AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur News: ಸ್ನೇಹಿತನ ಕಿರುಕುಳಕ್ಕೆ ಪ್ರಾಣಬಿಟ್ಟ, ಡೆತ್ ನೋಟ್ ಪತ್ತೆ

ಚಿಕ್ಕಬಳ್ಳಾಪುರದಲ್ಲಿ ಯುವಕ ಆತ್ಮಹತ್ಯೆ, ರಾಯಚೂರಿನಲ್ಲಿ ಮಹಿಳೆ ಸಾವು, ಮೈಸೂರಿನಲ್ಲಿ ಮಣ್ಣು ಕುಸಿದು ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ. ಈ ಎಲ್ಲಾ ಸುದ್ದಿ ವಿವರ ಇಲ್ಲಿದೆ.

Chikkaballapur News: ಸ್ನೇಹಿತನ ಕಿರುಕುಳಕ್ಕೆ ಪ್ರಾಣಬಿಟ್ಟ, ಡೆತ್ ನೋಟ್ ಪತ್ತೆ
ಪೃಥ್ವಿರಾಜ್ ಆತ್ಮಹತ್ಯೆಗೆ ಶರಣಾದ ಯುವಕ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jul 17, 2023 | 9:36 AM

Share

ಚಿಕ್ಕಬಳ್ಳಾಪುರ, (ಜುಲೈ 17): ಸಾಲಗಾರನ ಕಿರುಕುಳಕ್ಕೆ ಬೇಸತ್ತು ಯುವಕನೋರ್ವ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಉಡಮಲೊಡು ಗ್ರಾಮದಲ್ಲಿ ನಡೆದಿದೆ. ಹೆಚ್.ಕೆ.ಪೃಥ್ವಿರಾಜ್(26) ಆತ್ಮಹತ್ಯೆಗೆ ಶರಣಾದ ಯುವಕ. ಮನೆಯಲ್ಲೇ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಡ್ಡಿ ಸಮೇತ ಕೈಸಾಲ ವಾಪಸ್ ನೀಡುವಂತೆ ಸ್ನೇಹಿತನ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಡೆತ್​ನೋಟ್​ ಸಹ ಪತ್ತೆಯಾಗಿದ್ದು. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿದ್ಯುತ್ ಪ್ರವಹಿಸಿ ಮಹಿಳೆ ಸಾವು

ರಾಯಚೂರು: ವಿದ್ಯುತ್ ಪ್ರವಹಿಸಿ ಮಹಿಳೆ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕೋಣಚಪ್ಪಳಿ ಗ್ರಾಮದಲ್ಲಿ ನಡೆದಿದೆ. ನಿನ್ನೆ (ಜುಲೈ 16) ಸಂಜೆ ಮಳೆಯಾದ ಹಿನ್ನೆಲೆ ಟಿನ್ ಶೆಡ್​ಗೆ ವಿದ್ಯುತ್​ ಪ್ರವಹಿಸಿ ಲಕ್ಷ್ಮೀ(36) ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮನೆ ಬಳಿಯ ವಿದ್ಯುತ್ ಲೈನ್ ಮೂಲಕ ಟಿನ್ ಶೆಡ್ ಗೆ ವಿದ್ಯುತ್ ಪಸರಿಸಿದ್ದು, ಅದೇ ವೇಳೆ ಹೊಲದಿಂದ ಬಂದು ಮನೆಯೊಳಗೆ ಹೋಗುತ್ತಿದ್ದಂತೆ ವಿದ್ಯುತ್​ ತಗುಲಿದೆ.

ಮಣ್ಣು ಕುಸಿದು ಓರ್ವ ಸಾವು

ಮೈಸೂರು: ಕೇಸಿಂಗ್ ಪೈಪ್ ಅಳವಡಿಸುವಾಗ ಮಣ್ಣು ಕುಸಿದು ಓರ್ವ ಸಾವನ್ನಪ್ಪಿದ್ದು ಇಬ್ಬರಿಗೆ ಗಾಯವಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಸುಜಲೂರು ಗ್ರಾಮದಲ್ಲಿ‌ ನಡೆದಿದೆ. ಮಹೇಶ್(34) ಮೃತ ದುರ್ದೈವಿಯಾಗಿದ್ದು, ನಿಂಗಪ್ಪ, ಮಾಧು ಎಂಬುವರಿಗೆ ಗಾಯಗಳಾಗಿವೆ. ಕೊಳವೆ ಬಾವಿಯ ಕೇಸಿಂಗ್ ಪೈಪ್ ಶಿಥಿಲಗೊಂಡಿದ್ದ ಹಿನ್ನೆಲೆಯಲ್ಲಿ ನಿಂಗಪ್ಪ ಜಮೀನಿನಲ್ಲಿ ಪೈಪ್ ಅಳವಡಿಸುವಾಗ ಈ ದುರಂತ ಸಂಭವಿಸಿದೆ. ಗಾಯಾಳು ನಿಂಗಪ್ಪ, ಮಾಧುಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ಕರ್ನಾಟಕ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ