AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ!

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್​ ಸಮೀಪ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ವಿಮಾನ ನಿಲ್ದಾಣಕ್ಕೆ ದೌಡಾಯಿಸಿದ ಮಂಗಳೂರು ಪೊಲೀಸರು ಪತ್ತೆಯಾದ ಬ್ಯಾಗ್ ಹೊರತಂದು ಬಾಂಬ್ ನಿಷ್ಕ್ರಿಯದಳ, ಶ್ವಾನ ದಳದಿಂದ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಲ್ಯಾಪ್​ಟಾಪ್​ ಬ್ಯಾಗ್ ಎಂಬುದು ಪತ್ತೆಯಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್​ ಆಯುಕ್ತ ಹರ್ಷ ಭೇಟಿ ನೀಡಿ ಪರಿಶೀಸಿದ್ದಾರೆ. ಪತ್ತೆಯಾಗಿರುವ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಇದೆ ಎಂಬ ಅನುಮಾನ ಉಂಟಾಗಿದೆ. ಹೀಗಾಗಿ ಬಾಂಬ್​ ನಿಷ್ಕ್ರಿಯಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬ್ಯಾಗ್​ ಅನ್ನು ಸುರಕ್ಷಿತ […]

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ!
ಸಾಧು ಶ್ರೀನಾಥ್​
|

Updated on:Jan 20, 2020 | 2:51 PM

Share

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್​ ಸಮೀಪ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ವಿಮಾನ ನಿಲ್ದಾಣಕ್ಕೆ ದೌಡಾಯಿಸಿದ ಮಂಗಳೂರು ಪೊಲೀಸರು ಪತ್ತೆಯಾದ ಬ್ಯಾಗ್ ಹೊರತಂದು ಬಾಂಬ್ ನಿಷ್ಕ್ರಿಯದಳ, ಶ್ವಾನ ದಳದಿಂದ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಲ್ಯಾಪ್​ಟಾಪ್​ ಬ್ಯಾಗ್ ಎಂಬುದು ಪತ್ತೆಯಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್​ ಆಯುಕ್ತ ಹರ್ಷ ಭೇಟಿ ನೀಡಿ ಪರಿಶೀಸಿದ್ದಾರೆ. ಪತ್ತೆಯಾಗಿರುವ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಇದೆ ಎಂಬ ಅನುಮಾನ ಉಂಟಾಗಿದೆ. ಹೀಗಾಗಿ ಬಾಂಬ್​ ನಿಷ್ಕ್ರಿಯಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬ್ಯಾಗ್​ ಅನ್ನು ಸುರಕ್ಷಿತ ಸ್ಥಳದಲ್ಲಿರಿಸಿ ಪೊಲೀಸರು ಸ್ಥಳದಿಂದ ದೂರ ಸರಿದಿದ್ದಾರೆ.

ಇನ್ನು ವಿಐಪಿಗಳ ವಾಹನಗಳು ಬಂದು ನಿಲುಗಡೆಯಾಗುವ ಸ್ಥಳದಲ್ಲಿ ಬ್ಯಾಗ್ ಪತ್ತೆಯಾಗಿದೆ. ಆಟೋದಲ್ಲಿ ಬಂದ ಇಬ್ಬರು ಲ್ಯಾಪ್​ಟಾಪ್​ ಬ್ಯಾಗ್ ಇಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಸಿಸಿಟಿವಿ ದೃಶ್ಯವನ್ನು ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

ವಾಹನಗಳ ಮಾರ್ಗ ಬದಲಾವಣೆ: ಮೊದಲು ಬಾಂಬ್ ರೀತಿಯ ವಸ್ತು ನೋಡಿದ್ದು ಭದ್ರತಾ ಸಿಬ್ಬಂದಿ. ಬಳಿಕ ಉನ್ನಾತಾಧಿಕಾರಿಗಳಿಗೆ ಮಾಹಿತಿ ರವಾನೆ ಮಾಡಲಾಗಿದೆ. ನಂತರ ನಿರಂತರ ಕಾರ್ಯಾಚರಣೆ ಮಾಡುತ್ತಿದ್ದು, ಸದ್ಯ ಏರ್​ಪೋರ್ಟ್​ ಕಡೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ತಾತ್ಕಾಲಿಕವಾಗಿ ಎಲ್ಲ ರಸ್ತೆ ಮಾರ್ಗಗಳ ಬದಲಾವಣೆ ಮಾಡಿದ್ದಾರೆ. ಪ್ರಯಾಣಿಕರ ಸುರಕ್ಷತೆಗಾಗಿ ಏರ್​ಪೋರ್ಟ್​ ಆವರಣದಲ್ಲಿ ಪೊಲೀಸರ ಸರ್ಪಗಾವಲು ಹಾಕಿದ್ದಾರೆ.

Published On - 1:17 pm, Mon, 20 January 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ