ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಮಾನಕರ ಹೇಳಿಕೆ ಆರೋಪ: ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್

ಇತ್ತೀಚೆಗೆ ರಾಯಚೂರಿನ ಶಿರವಾದಲ್ಲಿ ನಮೋ ಬ್ರಿಗೇಡ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ, ಕಲಬುರಗಿಯ ಇಎಸ್​ಐ ಆಸ್ಪತ್ರೆಯ ಬಗ್ಗೆ ಮಾತನಾಡಿದ್ದರು. ಆಸ್ಪತ್ರೆಯನ್ನು ತಮ್ಮ ಹೆಸರಿನ ಪ್ರಚಾರಕ್ಕೆ ಖರ್ಗೆ ಅವರು ಬಳಸಿದ್ದಾರೆ. ಜನರ ತೆರಿಗೆ ಹಣದಲ್ಲಿ ಅವರು ತಮ್ಮ ಹೆಸರನ್ನು ಶಾಶ್ವತಗೊಳಿಸಲು ಮುಂದಾದ ಅಯೋಗ್ಯರಾಗಿದ್ದಾರೆ ಎಂದು ಹೇಳಿದ್ದರು.

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಮಾನಕರ ಹೇಳಿಕೆ ಆರೋಪ: ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್
ಚಕ್ರವರ್ತಿ ಸೂಲಿಬೆಲೆ
Follow us
| Updated By: ಗಣಪತಿ ಶರ್ಮ

Updated on:Jan 30, 2024 | 2:21 PM

ಕಲಬುರಗಿ, ಜನವರಿ 30: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ (Chakravarti Sulibele) ಬಿಗ್ ರಿಲೀಫ್ ದೊರೆತಿದೆ. ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್​ಐಆರ್​ಗೆ ಮಂಗಳವಾರ ಕರ್ನಾಟಕ ಹೈಕೋರ್ಟ್​ (Karnataka High Court) ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್​​ನ ಕಲಬುರಗಿ ವಿಭಾಗೀಯ ಪೀಠವು ಎಫ್​ಐಆರ್​ಗೆ ತಡೆಯಾಜ್ಞೆ ನೀಡಿದೆ.

ಏಕ ಸದಸ್ಯ ಪೀಠದ ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಪೀಠವು ಎಫ್​ಐಆರ್​ಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ.

ನ್ಯಾಯಪೀಠ ಹೇಳಿದ್ದೇನು?

‘ಅಯೋಗ್ಯ’ ಎನ್ನುವ ಹೇಳಿಕೆ ಯಾವ ಜಾತಿಗೂ ಅನ್ವಯವಾಗುದಿಲ್ಲ. ಅಷ್ಟೇ ಅಲ್ಲದೆ, ಯಾರ ಜಾತಿ ನಿಂದನೆ ಆಗಿದೆಯೋ ಅವರು ದೂರು ನೀಡಿಲ್ಲ. ರಾಜಕೀಯ ಪಕ್ಷದ ಜಿಲ್ಲಾಧ್ಯಕ್ಷರು ದೂರು ನೀಡಿದ್ದಾರೆ. ನೀವು ಯಾವ ಉದ್ದೇಶ ಇಟ್ಟುಕೊಂಡು ದೂರು ನೀಡಿದ್ದಿರಿ ಅನ್ನೋದು ಗೋತ್ತಾಗುತ್ತದೆ ಎಂದು ನ್ಯಾಪೀಠ ದೂರುದಾರರನ್ನೇ ತರಾಟೆಗೆ ತೆಗೆದುಕೊಂಡಿದೆ.

ಚಕ್ರವರ್ತಿ ಸೂಲಿಬೆಲೆ ಪರ ವಕೀಲ ಅರುಣ್ ಶ್ಯಾಮ್ ವಾದ ಮಂಡನೆ ಮಾಡಿದ್ದರು.

ರಾಯಚೂರು ನ್ಯಾಯಾಲಯದಲ್ಲಿ ವಿಚಾರಣೆ ಮುಂದೂಡಿಕೆ

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ವಿಚಾರವಾಗಿ ರಾಯಚೂರಿನ ಫಸ್ಟ್ ಅಡಿಷನಲ್ ಅಟ್ರಾಸಿಟಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿಕೆ ಮಾಡಲಾಗಿದೆ. ನ್ಯಾಯಾಲಯಕ್ಕೆ ಹಾಜರಾಗುವಂತೆ ದೂರುದಾರರಿಗೆ ಕೋರ್ಟ್ ನೋಟಿಸ್ ನೀಡಿದೆ.

ಏನು ಹೇಳಿದ್ದರು ಚಕ್ರವರ್ತಿ ಸೂಲಿಬೆಲೆ

ಇತ್ತೀಚೆಗೆ ರಾಯಚೂರಿನ ಶಿರವಾದಲ್ಲಿ ನಮೋ ಬ್ರಿಗೇಡ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಚಕ್ರವರ್ತಿ ಸೂಲಿಬೆಲೆ, ಕಲಬುರಗಿಯ ಇಎಸ್​ಐ ಆಸ್ಪತ್ರೆಯ ಬಗ್ಗೆ ಮಾತನಾಡಿದ್ದರು. ಇದೇ ವೇಳೆ, ಆಸ್ಪತ್ರೆಯನ್ನು ತಮ್ಮ ಹೆಸರಿನ ಪ್ರಚಾರಕ್ಕೆ ಖರ್ಗೆ ಅವರು ಬಳಸಿದ್ದಾರೆ. ಜನರ ತೆರಿಗೆ ಹಣದಲ್ಲಿ ಅವರು ತಮ್ಮ ಹೆಸರನ್ನು ಶಾಶ್ವತಗೊಳಿಸಲು ಮುಂದಾದ ಅಯೋಗ್ಯರಾಗಿದ್ದಾರೆ ಎಂದು ಹೇಳಿದ್ದರು.

ಇದಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೆದ್ದಾರ್ ನೇತೃತ್ವದಲ್ಲಿ ಸೂಲಿಬೆಲೆ ವಿರುದ್ಧ ಕಮಿಷನರ್​ಗೆ ದೂರು ನೀಡಲಾಗಿತ್ತು. ಸೂಲಿಬೆಲೆ ಅವರು ಖರ್ಗೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದರು.

ಇದನ್ನೂ ಓದಿ: ಗೊಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ: ಜೆಡಿಎಸ್ ವಾಗ್ದಾಳಿ

ಇಷ್ಟೇ ಅಲ್ಲದೆ, ಚಕ್ರವರ್ತಿ ಸೂಲಿಬೆಲೆ ಅವರನ್ನು ಸಮಾಜದ ಕೊಳಕು ಕ್ರಿಮಿ ಎಂದೂ ಕಾಂಗ್ರೆಸ್ ಪಕ್ಷವು ಸಾಮಾಜಿಕ ಮಾಧ್ಯಮಗಳಲ್ಲಿ ನಿಂದಿಸಿತ್ತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:16 pm, Tue, 30 January 24