AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಜಮೀನು ರಿಜಿಸ್ಟರ್ ಆರೋಪ: ಅಧಿಕಾರಿಗಳ ಮನೆ ಮೇಲೆ ACB ದಾಳಿ

ಯಲಹಂಕದ ಚಿಕ್ಕಬೆಟ್ಟಹಳ್ಳಿಯ ಗೋಮಾಳ ಜಮೀನಿನಲ್ಲಿ 1968 ರಿಂದ ವ್ಯವಸಾಯ ಮಾಡಿಕೊಂಡು ಬಂದವರಿಗೆ ಸಾಗುವಳಿ ಚೀಟಿ ನೀಡದೆ ಬೇರೆಯವರಿಗೆ ಪರಭಾರೆ ಮಾಡಿದ್ದಾರೆ ಎನ್ನುವ ವಿಚಾರ ತಿಳಿದುಬಂದಿದೆ.

ಸರ್ಕಾರಿ ಜಮೀನು ರಿಜಿಸ್ಟರ್ ಆರೋಪ: ಅಧಿಕಾರಿಗಳ ಮನೆ ಮೇಲೆ ACB ದಾಳಿ
ಮನೆಗಳ ಮೇಲೆ ಎಸಿಬಿ ದಾಳಿ
Follow us
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 13, 2021 | 6:45 PM

ಬೆಂಗಳೂರು: ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳ ಹೆಸರಿಗೆ ಸರ್ಕಾರಿ ಅಧಿಕಾರಿಗಳು ರಿಜಿಸ್ಟರ್ ಮಾಡಿರುವ ಆರೋಪ ಕೇಳಿಬಂದಿದ್ದು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ಖಾಸಗಿ ವ್ಯಕ್ತಿಯ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಯಲಹಂಕದ ಚಿಕ್ಕಬೆಟ್ಟಹಳ್ಳಿಯ ಗೋಮಾಳ ಜಮೀನಿನಲ್ಲಿ 1968 ರಿಂದ ವ್ಯವಸಾಯ ಮಾಡಿಕೊಂಡು ಬಂದವರಿಗೆ ಸಾಗುವಳಿ ಚೀಟಿ ನೀಡದೆ ಬೇರೆಯವರಿಗೆ ಪರಭಾರೆ ಮಾಡಿದ್ದಾರೆ ಎನ್ನುವ ವಿಚಾರ ತಿಳಿದುಬಂದಿದೆ. ಗೋಮಾಳ ಜಮೀನಿನ ಮೂಲ ಮಂಜೂರಾತಿ ಕಡತವೂ ತಾಲ್ಲೂಕು ಕಚೇರಿಯಲ್ಲಿ ಲಭ್ಯವಿಲ್ಲದ ಕಾರಣ ಈ ಸರ್ಕಾರಿ ಜಮೀನು ವಿವಾದಾತ್ಮಕ ಪ್ರಕರಣದಲ್ಲಿದೆ ಎಂದು ಕೋರ್ಟ್ ಪರಭಾರೆ ನಿಷಿದ್ಧ ಎಂದು ಆದೇಶ ನೀಡಿತ್ತು. ಆದರೆ ಕೋರ್ಟ್ ಆದೇಶ ಉಲ್ಲಂಘಿಸಿ ಯಲಹಂಕ ತಾಲ್ಲೂಕು ಕಚೇರಿಯ ಅಧಿಕಾರಿಗಳು ಅಕ್ರಮ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ರಿಜಿಸ್ಟರ್ ಮಾಡಿರುವ ಆರೋಪ ಕೇಳಿಬಂದಿದೆ.

ರಾಜಸ್ವ ನಿರೀಕ್ಷಕರಾದ ಬಿ.ಕೆ.ಆಶಾರವರ ಬೆಂಗಳೂರಿನ ಅನ್ನಪೂರ್ಣೆಶ್ವರಿ ನಗರದ ಹೆಲ್ತ್ ಲೇಔಟ್​ನ ಮನೆ, ಶಿರಸ್ತೆದಾರ್ ಪಿ.ಎಸ್.ಆರ್.ಪ್ರಸಾದ್ ಹಾಗೂ ಖಾಸಗಿ ವ್ಯಕ್ತಿಯಾದ ಕೆ.ವಿ. ನಾಯ್ಡುಗೆ ಸೇರಿದ ನಾಗಶೆಟ್ಟಿಹಳ್ಳಿಯ ಡಾಲರ್ಸ್ ಕಾಲೋನಿಯ ಮನೆಯಲ್ಲಿ ಎಸಿಬಿ ಶೋಧ ಕಾರ್ಯ ನಡೆಸಿದ್ದಾರೆ.

ಆಗ 251ಕ್ಕೆ ಸ್ಮಾರ್ಟ್​ಫೋನ್, ಈಗ ಡ್ರೈ ಫ್ರುಟ್ಸ್ ವ್ಯಾಪಾರಿಗಳಿಗೆ ಮೋಸ : 200 ಕೋಟಿ ರೂ. ವಂಚನೆ ಆರೋಪದಡಿ ಮೋಹಿತ್ ಗೋಯೆಲ್ ಬಂಧನ

Published On - 6:45 pm, Wed, 13 January 21

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ