AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜಮೀನು ರಿಜಿಸ್ಟರ್ ಆರೋಪ: ಅಧಿಕಾರಿಗಳ ಮನೆ ಮೇಲೆ ACB ದಾಳಿ

ಯಲಹಂಕದ ಚಿಕ್ಕಬೆಟ್ಟಹಳ್ಳಿಯ ಗೋಮಾಳ ಜಮೀನಿನಲ್ಲಿ 1968 ರಿಂದ ವ್ಯವಸಾಯ ಮಾಡಿಕೊಂಡು ಬಂದವರಿಗೆ ಸಾಗುವಳಿ ಚೀಟಿ ನೀಡದೆ ಬೇರೆಯವರಿಗೆ ಪರಭಾರೆ ಮಾಡಿದ್ದಾರೆ ಎನ್ನುವ ವಿಚಾರ ತಿಳಿದುಬಂದಿದೆ.

ಸರ್ಕಾರಿ ಜಮೀನು ರಿಜಿಸ್ಟರ್ ಆರೋಪ: ಅಧಿಕಾರಿಗಳ ಮನೆ ಮೇಲೆ ACB ದಾಳಿ
ಮನೆಗಳ ಮೇಲೆ ಎಸಿಬಿ ದಾಳಿ
sandhya thejappa
sandhya thejappa| Edited By: |

Updated on:Jan 13, 2021 | 6:45 PM

Share

ಬೆಂಗಳೂರು: ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಸರ್ಕಾರಿ ಅಧಿಕಾರಿಗಳು ರಿಜಿಸ್ಟರ್ ಮಾಡಿರುವ ಆರೋಪ ಕೇಳಿಬಂದಿದ್ದು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ಖಾಸಗಿ ವ್ಯಕ್ತಿಯ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಯಲಹಂಕದ ಚಿಕ್ಕಬೆಟ್ಟಹಳ್ಳಿಯ ಗೋಮಾಳ ಜಮೀನಿನಲ್ಲಿ 1968 ರಿಂದ ವ್ಯವಸಾಯ ಮಾಡಿಕೊಂಡು ಬಂದವರಿಗೆ ಸಾಗುವಳಿ ಚೀಟಿ ನೀಡದೆ ಬೇರೆಯವರಿಗೆ ಪರಭಾರೆ ಮಾಡಿದ್ದಾರೆ ಎನ್ನುವ ವಿಚಾರ ತಿಳಿದುಬಂದಿದೆ. ಗೋಮಾಳ ಜಮೀನಿನ ಮೂಲ ಮಂಜೂರಾತಿ ಕಡತವೂ ತಾಲ್ಲೂಕು ಕಚೇರಿಯಲ್ಲಿ ಲಭ್ಯವಿಲ್ಲದ ಕಾರಣ ಈ ಸರ್ಕಾರಿ ಜಮೀನು ವಿವಾದಾತ್ಮಕ ಪ್ರಕರಣದಲ್ಲಿದೆ ಎಂದು ಕೋರ್ಟ್ ಪರಭಾರೆ ನಿಷಿದ್ಧ ಎಂದು ಆದೇಶ ನೀಡಿತ್ತು. ಆದರೆ ಕೋರ್ಟ್ ಆದೇಶ ಉಲ್ಲಂಘಿಸಿ ಯಲಹಂಕ ತಾಲ್ಲೂಕು ಕಚೇರಿಯ ಅಧಿಕಾರಿಗಳು ಅಕ್ರಮ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ರಿಜಿಸ್ಟರ್ ಮಾಡಿರುವ ಆರೋಪ ಕೇಳಿಬಂದಿದೆ.

ರಾಜಸ್ವ ನಿರೀಕ್ಷಕರಾದ ಬಿ.ಕೆ.ಆಶಾರವರ ಬೆಂಗಳೂರಿನ ಅನ್ನಪೂರ್ಣೆಶ್ವರಿ ನಗರದ ಹೆಲ್ತ್ ಲೇಔಟ್​ನ ಮನೆ, ಶಿರಸ್ತೆದಾರ್ ಪಿ.ಎಸ್.ಆರ್.ಪ್ರಸಾದ್ ಹಾಗೂ ಖಾಸಗಿ ವ್ಯಕ್ತಿಯಾದ ಕೆ.ವಿ. ನಾಯ್ಡುಗೆ ಸೇರಿದ ನಾಗಶೆಟ್ಟಿಹಳ್ಳಿಯ ಡಾಲರ್ಸ್ ಕಾಲೋನಿಯ ಮನೆಯಲ್ಲಿ ಎಸಿಬಿ ಶೋಧ ಕಾರ್ಯ ನಡೆಸಿದ್ದಾರೆ.

ಆಗ 251ಕ್ಕೆ ಸ್ಮಾರ್ಟ್​ಫೋನ್, ಈಗ ಡ್ರೈ ಫ್ರುಟ್ಸ್ ವ್ಯಾಪಾರಿಗಳಿಗೆ ಮೋಸ : 200 ಕೋಟಿ ರೂ. ವಂಚನೆ ಆರೋಪದಡಿ ಮೋಹಿತ್ ಗೋಯೆಲ್ ಬಂಧನ

Published On - 6:45 pm, Wed, 13 January 21

Follow Us
sandhya thejappa
sandhya thejappa
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ