ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ!

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್​ ಸಮೀಪ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ವಿಮಾನ ನಿಲ್ದಾಣಕ್ಕೆ ದೌಡಾಯಿಸಿದ ಮಂಗಳೂರು ಪೊಲೀಸರು ಪತ್ತೆಯಾದ ಬ್ಯಾಗ್ ಹೊರತಂದು ಬಾಂಬ್ ನಿಷ್ಕ್ರಿಯದಳ, ಶ್ವಾನ ದಳದಿಂದ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಲ್ಯಾಪ್​ಟಾಪ್​ ಬ್ಯಾಗ್ ಎಂಬುದು ಪತ್ತೆಯಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್​ ಆಯುಕ್ತ ಹರ್ಷ ಭೇಟಿ ನೀಡಿ ಪರಿಶೀಸಿದ್ದಾರೆ. ಪತ್ತೆಯಾಗಿರುವ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಇದೆ ಎಂಬ ಅನುಮಾನ ಉಂಟಾಗಿದೆ. ಹೀಗಾಗಿ ಬಾಂಬ್​ ನಿಷ್ಕ್ರಿಯಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬ್ಯಾಗ್​ ಅನ್ನು ಸುರಕ್ಷಿತ […]

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ!
ಸಾಧು ಶ್ರೀನಾಥ್​

Updated on: Jan 20, 2020 | 2:51 PM

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟಿಕೆಟ್ ಕೌಂಟರ್​ ಸಮೀಪ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದೆ. ವಿಮಾನ ನಿಲ್ದಾಣಕ್ಕೆ ದೌಡಾಯಿಸಿದ ಮಂಗಳೂರು ಪೊಲೀಸರು ಪತ್ತೆಯಾದ ಬ್ಯಾಗ್ ಹೊರತಂದು ಬಾಂಬ್ ನಿಷ್ಕ್ರಿಯದಳ, ಶ್ವಾನ ದಳದಿಂದ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಲ್ಯಾಪ್​ಟಾಪ್​ ಬ್ಯಾಗ್ ಎಂಬುದು ಪತ್ತೆಯಾಗಿದೆ. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್​ ಆಯುಕ್ತ ಹರ್ಷ ಭೇಟಿ ನೀಡಿ ಪರಿಶೀಸಿದ್ದಾರೆ. ಪತ್ತೆಯಾಗಿರುವ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಇದೆ ಎಂಬ ಅನುಮಾನ ಉಂಟಾಗಿದೆ. ಹೀಗಾಗಿ ಬಾಂಬ್​ ನಿಷ್ಕ್ರಿಯಗೊಳಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬ್ಯಾಗ್​ ಅನ್ನು ಸುರಕ್ಷಿತ ಸ್ಥಳದಲ್ಲಿರಿಸಿ ಪೊಲೀಸರು ಸ್ಥಳದಿಂದ ದೂರ ಸರಿದಿದ್ದಾರೆ.

ಇನ್ನು ವಿಐಪಿಗಳ ವಾಹನಗಳು ಬಂದು ನಿಲುಗಡೆಯಾಗುವ ಸ್ಥಳದಲ್ಲಿ ಬ್ಯಾಗ್ ಪತ್ತೆಯಾಗಿದೆ. ಆಟೋದಲ್ಲಿ ಬಂದ ಇಬ್ಬರು ಲ್ಯಾಪ್​ಟಾಪ್​ ಬ್ಯಾಗ್ ಇಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಸಿಸಿಟಿವಿ ದೃಶ್ಯವನ್ನು ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

ವಾಹನಗಳ ಮಾರ್ಗ ಬದಲಾವಣೆ:
ಮೊದಲು ಬಾಂಬ್ ರೀತಿಯ ವಸ್ತು ನೋಡಿದ್ದು ಭದ್ರತಾ ಸಿಬ್ಬಂದಿ. ಬಳಿಕ ಉನ್ನಾತಾಧಿಕಾರಿಗಳಿಗೆ ಮಾಹಿತಿ ರವಾನೆ ಮಾಡಲಾಗಿದೆ. ನಂತರ ನಿರಂತರ ಕಾರ್ಯಾಚರಣೆ ಮಾಡುತ್ತಿದ್ದು, ಸದ್ಯ ಏರ್​ಪೋರ್ಟ್​ ಕಡೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ತಾತ್ಕಾಲಿಕವಾಗಿ ಎಲ್ಲ ರಸ್ತೆ ಮಾರ್ಗಗಳ ಬದಲಾವಣೆ ಮಾಡಿದ್ದಾರೆ. ಪ್ರಯಾಣಿಕರ ಸುರಕ್ಷತೆಗಾಗಿ ಏರ್​ಪೋರ್ಟ್​ ಆವರಣದಲ್ಲಿ ಪೊಲೀಸರ ಸರ್ಪಗಾವಲು ಹಾಕಿದ್ದಾರೆ.


Published On - 1:17 pm, Mon, 20 January 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us