AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ-ಚಾಮರಾಜನಗರದಲ್ಲಿ ಎಸಿಬಿ ದಾಳಿ: ಲಂಚ ಪಡೆಯುತ್ತಿದ್ದ ಅಧಿಕಾರಿಗಳು ಬಲೆಗೆ

ಲಂಚ ಪಡೆಯುತ್ತಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಇಬ್ಬರು ಇನ್ಸ್​​ಪೆಕ್ಟರ್​ಗಳು ಹಾಗೂ ಕೃಷಿ ವಿವಿ ಅಧಿಕಾರಿಯನ್ನು ಎಸಿಬಿ ಬಲೆಗೆ ಕೆಡವಿದೆ.

ಶಿವಮೊಗ್ಗ-ಚಾಮರಾಜನಗರದಲ್ಲಿ ಎಸಿಬಿ ದಾಳಿ: ಲಂಚ ಪಡೆಯುತ್ತಿದ್ದ ಅಧಿಕಾರಿಗಳು ಬಲೆಗೆ
ಎಸಿಬಿ ದಾಳಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on:Dec 04, 2021 | 9:38 PM

Share

ಶಿವಮೊಗ್ಗ: ವಿಶ್ವವಿದ್ಯಾಲಯದ ಬಾಡಿಗೆ ವಾಹನದ ಬಿಲ್ ಮಂಜೂರು ಮಾಡಲು ಲಂಚ ಕೇಳಿದ ಹಣಕಾಸು ವಿಭಾಗದ ಅಧಿಕಾರಿ ಗಣೇಶಪ್ಪ ಭ್ರಷ್ಟಾಚಾರ ನಿಗ್ರಹ ದಳದ (Anti Corruption Bureau – ACB) ಬಲೆಗೆ ಬಿದ್ದಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಗಣೇಶಪ್ಪ ಎಸಿಬಿ ಬಲೆಗೆ ಬಿದ್ದವರು. ವಿಶ್ವವಿದ್ಯಾಲಯದ ಬಾಡಿಗೆ ವಾಹನದ ₹ 1 ಲಕ್ಷ ಬಿಲ್​ ಮಂಜೂರು ಮಾಡಲು ₹ 5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ವಾಹನ ಮಾಲೀಕನಿಂದ ಲಂಚ ಪಡೆಯುವಾಗ ಎಸಿಬಿ ಅದಿಕಾರಿಗಳು ದಾಳಿ ನಡೆಸಿ, ಗಣೇಶಪ್ಪನನ್ನು ಬಂಧಿಸಿದರು.

ವಾಣಿಜ್ಯ ತೆರಿಗೆ ಆಯುಕ್ತ ಬಂಧನ ಚಾಮರಾಜನಗರ: ಲಂಚ ಪಡೆಯುತ್ತಿದ್ದ ವಾಣಿಜ್ಯ ತೆರಿಗೆ ಇಲಾಖೆಯ ಇಬ್ಬರು ಇನ್ಸ್​​ಪೆಕ್ಟರ್​ಗಳನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡರು. ಚಾಮರಾಜನಗರದ ವಾಣಿಜ್ಯ ತೆರಿಗೆ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿದ ಎಸಿಬಿ, ಲಂಚ ಪಡೆಯುತ್ತಿದ್ದ ರವಿಕುಮಾರ್, ಅವಿನಾಶ್ ಅವರನ್ನು ಬಂಧಿಸಿತು. ಚಾಮರಾಜನಗರ ತಾಲ್ಲೂಕು ನಾಗವಳ್ಳಿ ಗ್ರಾಮದ ಅಂಗಡಿ ಮಾಲೀಕ ತೌಸಿಫ್ ಎಂಬುವವರಿಂದ ಇವರು ₹ 7 ಸಾವಿರ ಲಂಚ ಪಡೆಯುವಾಗ ಅಧಿಕಾರಿಗಳು ವಶಕ್ಕೆ ಪಡೆದರು. ಜಿಎಸ್​ಟಿ ಕಟ್ಟುವ ಬದಲು ನಮಗೆ ಹಣ ಕೊಡು ಎಂದು ಅಧಿಕಾರಿಗಳು ಹೇಳಿದ್ದರು. ಈ ಪೈಕಿ ರವಿಕುಮಾರ್ ₹ 2 ಸಾವಿರ ಮತ್ತು ಅವಿನಾಶ್ ₹ 5 ಸಾವಿರ ಹಂಚಿಕೆ ಮಾಡಿಕೊಂಡಿದ್ದರು ಎನ್ನಲಾಗಿದೆ. ವಿಚಾರಣೆ ಪ್ರಗತಿಯಲ್ಲಿದೆ.

ರುದ್ರೇಶಪ್ಪ ಜಾಮೀನು ಅರ್ಜಿ ತಿರಸ್ಕಾರ ಶಿವಮೊಗ್ಗ: ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಮನೆ ಮೇಲೆ ಎಸಿಬಿ ದಾಳಿ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಶನಿವಾರ ಶಿವಮೊಗ್ಗದ 1ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು. ಗದಗದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕನಾಗಿರುವ ರುದ್ರೇಶಪ್ಪ ಮನೆ ಮೇಲೆ ಎಸಿಬಿ ದಾಳಿ ವೇಳೆ ಕೋಟ್ಯಂತರ ಮೌಲ್ಯದ ಚಿನ್ನಾಭರಣ, ನಗದು ಮತ್ತು ಆಸ್ತಿ ವಿವರಗಳು ಪತ್ತೆಯಾಗಿದ್ದವು. ರುದ್ರೇಶಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ನ.25ರಿಂದ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿಯು ಜಾಮೀನಿಗಾಗಿ ಆರೋಪಿಯು ಹೈಕೋರ್ಟ್​ಗೆ ಮನವಿ ಸಲ್ಲಿಸುವ ಸಾಧ್ಯತೆಯಿದೆ.

ರೈತ ಆತ್ಮಹತ್ಯೆ ರಾಯಚೂರು: ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದ ಅಪಾರ ಪ್ರಮಾಣದ ಬೆಳೆಹಾನಿಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೆ.ಬಸಾಪುರ ಗ್ರಾಮದ ರೈತ ಶರಣಪ್ಪ (31) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಳೆಯಿಂದಾಗಿ ಭತ್ತದ ಬೆಳೆ ಹಾನಿಯಾಗಿತ್ತು. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:38 pm, Sat, 4 December 21

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ