AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ACB Raid ಬಯಲಾಗುತ್ತಿದೆ ಅಧಿಕಾರಿಗಳ ಭ್ರಷ್ಟಾಚಾರ.. ನೀರಾವರಿ ಎಂಜಿನಿಯರ್ ಪತ್ನಿ, ಅಳಿಯನ ಹೆಸರಲ್ಲೂ ಇದೆ ಲಾಕರ್

ACB Raid ದಾಳಿ ವೇಳೆ 27 ಎಕರೆ ಆಸ್ತಿ ಖರೀದಿಸಿರುವ ದಾಖಲೆ, ಚೆಕ್​ಬುಕ್​ ಹಾಗೂ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ಲಾಕರ್‌ನಲ್ಲಿ 56.60 ಲಕ್ಷ ಹಣ, ಅರ್ಧ ಕೆಜಿ ಚಿನ್ನ ಪತ್ತೆಯಾಗಿದೆ. ಹಾಗೂ ಇಇ ದೇವರಾಜ್‌ ಪತ್ನಿ, ಅಳಿಯನ ಹೆಸರಲ್ಲಿ ಲಾಕರ್ ಇದೆ.

ACB Raid ಬಯಲಾಗುತ್ತಿದೆ ಅಧಿಕಾರಿಗಳ ಭ್ರಷ್ಟಾಚಾರ.. ನೀರಾವರಿ ಎಂಜಿನಿಯರ್ ಪತ್ನಿ, ಅಳಿಯನ ಹೆಸರಲ್ಲೂ ಇದೆ ಲಾಕರ್
ನೀರಾವರಿ ಇಲಾಖೆ ಅಧಿಕಾರಿ ದೇವರಾಜ್ ಶಿಗ್ಗಾಂವಿ ಲಾಕರ್​ನಲ್ಲಿ ಪತ್ತೆಯಾದ ಹಣ
ಆಯೇಷಾ ಬಾನು
| Edited By: |

Updated on: Feb 02, 2021 | 2:31 PM

Share

ಹುಬ್ಬಳ್ಳಿ: ಬಗೆದಷ್ಟೂ ಹೊರಬರ್ತಿದೆ ನುಂಗಣ್ಣರ ಬ್ರಹ್ಮಾಂಡ ಭ್ರಷ್ಟಾಚಾರ. ಸಣ್ಣ ನೀರಾವರಿ ಇಲಾಖೆ ಅಧಿಕಾರಿ ಮನೆಯಲ್ಲಿ ಕೈ ಇಟ್ಟಲ್ಲೆಲ್ಲಾ ಹಣ ಸಿಗುತ್ತಿದೆ. ಸಣ್ಣ ನೀರಾವರಿ ಇಲಾಖೆ ಇಇ ದೇವರಾಜ್ ಶಿಗ್ಗಾಂವಿ ಮನೆ ಸೇರಿದಂತೆ ಏಕಕಾಲಕ್ಕೆ ನಗರದ ಮೂರು ಕಡೆಗಳಲ್ಲಿ ಎಸಿಬಿ ಟೀಂ ದಾಳಿ ನಡೆಸಿದೆ.

ದಾಳಿ ವೇಳೆ 27 ಎಕರೆ ಆಸ್ತಿ ಖರೀದಿಸಿರುವ ದಾಖಲೆ, ಚೆಕ್​ಬುಕ್​ ಹಾಗೂ ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನ ಲಾಕರ್‌ನಲ್ಲಿ 56.60 ಲಕ್ಷ ಹಣ, ಅರ್ಧ ಕೆಜಿ ಚಿನ್ನ ಪತ್ತೆಯಾಗಿದೆ. ಹಾಗೂ ಇಇ ದೇವರಾಜ್‌ ಪತ್ನಿ, ಅಳಿಯನ ಹೆಸರಲ್ಲಿ ಲಾಕರ್ ಇದೆ. ಈ ಹಿನ್ನೆಲೆಯಲ್ಲಿ ದೇವರಾಜ್ ಮತ್ತು ಆತನ ಪತ್ನಿಯನ್ನ ಸಿಬ್ಬಂದಿ ಬ್ಯಾಂಕ್‌ಗೆ ಕರೆದೊಯ್ದಿದ್ದಾರೆ. ಇನ್ನು ಮಾವನ ಹೆಸರಿನಲ್ಲಿಯೂ ಬ್ಯಾಂಕ್ ಲಾಕರ್ ಪತ್ತೆಯಾಗಿದೆ. ಸದ್ಯ ಆ ಲಾಕರ್​ಗಳನ್ನ ಓಪನ್ ಮಾಡಲು ಎಸಿಬಿ ಫ್ಲ್ಯಾನ್‌ ಮಾಡಿಕೊಂಡಿದೆ.

ಭ್ರಷ್ಟ ಅಧಿಕಾರಿ ಪಾಂಡುರಂಗ ಮನೆಯಲ್ಲಿ ‘ಅಕ್ರಮ ಸಾಮ್ರಾಜ್ಯ’ ಬೆಂಗಳೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕ ಪಾಂಡುರಂಗನ ಮನೆಯಲ್ಲಿ ಕಂತೆ ಕಂತೆ ನೋಟು, ರಾಶಿ ರಾಶಿ ಬೆಳ್ಳಿ, ಚಿನ್ನಾಭರಣಗಳು ಪತ್ತೆಯಾಗಿವೆ. ಹೀಗಾಗಿ ವಿಜಯನಗರದ ನಿವಾಸಕ್ಕೆ ಎರಡು ವಾಹನಗಳಲ್ಲಿ 6ಕ್ಕೂ ಹೆಚ್ಚು ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದಾರೆ. ಎಸಿಬಿ ಡಿವೈಎಸ್ಪಿ ಸಿ.ಆರ್. ಗೀತಾ ನೇತೃತ್ವದ ತಂಡದಿಂದ ದಾಳಿ ನಡೆದಿದ್ದು ಪಾಂಡುರಂಗ ಮನೆಗೆ ಪ್ರಿಂಟರ್ ತರಿಸಿಕೊಳ್ಳಲಾಗಿದೆ.

ಕೋಲಾರದ ಡಿಹೆಚ್​ಒ ಮನೆಯಲ್ಲಿಯೂ ಆಸ್ತಿ ಪತ್ರಗಳು ಪತ್ತೆಯಾಗಿವೆ. ಡಿಹೆಚ್​ಒ ಕಚೇರಿಯಲ್ಲಿ 22 ಅಧಿಕಾರಿಗಳಿಂದ ತಲಾಶ್ ನಡೆಯುತ್ತಿದೆ. ಡಾ. ವಿಜಯ್ ಕುಮಾರ್​ಗೆ ಸೇರಿದ 6 ಕಡೆಗಳಲ್ಲಿ ಎಸಿಬಿ ಟೀಂ ಮಹತ್ವದ ದಾಖಲೆ ಪರಿಶೀಲನೆ ಮಾಡ್ತಿದ್ದಾರೆ. ಸಂಜೆ ವೇಳೆ ಆಸ್ತಿ ಬಗ್ಗೆ ಸಂಪೂರ್ಣ ಮಾಹಿತಿ ಸಿಗೋ ಸಾಧ್ಯತೆ ಇದೆ.

ಅಕ್ರಮ ಆಸ್ತಿ ಗಳಿಕೆ ಆರೋಪ, ರಾಜ್ಯದ 7 ಅಧಿಕಾರಿಗಳ ಮನೆಗಳ ಮೇಲೆ ACB ರೇಡ್

ACB Raid ಟಿಪಿಒ ಜಯರಾಜ್ ಮನೆಯಲ್ಲಿ ಭಾರೀ ಆಸ್ತಿ ಪತ್ತೆ, ಕೇರಳದಲ್ಲಿರುವ ಪತ್ನಿಯ ಕ್ವಾರ್ಟರ್ಸ್‌ ಮೇಲೂ ದಾಳಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?