AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮತ್ತು ಮೈಸೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ; ಲಕ್ಷ ಲಕ್ಷ ನಗದು, ಚಿನ್ನಾಭರಣ ಪತ್ತೆ

ಬೆಂಗಳೂರಿನ ಸಿಟಿಓ ಸೈಯದ್ ಮೊಹಮದ್ ಮನೆ ಮೇಲೆ ದಾಳಿಯಲ್ಲಿ ಮನೆಯ ಶೋಧನೆಯಲ್ಲಿ 3,35,300 ನಗದು ಹಣ, 384 ಗ್ರಾಂ ಚಿನ್ನಾಭರಣಗಳು, 1 ಸ್ವಿಫ್ಟ್ ಕಾರು, 1 ದ್ವಿಚಕ್ರ ವಾಹನ ಪತ್ತೆ ಆಗಿದೆ.

ಬೆಂಗಳೂರು ಮತ್ತು ಮೈಸೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ; ಲಕ್ಷ ಲಕ್ಷ ನಗದು, ಚಿನ್ನಾಭರಣ ಪತ್ತೆ
ಎಸಿಬಿ ದಾಳಿ
TV9 Web
| Edited By: |

Updated on: Apr 07, 2022 | 8:59 PM

Share

ಬೆಂಗಳೂರು: ಬೆಂಗಳೂರು, ಮೈಸೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ (ACB Raid) ಮಾಡಿದೆ. ಓರ್ವ ಸಿಟಿಐ ಹಾಗೂ ಕಾರು ಚಾಲಕನ ಮನೆ ಮೇಲೆ ದಾಳಿ ಮಾಡಲಾಗಿದೆ. ಸಿಟಿಓ ಸೈಯದ್ ಮೊಹಮದ್ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದ್ದು, ಮೈಸೂರಿನ ಸಿಟಿ ಐ ಸಿ.ಎಂ.ಯಶವಂತ್ ಮನೆ ಮೇಲೆ ಕೂಡ ದಾಳಿ ಮಾಡಲಾಗಿದೆ. ಕಾರು ಚಾಲಕ ಕೃಷ್ಣಮೂರ್ತಿಯ ಮಲೇಶ್ವರಂ ನಿವಾಸದ ಮೇಲೂ ಎಸಿಬಿ ದಾಳಿ ಮಾಡಿದ್ದು, ಲಾರಿ ಚಾಲಕರನ್ನು ತಡೆದು ಬೆದರಿಸಿ ಲಂಚ ಪಡೆದ ಆರೋಪ ಮಾಡಲಾಗಿದೆ. ಪೋನ್ ಪೇ ಮೂಲಕ ಹಣ ಪಡೆದಿದ್ದ ಆರೋಪಿತ ಅಧಿಕಾರಿಗಳು. ಈ‌ ಹಿನ್ನಲೆ ಎಸಿಬಿಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಇಂದು ಮುಂಜಾನೆಯೇ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಸುಮಾರು ಎರಡು ಗಂಟೆಗಳ ಕಾಲ ಮನೆಯಲ್ಲಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರಿನ ಸಿಟಿಓ ಸೈಯದ್ ಮೊಹಮದ್ ಮನೆ ಮೇಲೆ ದಾಳಿಯಲ್ಲಿ ಮನೆಯ ಶೋಧನೆಯಲ್ಲಿ 3,35,300 ನಗದು ಹಣ, 384 ಗ್ರಾಂ ಚಿನ್ನಾಭರಣಗಳು, 1 ಸ್ವಿಫ್ಟ್ ಕಾರು, 1 ದ್ವಿಚಕ್ರ ವಾಹನ ಪತ್ತೆ ಆಗಿದೆ. ಕಾರು ಚಾಲಕ ಪಿ. ಕೃಷ್ಣಮೂರ್ತಿ ಮನೆ ಮೇಲೆ ದಾಳಿ ವೇಳೆ ಮನೆಯ ಶೋಧನೆಯಲ್ಲಿ 2,100 ನಗದು ಹಣ ಪತ್ತೆ ಆಗಿದ್ದು, ಮೈಸೂರಿನ ಸಿಟಿಐ ಸಿ. ಎಂ. ಯಶವಂತ್ ಮನೆಯಲ್ಲಿ 50 ಗ್ರಾಂ ಚಿನ್ನಾಭರಣಗಳು, 1 ಕೆಜಿ ಬೆಳ್ಳಿ ಸಾಮಾನುಗಳು, ವಿವಿಧ ಸ್ವತ್ತುಗಳ ದಾಖಲಾತಿಗಳು ಪತ್ತೆಯಾಗಿವೆ. ಅಧಿಕಾರಿ ಸಿಬ್ಬಂದಿಗಳು ಚೆಕ್ ಪೋಸ್ಟ್‌ಗಳಲ್ಲಿ ವಾಹನಗಳ ಭೌತಿಕ ತಪಾಸಣೆಯ ಸಮಯದಲ್ಲಿ ಲಂಚ ತೆಗೆದುಕೊಳ್ಳಲಾಗಿದೆ. ಗ್ರಾಹಕರಿಂದ ಲಂಚದ ರೂಪದಲ್ಲಿ ಗೂಗಲ್ ಪೇ ಹಾಗೂ ಫೋನ್ ಪೇ ಮೂಲಕ ಹಣವನ್ನು ವರ್ಗಾವಣೆ ಮಾಡಲಾಗಿದೆ. ಈ ಹಿನ್ನಲೆ ಅಧಿಕಾರಿ ಸಿಬ್ಬಂದಿಗಳ ಮೊಬೈಲ್‌ಗಳನ್ನು ಎಸಿಬಿ ವಶಕ್ಕೆ ಪಡೆದುಕೊಂಡಿದೆ. ಎಸಿಬಿ ಅಧಿಕಾರಿಗಳಿಂದ ಪ್ರಕರಣದ ತನಿಖೆ ಮುಂದುವರೆದಿದೆ.

ಇದನ್ನೂ ಓದಿ:

Viral Video: ಸೂಟ್ ಧರಿಸಿ ಚಾಟ್ ಮತ್ತು ಗೋಲ್ಗಪ್ಪ ಮಾರಾಟ ಮಾಡೋದನ್ನ ಎಲ್ಲಾದರೂ ನೋಡಿದ್ದೀರಾ..!

Birbhum killings ಬಿರ್ಭೂಮ್ ಹತ್ಯೆ ಪ್ರಕರಣ: ನಾಲ್ವರನ್ನು ಮುಂಬೈಯಿಂದ ಬಂಧಿಸಿದ ಸಿಬಿಐ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!