AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Madal Virupakshappa: ಲೋಕಾಯುಕ್ತ ಪೊಲೀಸರು ಬೆನ್ನುಹತ್ತಿದ್ದ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಸಿಕ್ಕ ಬೆನ್ನಲ್ಲೇ ಪ್ರತ್ಯಕ್ಷ

ವಿರೂಪಾಕ್ಷಪ್ಪ ಅವರು ಹುಟ್ಟೂರು, ಚನ್ನೇಶಪುರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಅವರನ್ನು ಬೆಂಬಲಿಗರು ತಮಟೆ ಬಾರಿಸಿ, ಹಾರ ಹಾಕಿ ಸ್ವಾಗತಿಸಿ ಮೆರವಣಿಗೆ ಮಾಡಿ ಕರೆದುಕೊಂಡು ಬಂದಿದ್ದಾರೆ.

ಗಣಪತಿ ಶರ್ಮಾ
|

Updated on:Mar 07, 2023 | 6:39 PM

Share

ದಾವಣಗೆರೆ: ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ KSDL ಮಾಜಿ ಚೇರ್ಮನ್, ಬಿಜೆಪಿ ಶಾಸಕ ಮಾಡಳ್ ವಿರೂಪಾಕ್ಷಪ್ಪ (Madal Virupakshappa) ಕರ್ನಾಟಕ ಹೈಕೋರ್ಟ್​ನಿಂದ (Karnataka High Court) ಜಾಮೀನು ದೊರೆತ ಬೆನ್ನಲ್ಲೇ ಮಂಗಳವಾರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಲೋಕಾಯುಕ್ತ ಪೊಲೀಸರು ತಮ್ಮನ್ನು ಬಂಧಿಸಲು ಮುಂದಾಗಿದ್ದಾರೆ ಎಂಬ ಸುಳಿವು ಸಿಗುತ್ತಿದ್ದಂತೆಯೇ ಅವರು ನಾಪತ್ತೆಯಾಗಿದ್ದರು. 2-3 ದಿನಗಳಾಗದರೂ ಅವರು ಎಲ್ಲಿದ್ದಾರೆ ಎಂಬ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇದೀಗ ದಾವಣಗೆರೆಯ ತಮ್ಮ ನಿವಾಸದ ಬಳಿ ಕಾಣಿಸಿಕೊಂಡಿದ್ದಾರೆ. ಜಾಮೀನು ಆದೇಶ ತಲುಪಿದ 48 ಗಂಟೆಗಳ ಒಳಗಾಗಿ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಅವರಿಗೆ ಸೂಚಿಸಲಾಗಿದೆ.

ವಿರೂಪಾಕ್ಷಪ್ಪ ಅವರು ಹುಟ್ಟೂರು, ಚನ್ನೇಶಪುರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲಿ ಅವರನ್ನು ಬೆಂಬಲಿಗರು ತಮಟೆ ಬಾರಿಸಿ, ಹಾರ ಹಾಕಿ ಸ್ವಾಗತಿಸಿ ಮೆರವಣಿಗೆ ಮಾಡಿ ಕರೆದುಕೊಂಡು ಬಂದಿದ್ದಾರೆ. ನಂತರ ವಿರೂಪಾಕ್ಷಪ್ಪ ಅವರು ಮಹದೇವಮ್ಮ ದೇವಿ ದರ್ಶನ ಪಡೆದರು. ಬಳಿಕ ಈಶ್ವರನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಬೆಂಬಲಿಗರು ಮಾಡಾಳ್ ವಿರೂಪಾಕ್ಷಪ್ಪ ಪರ ಘೋಷಣೆ ಕೂಗಿದರು.

ಕಳೆದ ಆರು ದಿನಳಿಂದ ಅಜ್ಞಾತ ಸ್ಥಳದಲ್ಲಿದ್ದ ಮಾಡಾಳ್ ವಿರೂಪಾಕ್ಷಪ್ಪ ಪರ ಹಿರಿಯ ವಕೀಲ ಕೆ.ಸುಮನ್ ವಾದ ಮಂಡಿಸಿದ್ದು, ಜಾಮೀನು ನೀಡುವಂತೆ ಕೋರಿದ್ದರು. ಅವರ ವಾದವನ್ನು ಆಲಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ಜಾಮೀನು ನೀಡಿದೆ. 5 ಲಕ್ಷ ರೂ. ಮೌಲ್ಯದ ಬಾಂಡ್​, ಇಬ್ಬರು ಶ್ಯೂರಿಟಿ ನೀಡುವಂತೆ ಸೂಚಿಸಿದೆ.

ಇದನ್ನೂ ಓದಿ: Madal Virupakshappa: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಧ್ಯಂತರ ಜಾಮೀನು

ರಾಜ್ಯ ಸಾಬೂನು ಮತ್ತು ಮಾರ್ಜಕಗಳ ನಿಗಮದಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಗಳಿದ್ದು, ಕಳೆದ ವಾರ ಬೆಂಗಳೂರು ಜಲ ಮಂಡಳಿ ಮತ್ತು ಒಳಚರಂಡಿ (BWSSB) ಮುಖ್ಯ ಲೆಕ್ಕಾಧಿಕಾರಿಯಾಗಿರುವ ಮಾಡಾಳ್ ಪ್ರಶಾಂತ್‌ ಅವರ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ಸಂದರ್ಭದಲ್ಲಿ ಅವರು 40 ಲಕ್ಷ ರೂ.ಗೂ ಹೆಚ್ಚು ಮೊತ್ತದ ಲಂಚ ಪಡೆಯುತ್ತಿರುವುದು ಬಯಲಾಗಿತ್ತು. ನಂತರದಲ್ಲಿ ಶಾಸಕರ ಮನೆ ಮೇಲೂ ದಾಳಿ ನಡೆದಿದ್ದು, ಕೋಟ್ಯಂತರ ರೂ. ನಗದು, ಚಿನ್ನಾಭರಣ ದೊರೆತಿತ್ತು. ಈ ಮಧ್ಯೆ ಮಾಡಾಳ್ ಬಂಧನ ಭೀತಿಯಿಂದ ನಾಪತ್ತೆಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:41 pm, Tue, 7 March 23

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್