೆ ಅವಳಿಗಟ್ಟಿ ಬಳಿ ನಡೆದಿದೆ. ಇನ್ನೊಂದೆಡೆ, ಆಂಬ್ಯುಲೆನ್ಸ್ ವಾಹನ ತೊಳೆಯಲು ನೀರಿಗಿಳಿದಿದ್ದ ಯುವಕ ಮುಳುಗಿ ಸಾವನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ತಾಲೂಕು ಶಿರಮಗೊಂಡನಹಳ್ಳಿಯ ಭದ್ರಾ ಕಾಲುವೆಯಲ್ಲಿ ಘಟನೆ ನಡೆದಿದ್ದು, ಕಾಲುವೆಯಲ್ಲಿ ಮುಳುಗಿ ಆಂಬುಲೆನ್ಸ್ ಚಾಲಕ ವಿಜಯ್ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಅವಳಿಹಟ್ಟಿ ಬಳಿ ಟ್ರ್ಯಾಕ್ಟರ್, ಬೈಕ್ ಮಧ್ಯೆ ಡಿಕ್ಕಿ ಇಬ್ಬರ ಸಾವು ಟ್ರ್ಯಾಕ್ಟರ್ ಮತ್ತು ಬೈಕ್ ಡಿಕ್ಕಿಯಾದ ರಭಸಕ್ಕೆ, ಬೈಕ್​ ಸವಾರರಾದ ಚಿತ್ತಪ್ಪ(24) ಹಾಗೂ ಮಧು(25) ದುರ್ಮರಣ ಹೊಂದಿದ್ದಾರೆ. ಓರ್ವನಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ದಾವಣಗೆರೆಯಲ್ಲಿ ವಾಹನ ತೊಳೆಯಲು ಹೋದ ಯುವಕ ಭದ್ರಾ ಚಾನಲ್​ನಲ್ಲಿ ಮುಳುಗಿ ಸಾವು ವಾಹನ ತೊಳೆಯಲೆಂದು ಶಿರಮಗೊಂಡನ ಹಳ್ಳಿಯ ಭದ್ರಾ ಕಾಲುವೆಗೆ ಆಂಬ್ಯುಲೆನ್ಸ್ ಚಾಲಕ ವಿಜಯ್(25) ಇಳಿದಿದ್ದರು. ಅಚಾನಕ್​ ಆಗಿ ನೀರಿನಲ್ಲಿ ಮುಳುಗಿ ವಿಜಯ್​ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ. ಜೊತೆಗಿದ್ದ ಸ್ನೇಹಿತ ವಿಜಯ್​ ಶವವನ್ನು ನೀರಿನಿಂದ ಮೇಲೆತ್ತಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯುವಕನ ಸಾವಿನ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿಜಯ್​ ಹಳೇ ಬೆಳವನೂರು ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ನೆಲಮಂಗಲದಲ್ಲಿ ಹಸುವಿಗೆ ಡಿಕ್ಕಿ ತಪ್ಪಿಸುವಾಗ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೆದ್ದಾರಿಯಲ್ಲಿ ಅಡ್ಡ ಬಂದ ಹಸುವನ್ನು ಅಪಘಾತದಿಂದ ರಕ್ಷಿಸುವ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ಲ್ಯಾಂಕೊ ಟೋಲ್‌ ರಸ್ತೆಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಗಂಗಮ್ಮ(45),ಅನುಷ(19),ಲೀಲಾವತಿ (35) ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

bengaluru accident

ನೆಲಮಂಗಲದಲ್ಲಿ ಹಸುವಿಗೆ ಡಿಕ್ಕಿ ತಪ್ಪಿಸುವಾಗ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ಚಾಲಕನಿಂದ ಸರಣಿ ಅಪಘಾತ: ಬೈಕ್ ಸೇರಿದಂತೆ 5 ವಾಹನ‌ ಜಖಂ

ಇದನ್ನೂ ಓದಿ: ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಭೀಕರ ಅಪಘಾತ: ಟ್ಯಾಂಕರ್ ಲಾರಿಗೆ ಸಿಲುಕಿ ದಿನಗೂಲಿ ನೌಕರ ಸ್ಥಳದಲ್ಲೇ ಸಾವು

Follow Us
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ