AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ನಾಳೆಯಿಂದಲೇ ಆನ್​ಲೈನ್ ತರಗತಿಗಳು ಆರಂಭ, ವೇಳಾಪಟ್ಟಿ ಪ್ರಕಟಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆ

ಪದವಿ ಪುರ್ವ ಕಾಲೇಜುಗಳಲ್ಲಿ ತರಗತಿಗಳನ್ನು ಸೂಕ್ತ ರೀತಿಯಲ್ಲಿ ನಡೆಸುತ್ತಿರುವ ಬಗ್ಗೆ ಆಯಾ ಜಿಲ್ಲೆಗಳ ಉಪ ನಿರ್ದೇಶಕರು ಆಗಾಗ ಕಾಲೇಜುಗಳಿಗೆ ಭೇಟಿ ನೀಡಿ ಖಾತರಿ ಪಡಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ.

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ನಾಳೆಯಿಂದಲೇ ಆನ್​ಲೈನ್ ತರಗತಿಗಳು ಆರಂಭ, ವೇಳಾಪಟ್ಟಿ ಪ್ರಕಟಿಸಿದ ಪದವಿ ಪೂರ್ವ ಶಿಕ್ಷಣ ಇಲಾಖೆ
ಪದವಿ ಪೂರ್ವ ಶಿಕ್ಷಣ ಇಲಾಖೆ
TV9 Web
| Edited By: |

Updated on:Jul 14, 2021 | 8:42 PM

Share

ಬೆಂಗಳೂರು:  ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ನಾಳೆಯಿಂದಲೇ (ಗುರುವಾರ) ಅನ್​ಲೈನ್ ತರಗತಿಗಳನ್ನು ಆರಂಭಿಸುವಂತೆ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಬುಧವಾರದಂದು ಒಂದು ಸುತ್ತೋಲೆಯನ್ನು ಕಳಿಸಿದೆ. ಅದರರ್ಥ ದ್ವಿತೀಯ ಪಿಯು ಓದುತ್ತಿರುವ ಮಕ್ಕಳಿಗೆ ಜುಲೈ 15ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಇನ್ನೂ ಆರಂಭವಾಗದ ಕಾರಣ ಅನ್​ಲೈನ್ ಕ್ಲಾಸ್​ಗಳನ್ನು ಪೂರ್ಣ ಪ್ರಮಾಣದಲ್ಲಿ ನಡೆಸಲೇಬೇಕಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಆದರೆ, ಈ ಬಾರಿ ತರಗತಿಗಳನ್ನು ನಡೆಸಲಿರುವ ವಿಧಾನ ಕಳೆದ ವರ್ಷಕ್ಕಿಂತ ಭಿನ್ನವಾಗಿದೆ. 2020-21 ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಪ್ರೀ-ರೆಕಾರ್ಡೆಡ್​ ಯೂಟ್ಯೂಬ್ ಲಿಂಕ್​ಗಳನ್ನು ಕಳಿಸಿ ತರಗತಿಗಳನ್ನು ನಡೆಸಲಾಗಿತ್ತು. ಸದರಿ ಲಿಂಕ್​ಗಳನ್ನು ವಿದ್ಯಾರ್ಥಿಗಳಿಗೆ ಉಪನ್ಯಾಸಕರು ತಾವೇ ರಚಿಸಿಕೊಂಡ ವಿಷಯಾಧಾರಿತ ವಾಟ್ಸ್ಯಾಪ್​ ಗ್ರೂಪ್​ಗಳಿಗೆ ಕಳಿಸುತ್ತಿದ್ದರು.

ಆದರೆ ಈ ಬಾರಿ ಉಪನ್ಯಾಸಕರು, ತಾವು ಸೇವೆ ನಿರ್ವಹಿಸುತ್ತಿರುವ ಕಾಲೇಜುಗಳಿಂದಲೇ, ಎಮ್ ಎಸ್ ಟೀಮ್, ಗೂಗಲ್ ಮೀಟ್, ಜೂಮ್ ಅಥವಾ ಜಿಯೋ ಮೀಟ್​ಗಳನ್ನು ಉಪಯೋಗಿಸಿಕೊಂಡು ಪಾಠ ಮಾಡಲಿದ್ದಾರೆ. ಇದಕ್ಕೆ ಸಂಬಂದಿಸಿದಂತೆ ಪದವಿ ಪೂರ್ವ ಕಾಲೆಜಿನ ಪ್ರಾಂಶುಪಾಲರು ಸಾಮಾನ್ಯ ವರ್ಷಗಳಂತೆ ಎಲ್ಲಾ ತರಗತಿಗಳಿಗೆ ಅನ್ವಯವಾಗುವಂತೆ ವೇಳಾ ಪಟ್ಟಿಯನ್ನು ತಯಾರಿಸಿದ್ದಾರೆ. ಅದು ಕೆಳಕಂಡಂತಿದೆ:

ಬೆಳಗ್ಗೆ 10.00 ಗಂಟೆಯಿಂದ 11 ಗಂಟೆ- ಮೊದಲ ಪೀರಿಯಡ್

ಬೆಳಗ್ಗೆ 11.00 ಗಂಟೆಯಿಂದ 12 ಗಂಟೆ- ಎರಡನೇ ಪೀರಿಯಡ್

ಬೆಳಗ್ಗೆ 12.00 ಗಂಟೆಯಿಂದ 12.30ವರಗೆ- ಗಂಟೆವರೆಗೆ ವಿರಾಮ

ಮಧ್ಯಾಹ್ನ 12.30 ರಿಂದ 1.30 ರವರೆಗೆ-ಮೂರನೇ ಪೀರಿಯಡ್

ಮಧ್ಯಾಹ್ನ 1.30 ರಿಂದ 2.30 ರವರೆಗೆ ನಾಲ್ಕನೇ ಪೀರಿಯಡ್

Circular

ಪದವಿ ಪೂರ್ವ ಶಿಕ್ಷಣ ಇಲಾಖೆಯ ಸುತ್ತೋಲೆ

ಈ ವೇಳಾಪಟ್ಟಿಗೆ ಅನುಗುಣವಾಗಿ ಸೂಕ್ತ ಲಿಂಕ್​ಗಳನ್ನು ಜನರೇಟ್​ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಕಳಿಸಿ ತರಗತಿಗಳನನ್ನು ನಡೆಸಲು ಉಪನ್ಯಾಸಕರಿಗೆ ಸೂಚಿಸಿಲಾಗಿದೆ ಮತ್ತು ಎಲ್ಲ ಉಪನ್ಯಾಸಕರು ಪ್ರತಿದಿನ ಹಾಜರಾತಿಯನ್ನು ತೆಗೆದುಕೊಂಡು ಅದನ್ನು ಪ್ರಿನ್ಸಿಪಾಲರಿಗೆ ನೀಡುವಂತೆ ತಿಳಿಸಲಾಗಿದೆ. ಒಂದ ಪಕ್ಷ ಯಾವುದಾದರೂ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ 20 ಕ್ಕಿಂತ ಕಡಿಮೆಯಿದ್ದರೆ ಹತ್ತಿರದ ಕಾಲೇಜಿನ ಅದೇ ವಿಷಯದ ಉಪನ್ಯಾಸಕರಿಗೆ ಸರಿಹೊಂದಿಸಿ ತರಗತಿ ನಡೆಸುವ ಜವಾಬ್ದಾರಿಯನ್ನು ಅವರಿಗೆ ವಹಿಸಿಕೊಡಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪದವಿ ಪುರ್ವ ಕಾಲೇಜುಗಳಲ್ಲಿ ತರಗತಿಗಳನ್ನು ಸೂಕ್ತ ರೀತಿಯಲ್ಲಿ ನಡೆಸುತ್ತಿರುವ ಬಗ್ಗೆ ಆಯಾ ಜಿಲ್ಲೆಗಳ ಉಪ ನಿರ್ದೇಶಕರು ಆಗಾಗ ಕಾಲೇಜುಗಳಿಗೆ ಭೇಟಿ ನೀಡಿ ಖಾತರಿ ಪಡಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ. ಜುಲೈ 7ರಿಂದಲೇ ಉಪನ್ಯಾಸಕರು ಕಾಲೇಜುಗಳಿಗೆ ಹಾಜರಾಗುತ್ತಿರುವುದರಿಂದ ಮತ್ತು ಪ್ರಸಕ್ತ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳ ಕಲಿಕಾ ಪ್ರಕ್ರಿಯೆ ಆರಂಭವಾಗಿರದ ಕಾರಣ ತರಗತಿಗಳನ್ನು ಆರಂಭಿಸಲೇ ಬೇಕಿರುವ ಹಿನ್ನೆಲೆಯಲ್ಲಿ ಉಪನ್ಯಾಸಕರು ತಾವಿರುವ ಕಾಲೇಜುಗಳಿಂದ ಪಾಠಗಳನ್ನು ತೆಗೆದುಕೊಳ್ಳಬೇಕು ಅಂತ ಹೇಳಲಾಗಿದೆ.

ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗುವುದಿಲ್ಲವಾದರೂ ಪ್ರತಿಯೊಂದು ಕಾಲೇಜಲ್ಲಿ ಕೋವಿಡ್-19 ಸಂಬಂಧಿಸಿದ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಯೇ ಪಾಠ ಮಾಡಬೇಕೆಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಹಾಗೆಯೇ, ಸದರಿ ವ್ಯವಸ್ಥೆಯನ್ನು ಎಲ್ಲ ಕಾಲೇಜಿಗಳು ಅನೂಚಾನಾಗಿ ಪಾಲಿಸುತ್ತಿರುವ ಬಗ್ಗೆ ಉಪ ನಿರ್ದೇಶಕರುಗಳು ಕೇಂದ್ರ ಕಚೇರಿಗೆ ವರದಿ ಸಲ್ಲಿಸಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

ರಾಜ್ಯದಲ್ಲಿ ಕೊವಿಡ್​-19 ಸೋಂಕಿನ ಪ್ರಕರಣಗಳು ಸಂಪೂರ್ಣವಾಗಿ ಇಳಿಮುಖಗೊಂಡಿರುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳನ್ನು ಪುನಾರಂಭಿಸಬಹುದೆಂದು ಹೈಕೋರ್ಟ್​ ಹೇಳಿದ್ದರೂ ಆತಂಕದಲ್ಲಿರುವ ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಆದರೆ ಕಾಲೇಜುಗಳನ್ನು ಮುಚ್ಚಿರುವುದು ವಿದ್ಯಾರ್ಥಿಗಳ ಓದಿನ ಮೇಲೆ ಬೇರೆ ರೀತಿಯ ಪರಿಣಾಮ ಬಿರುತ್ತಿರುವುದರಿಂದ ನಾಳೆಯಿಂದ ಶೈಕ್ಷಣಿಕ ವರ್ಷ ಆರಂಭ ಎಂದು ಹೇಳಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯು ಈ ಸಲ ಭಿನ್ನ ರೀತಿಯಲ್ಲಿ ಆನ್​​ಲೈನ್​ ತರಗತಿಗಳನ್ನು ನಡೆಸಲು ನಿರ್ಧರಿಸಿದೆ.

ಇದನ್ನೂ ಓದಿ: School Reopening: ಶಾಲೆ ಆರಂಭಿಸುವ ಕುರಿತು ಶಿಕ್ಷಣ ತಜ್ಞರು, ಸ್ವಯಂ ಸೇವಾ ಸಂಸ್ಥೆಗಳ ಜತೆ ಸಚಿವ ಸುರೇಶ್ ಕುಮಾರ್ ಸಭೆ; ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳು ಇಲ್ಲಿವೆ

Published On - 8:31 pm, Wed, 14 July 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?