AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಪ್ರಕರಣ: ಲಂಚಕ್ಕೆ ಕೈಯೊಡ್ಡಿದ್ದ ಪಿಡಿಒ, ಸಬ್​ ರಿಜಿಸ್ಟ್ರಾರ್ ಎಸಿಬಿ ಬಲೆಗೆ

ಗದಗ: ಲಂಚ ಪಡೆಯುತ್ತಿರುವ ಆರೋಪದ ಮೇರೆಗೆ ಲಕ್ಷ್ಮೇಶ್ವರದ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಡಿವೈಎಸ್​ಪಿ ವಾಸುದೇವ್ ರಾಮ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ದಾಖಲೆ ಇಲ್ಲದ ₹1.10 ಲಕ್ಷ ನಗದು ಪತ್ತೆಯಾಗಿದ್ದು, ಎಸಿಬಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ. ಸಬ್ ರಿಜಿಸ್ಟ್ರಾರ್ ಶ್ರೀಕಾಂತ್ ಹಾಗೂ ಬಾಂಡ್ ರೈಟರ್​ನನ್ನು ಎಸಿಬಿ ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಗ್ರಾ.ಪಂ ಪಿಡಿಒ ಎಸಿಬಿ ಬಲೆಗೆ: ಹಾವೇರಿ: ಕಾಮಗಾರಿಗಳ ಹಣ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ […]

ಪ್ರತ್ಯೇಕ ಪ್ರಕರಣ: ಲಂಚಕ್ಕೆ ಕೈಯೊಡ್ಡಿದ್ದ ಪಿಡಿಒ, ಸಬ್​ ರಿಜಿಸ್ಟ್ರಾರ್ ಎಸಿಬಿ ಬಲೆಗೆ
ಸಾಧು ಶ್ರೀನಾಥ್​
|

Updated on:Dec 12, 2019 | 7:25 PM

Share

ಗದಗ: ಲಂಚ ಪಡೆಯುತ್ತಿರುವ ಆರೋಪದ ಮೇರೆಗೆ ಲಕ್ಷ್ಮೇಶ್ವರದ ಉಪನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಡಿವೈಎಸ್​ಪಿ ವಾಸುದೇವ್ ರಾಮ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾಳಿ ವೇಳೆ ದಾಖಲೆ ಇಲ್ಲದ ₹1.10 ಲಕ್ಷ ನಗದು ಪತ್ತೆಯಾಗಿದ್ದು, ಎಸಿಬಿ ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿದ್ದಾರೆ. ಸಬ್ ರಿಜಿಸ್ಟ್ರಾರ್ ಶ್ರೀಕಾಂತ್ ಹಾಗೂ ಬಾಂಡ್ ರೈಟರ್​ನನ್ನು ಎಸಿಬಿ ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಗ್ರಾ.ಪಂ ಪಿಡಿಒ ಎಸಿಬಿ ಬಲೆಗೆ: ಹಾವೇರಿ: ಕಾಮಗಾರಿಗಳ ಹಣ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಪಂಚಾಯಿತಿ ಪಿಡಿಒ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮ ಪಂಚಾಯಿತಿ ಪಿಡಿಒ ಶಿವಾನಂದ ಹಡಪದ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.

ನರೇಗಾ ಯೋಜನೆಯಲ್ಲಿ ಮಾಡಿದ ಕಾಮಗಾರಿಗಳ ಮೂರೂವರೆ ಲಕ್ಷ ಹಣ ಬಿಡುಗಡೆ ಮಾಡಲು ಒಂದೂವರೆ ಲಕ್ಷಕ್ಕೆ ಡಿಮ್ಯಾಂಡ್ ಮಾಡಿದ್ದರು. ಈ ಸಂಬಂಧ ಗುತ್ತಿಗೆದಾರ ಮಹೇಶ ಸಾಲಮನಿ ಎಂಬುವರಿಂದ 50 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹಾವೇರಿ ಎಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:14 pm, Thu, 12 December 19

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್