AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮತ್ತು ಮೈಸೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ; ಲಕ್ಷ ಲಕ್ಷ ನಗದು, ಚಿನ್ನಾಭರಣ ಪತ್ತೆ

ಬೆಂಗಳೂರಿನ ಸಿಟಿಓ ಸೈಯದ್ ಮೊಹಮದ್ ಮನೆ ಮೇಲೆ ದಾಳಿಯಲ್ಲಿ ಮನೆಯ ಶೋಧನೆಯಲ್ಲಿ 3,35,300 ನಗದು ಹಣ, 384 ಗ್ರಾಂ ಚಿನ್ನಾಭರಣಗಳು, 1 ಸ್ವಿಫ್ಟ್ ಕಾರು, 1 ದ್ವಿಚಕ್ರ ವಾಹನ ಪತ್ತೆ ಆಗಿದೆ.

ಬೆಂಗಳೂರು ಮತ್ತು ಮೈಸೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ; ಲಕ್ಷ ಲಕ್ಷ ನಗದು, ಚಿನ್ನಾಭರಣ ಪತ್ತೆ
ಎಸಿಬಿ ದಾಳಿ
TV9 Web
| Edited By: |

Updated on: Apr 07, 2022 | 8:59 PM

Share

ಬೆಂಗಳೂರು: ಬೆಂಗಳೂರು, ಮೈಸೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ (ACB Raid) ಮಾಡಿದೆ. ಓರ್ವ ಸಿಟಿಐ ಹಾಗೂ ಕಾರು ಚಾಲಕನ ಮನೆ ಮೇಲೆ ದಾಳಿ ಮಾಡಲಾಗಿದೆ. ಸಿಟಿಓ ಸೈಯದ್ ಮೊಹಮದ್ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ಮಾಡಲಾಗಿದ್ದು, ಮೈಸೂರಿನ ಸಿಟಿ ಐ ಸಿ.ಎಂ.ಯಶವಂತ್ ಮನೆ ಮೇಲೆ ಕೂಡ ದಾಳಿ ಮಾಡಲಾಗಿದೆ. ಕಾರು ಚಾಲಕ ಕೃಷ್ಣಮೂರ್ತಿಯ ಮಲೇಶ್ವರಂ ನಿವಾಸದ ಮೇಲೂ ಎಸಿಬಿ ದಾಳಿ ಮಾಡಿದ್ದು, ಲಾರಿ ಚಾಲಕರನ್ನು ತಡೆದು ಬೆದರಿಸಿ ಲಂಚ ಪಡೆದ ಆರೋಪ ಮಾಡಲಾಗಿದೆ. ಪೋನ್ ಪೇ ಮೂಲಕ ಹಣ ಪಡೆದಿದ್ದ ಆರೋಪಿತ ಅಧಿಕಾರಿಗಳು. ಈ‌ ಹಿನ್ನಲೆ ಎಸಿಬಿಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಇಂದು ಮುಂಜಾನೆಯೇ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಸುಮಾರು ಎರಡು ಗಂಟೆಗಳ ಕಾಲ ಮನೆಯಲ್ಲಿ ಪರಿಶೀಲನೆ ಮಾಡಿದ್ದಾರೆ.

ಬೆಂಗಳೂರಿನ ಸಿಟಿಓ ಸೈಯದ್ ಮೊಹಮದ್ ಮನೆ ಮೇಲೆ ದಾಳಿಯಲ್ಲಿ ಮನೆಯ ಶೋಧನೆಯಲ್ಲಿ 3,35,300 ನಗದು ಹಣ, 384 ಗ್ರಾಂ ಚಿನ್ನಾಭರಣಗಳು, 1 ಸ್ವಿಫ್ಟ್ ಕಾರು, 1 ದ್ವಿಚಕ್ರ ವಾಹನ ಪತ್ತೆ ಆಗಿದೆ. ಕಾರು ಚಾಲಕ ಪಿ. ಕೃಷ್ಣಮೂರ್ತಿ ಮನೆ ಮೇಲೆ ದಾಳಿ ವೇಳೆ ಮನೆಯ ಶೋಧನೆಯಲ್ಲಿ 2,100 ನಗದು ಹಣ ಪತ್ತೆ ಆಗಿದ್ದು, ಮೈಸೂರಿನ ಸಿಟಿಐ ಸಿ. ಎಂ. ಯಶವಂತ್ ಮನೆಯಲ್ಲಿ 50 ಗ್ರಾಂ ಚಿನ್ನಾಭರಣಗಳು, 1 ಕೆಜಿ ಬೆಳ್ಳಿ ಸಾಮಾನುಗಳು, ವಿವಿಧ ಸ್ವತ್ತುಗಳ ದಾಖಲಾತಿಗಳು ಪತ್ತೆಯಾಗಿವೆ. ಅಧಿಕಾರಿ ಸಿಬ್ಬಂದಿಗಳು ಚೆಕ್ ಪೋಸ್ಟ್‌ಗಳಲ್ಲಿ ವಾಹನಗಳ ಭೌತಿಕ ತಪಾಸಣೆಯ ಸಮಯದಲ್ಲಿ ಲಂಚ ತೆಗೆದುಕೊಳ್ಳಲಾಗಿದೆ. ಗ್ರಾಹಕರಿಂದ ಲಂಚದ ರೂಪದಲ್ಲಿ ಗೂಗಲ್ ಪೇ ಹಾಗೂ ಫೋನ್ ಪೇ ಮೂಲಕ ಹಣವನ್ನು ವರ್ಗಾವಣೆ ಮಾಡಲಾಗಿದೆ. ಈ ಹಿನ್ನಲೆ ಅಧಿಕಾರಿ ಸಿಬ್ಬಂದಿಗಳ ಮೊಬೈಲ್‌ಗಳನ್ನು ಎಸಿಬಿ ವಶಕ್ಕೆ ಪಡೆದುಕೊಂಡಿದೆ. ಎಸಿಬಿ ಅಧಿಕಾರಿಗಳಿಂದ ಪ್ರಕರಣದ ತನಿಖೆ ಮುಂದುವರೆದಿದೆ.

ಇದನ್ನೂ ಓದಿ:

Viral Video: ಸೂಟ್ ಧರಿಸಿ ಚಾಟ್ ಮತ್ತು ಗೋಲ್ಗಪ್ಪ ಮಾರಾಟ ಮಾಡೋದನ್ನ ಎಲ್ಲಾದರೂ ನೋಡಿದ್ದೀರಾ..!

Birbhum killings ಬಿರ್ಭೂಮ್ ಹತ್ಯೆ ಪ್ರಕರಣ: ನಾಲ್ವರನ್ನು ಮುಂಬೈಯಿಂದ ಬಂಧಿಸಿದ ಸಿಬಿಐ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್