Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಆಸ್ತಿ ಗಳಿಕೆ ಆರೋಪ: ಮಂಡ್ಯ, ಯಾದಗಿರಿಯಲ್ಲಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ಸಾರಿಗೆ ಇಲಾಖೆಯ ಆಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚನ್ನವೀರಪ್ಪ ಈಗ ಮೈಸೂರಿನ RTO ಕಚೇರಿಯಲ್ಲಿ FDA ಆಗಿದ್ದಾರೆ. ACB SP ಅರುಣಾಂ ಗೊಸ್ಸ್, DySP ಧರ್ಮೇಂದ್ರ, ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪ: ಮಂಡ್ಯ, ಯಾದಗಿರಿಯಲ್ಲಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ
ಯಾದಗಿರಿಯ ಜೆಸ್ಕಾಂ ಕೆಇಬಿ ಲೆಕ್ಕಾಧಿಕಾರಿ ರಾಜು ಪತ್ತಾರ ನಿವಾಸದ ಮೇಲೆ ACB ದಾಳಿ ನಡೆದಿದೆ
Follow us
ಆಯೇಷಾ ಬಾನು
|

Updated on:Mar 09, 2021 | 9:08 AM

ಮಂಡ್ಯ: ಬೆಳಂ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ಶುರು ಮಾಡಿದ್ದಾರೆ. ಮಂಡ್ಯ ಹಾಗೂ ಯಾದಗಿರಿ ಸೇರಿದಂತೆ ಕೆಲ ಕಡೆ ಎಸಿಬಿ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ RTO ಪ್ರಥಮ ದರ್ಜೆ ಸಹಾಯಕ ಏ.ವಿ. ಚನ್ನವೀರಪ್ಪನವರ ಮನೆ ಮೇಲೆ ದಾಳಿ ನಡೆದಿದೆ. ಮಂಡ್ಯದ ಕುವೆಂಪುನಗರ, ಮಂಡ್ಯ ತಾಲೂಕು ಆಲಕೆರೆ ಗ್ರಾಮದ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಸಾರಿಗೆ ಇಲಾಖೆಯ ಆಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚನ್ನವೀರಪ್ಪ ಈಗ ಮೈಸೂರಿನ RTO ಕಚೇರಿಯಲ್ಲಿ FDA ಆಗಿದ್ದಾರೆ. ACB SP ಅರುಣಾಂ ಗೊಸ್ಸ್, DySP ಧರ್ಮೇಂದ್ರ, ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ದಾಳಿ ನಡೆದಿದೆ. ಇನ್ನು ಯಾದಗಿರಿಯ ಜೆಸ್ಕಾಂ ಕೆಇಬಿ ಲೆಕ್ಕಾಧಿಕಾರಿ ರಾಜು ಪತ್ತಾರ ನಿವಾಸದ ಮೇಲೂ ACB ದಾಳಿ ನಡೆದಿದೆ. ಎಸಿಬಿ SP ಮಹೇಶ ಮೇಗ್ಗಣ್ಣನವರ್ ಹಾಗೂ DySP ಉಮಾಶಂಕರ ನೇತೃತ್ವದಲ್ಲಿ ಯಾದಗಿರಿ ನಗರದ ಸಹರಾ ಕಾಲೋನಿಯಲ್ಲಿರುವ ನಿವಾಸದಲ್ಲಿ ದಾಳಿ ನಡೆದಿದ್ದು ಅಧಿಕಾರಿಗಳು ತಲಾಶ್ ನಡೆಸಿದ್ದಾರೆ.

ಆದಾಯ ಮೀರಿ ಆಸ್ತಿ ಹೊಂದಿದ್ದ ದೂರು ಹಿನ್ನೆಲೆ ಎಸಿಬಿ ದಾಳಿ ನಡೆದಿದೆ. ರಾಜು ಪತ್ತಾರ ಕಳೆದ 20 ವರ್ಷದಿಂದ ಯಾದಗಿರಿ ಕೆಇಬಿ‌ ಕಚೇರಿಯಲ್ಲಿ ‌ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ದಾಳಿ ವೇಳೆ ರಾಜು ಮನೆಯಲ್ಲಿ ನಗದು, ಚಿನ್ನಾಭರಣ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಪತ್ತೆಯಾಗಿವೆ ಎಂಬ ಮಾಹಿತಿ ಸಿಕ್ಕಿದೆ.

ರಾಜ್ಯದಲ್ಲಿ ಏಕಕಾಲಕ್ಕೆ 28 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 9 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದ್ದು ರಾಜ್ಯದ 11 ಜಿಲ್ಲೆಗಳಲ್ಲಿ ಎಸಿಬಿ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ. ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಸೂಪರಿಂಟೆಂಡೆಂಟ್ ಇಂಜಿನಿಯರ್ ಮುನಿಗೋಪಾಲರಾಜು, ಮೈಸೂರು ನಗರ ಯೋಜನೆ ಇಲಾಖೆ ಜಂಟಿ ನಿರ್ದೇಶಕ ಸುಬ್ರಹ್ಮಣ್ಯ ಕೆ.ವಡ್ಡರ್, ಮೈಸೂರು ಆರ್‌ಟಿಒ, ಎಫ್‌ಡಿಎ ಚೆನ್ನವೀರಪ್ಪ, ಚಿಕ್ಕಬಳ್ಳಾಪುರದ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಕೃಷ್ಣೇಗೌಡ, ಬೆಳಗಾವಿ ವಿಭಾಗ ಡೆಪ್ಯುಟಿ ಚೀಫ್ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ಹನಮಂತ ಶಿವಪ್ಪ ಚಿಕ್ಕಣ್ಣನವರ್, ಯಾದಗಿರಿ ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತರ್, ಬಿಎಂಟಿಎಫ್ ಪೊಲೀಸ್ ಇನ್ಸ್‌ಪೆಕ್ಟರ್ ವಿಕ್ಟರ್ ಸಿಮೊನ್, ದಾವಣಗೆರೆ ವಿಭಾಗ ಫ್ಯಾಕ್ಟರೀಸ್ & ಬಾಯ್ಲರ್ಸ್ ಡೆಪ್ಯುಟಿ ಡೈರೆಕ್ಟರ್ ಕೆ.ಎಂ.ಪ್ರಥಮ್, ಯಲಹಂಕ ವಿಭಾಗ ಬಿಬಿಎಂಪಿ ನಗರ ಯೋಜನೆ ಕಚೇರಿ ಅಸಿಸ್ಟೆಂಟ್ ಡೈರೆಕ್ಟರ್, ಜೂನಿಯರ್ ಇಂಜಿನಿಯರ್ ಕೆ.ಸುಬ್ರಹ್ಮಣ್ಯಂ ಸೇರಿದಂತೆ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ.

ಇದನ್ನೂ ಓದಿ: ಎಸಿಎಫ್ ಶಿವಶಂಕರ್ ಮನೆ ಮೇಲೆ ಎಸಿಬಿ ದಾಳಿ: ₹ 3.79 ಕೋಟಿ ಮೌಲ್ಯದ ಆಸ್ತಿ ಪತ್ತೆ

Published On - 7:58 am, Tue, 9 March 21

ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ನಿನ್ನ ಕೋಚ್ ಕೂಡ ಗೊತ್ತು ಕಣೋ... ಎಲ್ಲೆ ಮೀರಿದ ಕಿರಿಕ್ ಕೊಹ್ಲಿ
ನಿನ್ನ ಕೋಚ್ ಕೂಡ ಗೊತ್ತು ಕಣೋ... ಎಲ್ಲೆ ಮೀರಿದ ಕಿರಿಕ್ ಕೊಹ್ಲಿ
VIDEO: RCB ಅಭಿಮಾನಿಗಳ ಗಮನಕ್ಕೆ: ನೀವು ಸುಳ್ಳಿಗೆ ಮರುಳಾಗಿದ್ದೀರಿ
VIDEO: RCB ಅಭಿಮಾನಿಗಳ ಗಮನಕ್ಕೆ: ನೀವು ಸುಳ್ಳಿಗೆ ಮರುಳಾಗಿದ್ದೀರಿ
ಉಪ್ಪನ್ನ ಈ ಸಮಯದಲ್ಲಿ ಕೊಟ್ಟರೆ ಕಷ್ಟಗಳು ಕಟ್ಟಿಟ್ಟ ಬುತ್ತಿ
ಉಪ್ಪನ್ನ ಈ ಸಮಯದಲ್ಲಿ ಕೊಟ್ಟರೆ ಕಷ್ಟಗಳು ಕಟ್ಟಿಟ್ಟ ಬುತ್ತಿ