AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಠಾಣೆಯ ಮೇಲೆ ಎಸಿಬಿ ದಾಳಿ; ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಪಿಸಿಗಳು ವಶಕ್ಕೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಠಾಣೆಯಲ್ಲಿ ಪೊಲೀಸರು ಅಮಾಯಕರ ಬಳಿ ಹಣ ವಸೂಲಿಗೆ ಮುಂದಾಗಿದ್ದರು. ಅನಧಿಕೃತ ಪಾನ್ ಮಸಾಲ ಕಾರ್ಖಾನೆ ನಡೆಸುತ್ತಿದ್ದಿರಿ ಎಂದು ಹೆದರಿಸಿ ಬೋರಗಾಂವ್‌ನಲ್ಲಿರುವ ಪಾನ್ ಮಸಾಲ ಕಾರ್ಖಾನೆ ಮಾಲೀಕ ರಾಜು ಪಾಶ್ಚಾಪುರೆ ಬಳಿ ₹50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು.

ಪೊಲೀಸ್ ಠಾಣೆಯ ಮೇಲೆ ಎಸಿಬಿ ದಾಳಿ; ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಪಿಸಿಗಳು ವಶಕ್ಕೆ
ಸದಲಗಾ ಪೊಲೀಸ್ ಠಾಣೆ
TV9 Web
| Edited By: |

Updated on: Jul 09, 2021 | 9:55 AM

Share

ಬೆಳಗಾವಿ: ಸದಲಗಾ ಪೊಲೀಸ್ ಠಾಣೆಯ ಮೇಲೆ ರಾತ್ರಿ ಎಸಿಬಿ ದಾಳಿ ನಡೆಸಿದೆ. ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಪಿಸಿಗಳು ಬಲೆಗೆ ಬಿದ್ದಿದ್ದಾರೆ. ಸದಲಗಾ ಪೊಲೀಸ್ ಠಾಣೆ ಎಸ್‌ಐ ಕುಮಾರ್ ಹಿತ್ತಲಮನಿ ಕಾನ್ಸ್‌ಟೇಬಲ್‌ ಮಾಯಪ್ಪ ಗಡ್ಡೆ, ಶ್ರೀಶೈಲ ಮಂಗಿ ಬಲೆಗೆ ಬಿದ್ದ ಪೊಲೀಸರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಠಾಣೆಯಲ್ಲಿ ಪೊಲೀಸರು ಅಮಾಯಕರ ಬಳಿ ಹಣ ವಸೂಲಿಗೆ ಮುಂದಾಗಿದ್ದರು. ಅನಧಿಕೃತ ಪಾನ್ ಮಸಾಲ ಕಾರ್ಖಾನೆ ನಡೆಸುತ್ತಿದ್ದಿರಿ ಎಂದು ಹೆದರಿಸಿ ಬೋರಗಾಂವ್‌ನಲ್ಲಿರುವ ಪಾನ್ ಮಸಾಲ ಕಾರ್ಖಾನೆ ಮಾಲೀಕ ರಾಜು ಪಾಶ್ಚಾಪುರೆ ಬಳಿ ₹50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ನೊಂದ ರಾಜು ಪಾಶ್ಚಾಪುರೆ ಈ ಬಗ್ಗೆ ಎಸಿಬಿಗೆ ದೂರು ನೀಡಿದ್ದರು. ಅದರಂತೆ ತಡರಾತ್ರಿ 40 ಸಾವಿರ ರೂ. ಪಡೆಯುವಾಗ ಎಸಿಬಿ ದಾಳಿ ನಡೆದಿದ್ದು ಪಿಎಸ್‌ಐ, ಇಬ್ಬರು ಪಿಸಿಗಳು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

ರಕ್ಷಿಸಬೇಕಾದವರೆ ಹೆದರಿಸಿ, ಬೆದರಿಸಿ ಹಣ ವಸೂಲಿಗೆ ಮುಂದಾಗಿದ್ದು ಮಾತ್ರ ವಿಪರ್ಯಾಸ. ಸದ್ಯ ಇಂತಹ ಲಂಚಬಾಕರ ಕೃತ್ಯವನ್ನು ಪಾನ್ ಮಸಾಲ ಕಾರ್ಖಾನೆ ಮಾಲೀಕ ರಾಜು ಬಯಲು ಮಾಡಿದ್ದಾರೆ.

ACB Raid On Police Station

ಪಿಎಸ್‌ಐ, ಇಬ್ಬರು ಪಿಸಿಗಳು

ಇದನ್ನೂ ಓದಿ: ಆಸ್ತಿಗಾಗಿ ಅಪ್ಪನನ್ನು ಮನೆಯಿಂದ ಹೊರಹಾಕಿದ್ದ ಮಗ ಅರೆಸ್ಟ್; ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಿದ ಪೊಲೀಸರು

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆಯ ರಾಮನ ದರ್ಶನ ಪಡೆದ 9 ವರ್ಷದ ಬಾಲಕಿ!
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​