AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ನೋಂದಣಿಗೂ ಆಧಾರ್ ಲಿಂಕ್; ಭಾನುವಾರವೂ ತೆರೆದಿರಲಿದೆ ಸಬ್ ರಿಜಿಸ್ಟ್ರಾರ್ ಕಚೇರಿ

ನನ್ನ ಆಸ್ತಿ ಎಂಬ ಯೋಜನೆಯನ್ನು ನನ್ನ ಭೂಮಿ, ನನ್ನ ಗುರುತು ಎಂಬ ಶೀರ್ಷಿಕೆಯಡಿ ಆಧಾರ್ ಕಡ್ಡಾಯ ವಿಚಾರವಾಗಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಆಸ್ತಿ ನೋಂದಣಿ ವೇಳೆ ಆಧಾರ್ ಪಡೆಯುವ ಸೇವೆ ಆರಂಭ ಮಾಡುತ್ತೇವೆ. ಆಧಾರ್ ಕಡ್ಡಾಯ ಮಾಡುವುದಕ್ಕೆ ಆಗುವುದಿಲ್ಲ, ಆದರೆ ನೋಂದಣಿ ಮಾಡಬೇಕಾಗುತ್ತದೆ ಎಂದರು.

ಆಸ್ತಿ ನೋಂದಣಿಗೂ ಆಧಾರ್ ಲಿಂಕ್; ಭಾನುವಾರವೂ ತೆರೆದಿರಲಿದೆ ಸಬ್ ರಿಜಿಸ್ಟ್ರಾರ್ ಕಚೇರಿ
ಆಸ್ತಿ ನೋಂದಣಿ ವೇಳೆ ಆಧಾರ್ ಸ್ವೀಕಾರ ಮತ್ತು ಭಾನುವಾರವೂ ತೆರೆದಿರಲಿದೆ ಸಬ್ ರಿಜಿಸ್ಟ್ರಾರ್ ಕಚೇರಿ
Anil Kalkere
| Edited By: Rakesh Nayak Manchi|

Updated on:Mar 12, 2024 | 6:03 PM

Share

ಬೆಂಗಳೂರು, ಮಾ.12: ನಕಲಿ ದಾಖಲೆಗಳನ್ನು ಸೃಷ್ಟಿಸಿ ಇತರರ ಆಸ್ತಿಯನ್ನು ಕಬಳಿಕೆ ಮಾಡುವ ಪ್ರಕರಣಗಳನ್ನು ತಡೆಯಲು ಆಸ್ತಿಗಳ ನೋಂದಣಿಗೆ (Property Registration) ಆಧಾರ್ (Aadhaar) ದೃಢೀಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda), ನನ್ನ ಆಸ್ತಿ ಎಂಬ ಯೋಜನೆಯನ್ನ ನನ್ನ ಭೂಮಿ, ನನ್ನ ಗುರುತು ಎಂಬ ಶೀರ್ಷಿಕೆಯಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಆಸ್ತಿ ನೋಂದಣಿ ವೇಳೆ ಆಧಾರ್ ಪಡೆಯುವ ಸೇವೆ ಆರಂಭ ಮಾಡುತ್ತೇವೆ ಎಂದರು.

ಕಡ್ಡಾಯ ಮಾಡುವುದಕ್ಕೆ ಆಗುವುದಿಲ್ಲ, ಆದರೆ ನೋಂದಣಿ ಮಾಡಬೇಕಾಗುತ್ತದೆ. ನೋಂದಣಿ ಸಮಯದಲ್ಲೂ ಆಧಾರ್ ನಂಬರ್ ಕೇಳುತ್ತೇವೆ. ಆಧಾರ್ ಜೋಡಣೆ ಮಾಡುವುದರಿಂದ ನಕಲು ತಡೆಯಬಹುದು. ಸುಪ್ರೀಂ ಕೋರ್ಟ್ ಪ್ರಕಾರ ಕಡ್ಡಾಯ ಮಾಡಲು‌ ಆಗುವುದಿಲ್ಲ. ಜಾಗರೂಕತೆಯಿಂದ ರಿಜಿಸ್ಟರ್ ಮಾಡಲು ಅನುಕೂಲ‌ ಆಗಲಿದೆ ಎಂದರು.

ಇದನ್ನೂ ಓದಿ: ಮನೆ ಕಟ್ಟುವವರಿಗೆ ನಂಬಿಕೆ ರಕ್ಷೆವಿತರಣೆ: ಬಿಬಿಎಂಪಿ ಹೊಸ ಆಸ್ತಿ ತೆರಿಗೆ ಪದ್ಧತಿ ಜಾರಿ

ಖಾತೆ ಮಾಡುವಾಗಲೂ ಆಧಾರ್ ಕಾರ್ಡ್​ ಅಳವಡಿಸಿಕೊಳ್ಳುತ್ತೇವೆ. ಮಹಾನಗರಗಲ್ಲಿ ಕೆಲಸಕ್ಕೆ ಹೋಗುವವರು ಇದ್ದಾರೆ. ನೋಂದಣಿ ಮಾಡಿಕೊಳ್ಳಲು ಹಲವರಿಗೆ ಕಷ್ಟ ಆಗುತ್ತದೆ. ಜನರ ಅನುಕೂಲಕ್ಕಾಗಿಯೇ ಮತ್ತೊಷ್ಟು ಜನರ ಆಡಳಿತ ನೀಡಲಿದ್ದೇವೆ ಎಂದರು.

ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್

ರಜಾದಿನ ಭಾನುವಾರವೂ ಸಬ್ ರಿಜಿಸ್ಟ್ರಾರ್ ಕಚೇರಿ ತೆರೆಯಲು ನಿರ್ಧಾರ ಮಾಡಲಾಗಿದೆ ಎಂದು ವಿಧಾನಸೌಧದಲ್ಲಿ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಪ್ರತಿ ಜಿಲ್ಲೆಯಲ್ಲೂ ಭಾನುವಾರ ಒಂದೊಂದು ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್ ಮಾಡಲಾಗುವುದು. ಸದ್ಯ ಕಾರ್ಪೊರೇಷನ್‌ ಇರುವ ಜಿಲ್ಲೆಗಳಲ್ಲಿ ಸಬ್ ರಿಜಿಸ್ಟ್ರಾರ್ ಕಚೇರಿ ಓಪನ್‌ ಇದೆ. ಏಪ್ರಿಲ್ ನಂತರ ಮಹಾನಗರಗಳ ವ್ಯಾಪ್ತಿಯಲ್ಲೂ ಯೋಜನೆ ಜಾರಿ ಮಾಡುತ್ತೇವೆ. ಭಾನುವಾರ ಕೆಲಸ ಮಾಡಿದವರಿಗೆ ಮಂಗಳವಾರ ರಜೆ ನೀಡುವ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:01 pm, Tue, 12 March 24

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ