AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗಿನ ಭಾವೀ ಪೈಲಟ್ ಗುಜರಾತ್​ನಲ್ಲಿ ಆತ್ಮಹತ್ಯೆ: ಸಾವಿನ ಸುತ್ತ ಅನುಮಾನದ ಹುತ್ತ

ಮೇ ತಿಂಗಳಲ್ಲೇ ತರಬೇತಿ ಅಂತ್ಯವಾಗಿ ಈತ ಪೈಲೆಟ್ ಆಗಿ ಹೊರ ಬರಬೇಕಿತ್ತು. ಆದರೆ ಲಾಕ್ಡೌನ್ ಕಾರಣದಿಂದಾಗಿ ತರಬೇತಿ ಅವಧಿಯೂ ಮುಂದೂಡಿಕೆಯಾಗಿತ್ತು. ಹಾಗಾಗಿ ತರಬೇತಿ ಮುಗಿಯಲೂ ಇನ್ನೂ ಎರಡು ತಿಂಗಳಷ್ಟೇ ಬಾಕಿ ಉಳಿದಿತ್ತು. ತರಬೇತಿ ಮುಗಿಸಿ ಆದಷ್ಟು ಬೇಗನೆ ಬರುವುದಾಗಿ ತಮ್ಮ ಪೋಷಕರ ಜೊತೆ ಹೇಳುತ್ತಿದ್ದನಂತೆ.

ಕೊಡಗಿನ ಭಾವೀ ಪೈಲಟ್ ಗುಜರಾತ್​ನಲ್ಲಿ ಆತ್ಮಹತ್ಯೆ: ಸಾವಿನ ಸುತ್ತ ಅನುಮಾನದ ಹುತ್ತ
ಯುವಕ ಶಿಬಿ ಬೋಪಯ್ಯ
TV9 Web
| Edited By: |

Updated on:Jun 05, 2021 | 2:43 PM

Share

ಕೊಡಗು: ಭವಿಷ್ಯದಲ್ಲಿ ಪೈಲೆಟ್ ಆಗಿ ಆಕಾಶದಲ್ಲಿ ಹಾರಾಡಬೇಕು ಅಂತ ಕನಸು ಕಂಡಿದ್ದ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ ನಡೆದಿದೆ. ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದ ನಿವಾಸಿ ಶಿಬಿ ಬೋಪಯ್ಯ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಅಹಮದಾಬಾದ್​ನ ಏರೋನಾಟಿಕಲ್ ಟ್ರೈನಿಂಗ್ ಸೆಂಟರ್​ನಲ್ಲಿ ಪೈಲೆಟ್ ತರಬೇತಿ ಪಡೆಯುತ್ತಿದ್ದ.

ಮೇ ತಿಂಗಳಲ್ಲೇ ತರಬೇತಿ ಅಂತ್ಯವಾಗಿ ಈತ ಪೈಲೆಟ್ ಆಗಿ ಹೊರ ಬರಬೇಕಿತ್ತು. ಆದರೆ ಲಾಕ್​ಡೌನ್​ ಕಾರಣದಿಂದಾಗಿ ತರಬೇತಿ ಅವಧಿಯೂ ಮುಂದೂಡಿಕೆಯಾಗಿತ್ತು. ಹಾಗಾಗಿ ತರಬೇತಿ ಮುಗಿಯಲೂ ಇನ್ನೂ ಎರಡು ತಿಂಗಳಷ್ಟೇ ಬಾಕಿ ಉಳಿದಿತ್ತು. ತರಬೇತಿ ಮುಗಿಸಿ ಆದಷ್ಟು ಬೇಗನೆ ಬರುವುದಾಗಿ ತಮ್ಮ ಪೋಷಕರ ಜೊತೆ ಹೇಳುತ್ತಿದ್ದನಂತೆ. ಪ್ರತಿದಿನ ರಾತ್ರಿ ಊಟದ ಬಳಿಕ ತಂದೆ ತಾಯಿ ಜೊತೆ ವೀಡಿಯೋಕಾಲ್ ಮಾಡಿ ಮಾತನಾಡಿಯೇ ಮಲಗುತ್ತಿದ್ದನಂತೆ.

ಆದರೆ ಮೊನ್ನೆ ರಾತ್ರಿ ಆತನ ಕರೆ ಬಂದಿರಲಿಲ್ಲ. ಪೋಷಕರು ಕರೆ ಮಾಡಿದರೂ ಸ್ವೀಕರಿಸಲಿಲ್ಲವಂತೆ. ಇದೇ ವೇಳೆ ಅಹಮದಾಬಾದ್ ಪೊಲೀಸರು ಬೆಂಗಳೂರಿನಲ್ಲಿರುವ ಶಿಬಿಯ ಸಹೋದರಿಗೆ ಕರೆ ಮಾಡಿ ಶಿಬಿ ಮರಕ್ಕೆ ನೇಣು ಹಾಕಿಕೊಂಡಿರುವ ಸುದ್ದಿಯನ್ನು ಹೇಳಿದ್ದಾರೆ. ಸಹೋದರನ ಸಾವಿನ ಸುದ್ದಿ ಬರಸಿಡಿಲಿನಂತೆ ಬಂದಪ್ಪಳಿಸಿದೆ. ತಕ್ಷಣವೇ ತಂದೆ ತಾಯಿಗೆ ವಿಷಯ ತಿಳಿಸಿರುವ ಸಹೋದರಿ ಇದೀಗ ಅಹಮದಾಬಾದ್ಗೆ ತೆರಳಿದ್ದಾರೆ. ತಮ್ಮ ಮಗನ ಸಾವಿನ ಸುದ್ದಿ ಸುಳ್ಳಾಗಿರಲಿ ಅಂತ ಮನೆಯವರು ಪ್ರಾರ್ಥಿಸುತ್ತಿದ್ದಾರೆ. ಶಿಬಿ ಮೊನ್ನೆಯವರೆಗೂ ಸಹಜವಾಗಿಯೇ ಇದ್ದನಂತೆ. ಹಾಗಾಗಿ ಈತನ ಸಾವಿನ ಸುತ್ತ ಇದೀಗ ಹಲವು ಅನುಮಾನಗಳು ಕಾಡುತ್ತಿವೆ. ಸದ್ಯ ಅಹಮದಾಬಾದ್ ಪೊಲೀಸರು ತನಿಖೆ ನಡೆಸುತ್ತಿದ್ದು, ಸತ್ಯ ಹೊರಬರಬೇಕಿದೆ.

ಇದನ್ನೂ ಓದಿ

ಕೊರೊನಾ ಭಯದಿಂದಲೇ ಇಡೀ ಕುಟುಂಬ ನಾಶ, ಜ್ವರ ಕಾಣಿಸಿಕೊಂಡಿದಕ್ಕೆ ಎಲ್ಲರೂ ಆತ್ಮಹತ್ಯೆಗೆ ಶರಣು

ಉತ್ತರ ಪ್ರದೇಶದಲ್ಲಿ ನಾಯಕತ್ವ ಬದಲಾವಣೆ?..ಊಹಾಪೋಹಗಳಿಗೆ ತೆರೆ; ಪ್ರಮುಖ ವ್ಯಕ್ತಿಯೊಬ್ಬರ ಪ್ರವೇಶ ನಿಶ್ಚಿತ !

(A young man who was training as a pilot has committed suicide in Gujarat)

Published On - 10:52 am, Sat, 5 June 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?