AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಠಾಣೆಯ ಮೇಲೆ ಎಸಿಬಿ ದಾಳಿ; ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಪಿಸಿಗಳು ವಶಕ್ಕೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಠಾಣೆಯಲ್ಲಿ ಪೊಲೀಸರು ಅಮಾಯಕರ ಬಳಿ ಹಣ ವಸೂಲಿಗೆ ಮುಂದಾಗಿದ್ದರು. ಅನಧಿಕೃತ ಪಾನ್ ಮಸಾಲ ಕಾರ್ಖಾನೆ ನಡೆಸುತ್ತಿದ್ದಿರಿ ಎಂದು ಹೆದರಿಸಿ ಬೋರಗಾಂವ್‌ನಲ್ಲಿರುವ ಪಾನ್ ಮಸಾಲ ಕಾರ್ಖಾನೆ ಮಾಲೀಕ ರಾಜು ಪಾಶ್ಚಾಪುರೆ ಬಳಿ ₹50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು.

ಪೊಲೀಸ್ ಠಾಣೆಯ ಮೇಲೆ ಎಸಿಬಿ ದಾಳಿ; ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಪಿಸಿಗಳು ವಶಕ್ಕೆ
ಸದಲಗಾ ಪೊಲೀಸ್ ಠಾಣೆ
TV9 Web
| Edited By: |

Updated on: Jul 09, 2021 | 9:55 AM

Share

ಬೆಳಗಾವಿ: ಸದಲಗಾ ಪೊಲೀಸ್ ಠಾಣೆಯ ಮೇಲೆ ರಾತ್ರಿ ಎಸಿಬಿ ದಾಳಿ ನಡೆಸಿದೆ. ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಪಿಸಿಗಳು ಬಲೆಗೆ ಬಿದ್ದಿದ್ದಾರೆ. ಸದಲಗಾ ಪೊಲೀಸ್ ಠಾಣೆ ಎಸ್‌ಐ ಕುಮಾರ್ ಹಿತ್ತಲಮನಿ ಕಾನ್ಸ್‌ಟೇಬಲ್‌ ಮಾಯಪ್ಪ ಗಡ್ಡೆ, ಶ್ರೀಶೈಲ ಮಂಗಿ ಬಲೆಗೆ ಬಿದ್ದ ಪೊಲೀಸರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಠಾಣೆಯಲ್ಲಿ ಪೊಲೀಸರು ಅಮಾಯಕರ ಬಳಿ ಹಣ ವಸೂಲಿಗೆ ಮುಂದಾಗಿದ್ದರು. ಅನಧಿಕೃತ ಪಾನ್ ಮಸಾಲ ಕಾರ್ಖಾನೆ ನಡೆಸುತ್ತಿದ್ದಿರಿ ಎಂದು ಹೆದರಿಸಿ ಬೋರಗಾಂವ್‌ನಲ್ಲಿರುವ ಪಾನ್ ಮಸಾಲ ಕಾರ್ಖಾನೆ ಮಾಲೀಕ ರಾಜು ಪಾಶ್ಚಾಪುರೆ ಬಳಿ ₹50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ನೊಂದ ರಾಜು ಪಾಶ್ಚಾಪುರೆ ಈ ಬಗ್ಗೆ ಎಸಿಬಿಗೆ ದೂರು ನೀಡಿದ್ದರು. ಅದರಂತೆ ತಡರಾತ್ರಿ 40 ಸಾವಿರ ರೂ. ಪಡೆಯುವಾಗ ಎಸಿಬಿ ದಾಳಿ ನಡೆದಿದ್ದು ಪಿಎಸ್‌ಐ, ಇಬ್ಬರು ಪಿಸಿಗಳು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

ರಕ್ಷಿಸಬೇಕಾದವರೆ ಹೆದರಿಸಿ, ಬೆದರಿಸಿ ಹಣ ವಸೂಲಿಗೆ ಮುಂದಾಗಿದ್ದು ಮಾತ್ರ ವಿಪರ್ಯಾಸ. ಸದ್ಯ ಇಂತಹ ಲಂಚಬಾಕರ ಕೃತ್ಯವನ್ನು ಪಾನ್ ಮಸಾಲ ಕಾರ್ಖಾನೆ ಮಾಲೀಕ ರಾಜು ಬಯಲು ಮಾಡಿದ್ದಾರೆ.

ACB Raid On Police Station

ಪಿಎಸ್‌ಐ, ಇಬ್ಬರು ಪಿಸಿಗಳು

ಇದನ್ನೂ ಓದಿ: ಆಸ್ತಿಗಾಗಿ ಅಪ್ಪನನ್ನು ಮನೆಯಿಂದ ಹೊರಹಾಕಿದ್ದ ಮಗ ಅರೆಸ್ಟ್; ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಿದ ಪೊಲೀಸರು

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ