AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಆಸ್ತಿ ಗಳಿಕೆ ಆರೋಪ: ಮಂಡ್ಯ, ಯಾದಗಿರಿಯಲ್ಲಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ಸಾರಿಗೆ ಇಲಾಖೆಯ ಆಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚನ್ನವೀರಪ್ಪ ಈಗ ಮೈಸೂರಿನ RTO ಕಚೇರಿಯಲ್ಲಿ FDA ಆಗಿದ್ದಾರೆ. ACB SP ಅರುಣಾಂ ಗೊಸ್ಸ್, DySP ಧರ್ಮೇಂದ್ರ, ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪ: ಮಂಡ್ಯ, ಯಾದಗಿರಿಯಲ್ಲಿ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ
ಯಾದಗಿರಿಯ ಜೆಸ್ಕಾಂ ಕೆಇಬಿ ಲೆಕ್ಕಾಧಿಕಾರಿ ರಾಜು ಪತ್ತಾರ ನಿವಾಸದ ಮೇಲೆ ACB ದಾಳಿ ನಡೆದಿದೆ
ಆಯೇಷಾ ಬಾನು
|

Updated on:Mar 09, 2021 | 9:08 AM

Share

ಮಂಡ್ಯ: ಬೆಳಂ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ಶುರು ಮಾಡಿದ್ದಾರೆ. ಮಂಡ್ಯ ಹಾಗೂ ಯಾದಗಿರಿ ಸೇರಿದಂತೆ ಕೆಲ ಕಡೆ ಎಸಿಬಿ ದಾಳಿ ನಡೆದಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ RTO ಪ್ರಥಮ ದರ್ಜೆ ಸಹಾಯಕ ಏ.ವಿ. ಚನ್ನವೀರಪ್ಪನವರ ಮನೆ ಮೇಲೆ ದಾಳಿ ನಡೆದಿದೆ. ಮಂಡ್ಯದ ಕುವೆಂಪುನಗರ, ಮಂಡ್ಯ ತಾಲೂಕು ಆಲಕೆರೆ ಗ್ರಾಮದ ಮನೆ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಸಾರಿಗೆ ಇಲಾಖೆಯ ಆಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚನ್ನವೀರಪ್ಪ ಈಗ ಮೈಸೂರಿನ RTO ಕಚೇರಿಯಲ್ಲಿ FDA ಆಗಿದ್ದಾರೆ. ACB SP ಅರುಣಾಂ ಗೊಸ್ಸ್, DySP ಧರ್ಮೇಂದ್ರ, ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ದಾಳಿ ನಡೆದಿದೆ. ಇನ್ನು ಯಾದಗಿರಿಯ ಜೆಸ್ಕಾಂ ಕೆಇಬಿ ಲೆಕ್ಕಾಧಿಕಾರಿ ರಾಜು ಪತ್ತಾರ ನಿವಾಸದ ಮೇಲೂ ACB ದಾಳಿ ನಡೆದಿದೆ. ಎಸಿಬಿ SP ಮಹೇಶ ಮೇಗ್ಗಣ್ಣನವರ್ ಹಾಗೂ DySP ಉಮಾಶಂಕರ ನೇತೃತ್ವದಲ್ಲಿ ಯಾದಗಿರಿ ನಗರದ ಸಹರಾ ಕಾಲೋನಿಯಲ್ಲಿರುವ ನಿವಾಸದಲ್ಲಿ ದಾಳಿ ನಡೆದಿದ್ದು ಅಧಿಕಾರಿಗಳು ತಲಾಶ್ ನಡೆಸಿದ್ದಾರೆ.

ಆದಾಯ ಮೀರಿ ಆಸ್ತಿ ಹೊಂದಿದ್ದ ದೂರು ಹಿನ್ನೆಲೆ ಎಸಿಬಿ ದಾಳಿ ನಡೆದಿದೆ. ರಾಜು ಪತ್ತಾರ ಕಳೆದ 20 ವರ್ಷದಿಂದ ಯಾದಗಿರಿ ಕೆಇಬಿ‌ ಕಚೇರಿಯಲ್ಲಿ ‌ಲೆಕ್ಕಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ದಾಳಿ ವೇಳೆ ರಾಜು ಮನೆಯಲ್ಲಿ ನಗದು, ಚಿನ್ನಾಭರಣ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಪತ್ತೆಯಾಗಿವೆ ಎಂಬ ಮಾಹಿತಿ ಸಿಕ್ಕಿದೆ.

ರಾಜ್ಯದಲ್ಲಿ ಏಕಕಾಲಕ್ಕೆ 28 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 9 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದ್ದು ರಾಜ್ಯದ 11 ಜಿಲ್ಲೆಗಳಲ್ಲಿ ಎಸಿಬಿ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ. ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಸೂಪರಿಂಟೆಂಡೆಂಟ್ ಇಂಜಿನಿಯರ್ ಮುನಿಗೋಪಾಲರಾಜು, ಮೈಸೂರು ನಗರ ಯೋಜನೆ ಇಲಾಖೆ ಜಂಟಿ ನಿರ್ದೇಶಕ ಸುಬ್ರಹ್ಮಣ್ಯ ಕೆ.ವಡ್ಡರ್, ಮೈಸೂರು ಆರ್‌ಟಿಒ, ಎಫ್‌ಡಿಎ ಚೆನ್ನವೀರಪ್ಪ, ಚಿಕ್ಕಬಳ್ಳಾಪುರದ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಕೃಷ್ಣೇಗೌಡ, ಬೆಳಗಾವಿ ವಿಭಾಗ ಡೆಪ್ಯುಟಿ ಚೀಫ್ ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟರ್ ಹನಮಂತ ಶಿವಪ್ಪ ಚಿಕ್ಕಣ್ಣನವರ್, ಯಾದಗಿರಿ ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತರ್, ಬಿಎಂಟಿಎಫ್ ಪೊಲೀಸ್ ಇನ್ಸ್‌ಪೆಕ್ಟರ್ ವಿಕ್ಟರ್ ಸಿಮೊನ್, ದಾವಣಗೆರೆ ವಿಭಾಗ ಫ್ಯಾಕ್ಟರೀಸ್ & ಬಾಯ್ಲರ್ಸ್ ಡೆಪ್ಯುಟಿ ಡೈರೆಕ್ಟರ್ ಕೆ.ಎಂ.ಪ್ರಥಮ್, ಯಲಹಂಕ ವಿಭಾಗ ಬಿಬಿಎಂಪಿ ನಗರ ಯೋಜನೆ ಕಚೇರಿ ಅಸಿಸ್ಟೆಂಟ್ ಡೈರೆಕ್ಟರ್, ಜೂನಿಯರ್ ಇಂಜಿನಿಯರ್ ಕೆ.ಸುಬ್ರಹ್ಮಣ್ಯಂ ಸೇರಿದಂತೆ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ.

ಇದನ್ನೂ ಓದಿ: ಎಸಿಎಫ್ ಶಿವಶಂಕರ್ ಮನೆ ಮೇಲೆ ಎಸಿಬಿ ದಾಳಿ: ₹ 3.79 ಕೋಟಿ ಮೌಲ್ಯದ ಆಸ್ತಿ ಪತ್ತೆ

Published On - 7:58 am, Tue, 9 March 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್