AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ!

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್​ ಸಮೀಪ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ವಿಮಾನ ನಿಲ್ದಾಣಕ್ಕೆ ದೌಡಾಯಿಸಿದ ಮಂಗಳೂರು ಪೊಲೀಸರು ಪತ್ತೆಯಾದ ಬ್ಯಾಗ್ ಹೊರತಂದು ಬಾಂಬ್ ನಿಷ್ಕ್ರಿಯದಳ, ಶ್ವಾನ ದಳದಿಂದ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಲ್ಯಾಪ್​ಟಾಪ್​ ಬ್ಯಾಗ್ ಎಂಬುದು ಪತ್ತೆಯಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್​ ಆಯುಕ್ತ ಹರ್ಷ ಭೇಟಿ ನೀಡಿ ಪರಿಶೀಸಿದ್ದಾರೆ. ಪತ್ತೆಯಾಗಿರುವ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಇದೆ ಎಂಬ ಅನುಮಾನ ಉಂಟಾಗಿದೆ. ಹೀಗಾಗಿ ಬಾಂಬ್​ ನಿಷ್ಕ್ರಿಯಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬ್ಯಾಗ್​ ಅನ್ನು ಸುರಕ್ಷಿತ […]

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ!
ಸಾಧು ಶ್ರೀನಾಥ್​
|

Updated on:Jan 20, 2020 | 2:51 PM

Share

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್​ ಸಮೀಪ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ವಿಮಾನ ನಿಲ್ದಾಣಕ್ಕೆ ದೌಡಾಯಿಸಿದ ಮಂಗಳೂರು ಪೊಲೀಸರು ಪತ್ತೆಯಾದ ಬ್ಯಾಗ್ ಹೊರತಂದು ಬಾಂಬ್ ನಿಷ್ಕ್ರಿಯದಳ, ಶ್ವಾನ ದಳದಿಂದ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಲ್ಯಾಪ್​ಟಾಪ್​ ಬ್ಯಾಗ್ ಎಂಬುದು ಪತ್ತೆಯಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್​ ಆಯುಕ್ತ ಹರ್ಷ ಭೇಟಿ ನೀಡಿ ಪರಿಶೀಸಿದ್ದಾರೆ. ಪತ್ತೆಯಾಗಿರುವ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಇದೆ ಎಂಬ ಅನುಮಾನ ಉಂಟಾಗಿದೆ. ಹೀಗಾಗಿ ಬಾಂಬ್​ ನಿಷ್ಕ್ರಿಯಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬ್ಯಾಗ್​ ಅನ್ನು ಸುರಕ್ಷಿತ ಸ್ಥಳದಲ್ಲಿರಿಸಿ ಪೊಲೀಸರು ಸ್ಥಳದಿಂದ ದೂರ ಸರಿದಿದ್ದಾರೆ.

ಇನ್ನು ವಿಐಪಿಗಳ ವಾಹನಗಳು ಬಂದು ನಿಲುಗಡೆಯಾಗುವ ಸ್ಥಳದಲ್ಲಿ ಬ್ಯಾಗ್ ಪತ್ತೆಯಾಗಿದೆ. ಆಟೋದಲ್ಲಿ ಬಂದ ಇಬ್ಬರು ಲ್ಯಾಪ್​ಟಾಪ್​ ಬ್ಯಾಗ್ ಇಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಸಿಸಿಟಿವಿ ದೃಶ್ಯವನ್ನು ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

ವಾಹನಗಳ ಮಾರ್ಗ ಬದಲಾವಣೆ: ಮೊದಲು ಬಾಂಬ್ ರೀತಿಯ ವಸ್ತು ನೋಡಿದ್ದು ಭದ್ರತಾ ಸಿಬ್ಬಂದಿ. ಬಳಿಕ ಉನ್ನಾತಾಧಿಕಾರಿಗಳಿಗೆ ಮಾಹಿತಿ ರವಾನೆ ಮಾಡಲಾಗಿದೆ. ನಂತರ ನಿರಂತರ ಕಾರ್ಯಾಚರಣೆ ಮಾಡುತ್ತಿದ್ದು, ಸದ್ಯ ಏರ್​ಪೋರ್ಟ್​ ಕಡೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ತಾತ್ಕಾಲಿಕವಾಗಿ ಎಲ್ಲ ರಸ್ತೆ ಮಾರ್ಗಗಳ ಬದಲಾವಣೆ ಮಾಡಿದ್ದಾರೆ. ಪ್ರಯಾಣಿಕರ ಸುರಕ್ಷತೆಗಾಗಿ ಏರ್​ಪೋರ್ಟ್​ ಆವರಣದಲ್ಲಿ ಪೊಲೀಸರ ಸರ್ಪಗಾವಲು ಹಾಕಿದ್ದಾರೆ.

Published On - 1:17 pm, Mon, 20 January 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?