AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಟ್​, ಚಿನ್ನ, ಬೆಳ್ಳಿ, ನಗದು… ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆ! Photos

ಬೆಂಗಳೂರು: ಅಧಿಕಾರಿಗಳ ಮೇಲೆ ನಡೆದ ACB ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಕೊಳಚೆ ನಿರ್ಮೂಲನಾ ಅಭಿವೃದ್ದಿ ಮಂಡಳಿಯಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ MS ನಿರಂಜನ್​ ಬಾಬುರ ಮೇಲೆ ದಾಳಿ ನಡೆಸಿದ ACB ಅಧಿಕಾರಿಗಳಿಗೆ ನಿರಂಜನ್​ ಬಾಬು ತುಮಕೂರಿನ ಮಾರುತಿ ನಗರದಲ್ಲಿ ಒಂದು ಬಂಗಲೆ ಹಾಗೂ ಜಿಲ್ಲೆಯಲ್ಲಿ ವಿವಿಧ ಕಡೆ 5 ಮನೆಗಳನ್ನ ಹೊಂದಿರುವುದು ಪತ್ತೆಯಾಗಿದೆ. ಜೊತೆಗೆ, ನಿರಂಜನ್​ ಬಾಬು ತುಮಕೂರು ನಗರ ಹಾಗೂ ಜಿಲ್ಲೆಯಲ್ಲಿ ಒಟ್ಟು 8 ನಿವೇಶನ ಹೊಂದಿದ್ದಾರೆ ಎಂಬ […]

ಸೈಟ್​, ಚಿನ್ನ, ಬೆಳ್ಳಿ, ನಗದು... ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆ! Photos
KUSHAL V
| Edited By: |

Updated on: Aug 27, 2020 | 4:09 PM

Share

ಬೆಂಗಳೂರು: ಅಧಿಕಾರಿಗಳ ಮೇಲೆ ನಡೆದ ACB ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಕೊಳಚೆ ನಿರ್ಮೂಲನಾ ಅಭಿವೃದ್ದಿ ಮಂಡಳಿಯಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ MS ನಿರಂಜನ್​ ಬಾಬುರ ಮೇಲೆ ದಾಳಿ ನಡೆಸಿದ ACB ಅಧಿಕಾರಿಗಳಿಗೆ ನಿರಂಜನ್​ ಬಾಬು ತುಮಕೂರಿನ ಮಾರುತಿ ನಗರದಲ್ಲಿ ಒಂದು ಬಂಗಲೆ ಹಾಗೂ ಜಿಲ್ಲೆಯಲ್ಲಿ ವಿವಿಧ ಕಡೆ 5 ಮನೆಗಳನ್ನ ಹೊಂದಿರುವುದು ಪತ್ತೆಯಾಗಿದೆ. ಜೊತೆಗೆ, ನಿರಂಜನ್​ ಬಾಬು ತುಮಕೂರು ನಗರ ಹಾಗೂ ಜಿಲ್ಲೆಯಲ್ಲಿ ಒಟ್ಟು 8 ನಿವೇಶನ ಹೊಂದಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಇದಲ್ಲದೆ, ಬೆಂಗಳೂರಿನ ದೇವನಹಳ್ಳಿಯಲ್ಲಿ ಒಂದು ಸೈಟ್, 1.5 ಕೆಜಿ ಚಿನ್ನ, 3.5 ಕೆಜಿ ಬೆಳ್ಳಿ, 2 ಕಾರು ಮತ್ತು 5 ಲಕ್ಷ ನಗದು ಸಹ ಪತ್ತೆಯಾಗಿದೆ. ಜೊತೆಗೆ, ವಿವಿಧ ಬ್ಯಾಂಕ್​ನಲ್ಲಿ 20 ಲಕ್ಷ ರೂಪಾಯಿ ನಗದು ಮತ್ತು 54 ಲಕ್ಷ ರೂಪಾಯಿ ಮೌಲ್ಯದ ಗೃಹೋಪಯೊಗಿ ವಸ್ತುಗಳು ಸಹ ದೊರೆತಿದೆ. ಇನ್ನು ಮೈಸೂರು ಮಹಾನಗರ ಪಾಲಿಕೆಯಲ್ಲಿ ಅಭಿವೃದ್ದಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹೆಚ್​ ನಾಗರಾಜ್​ರ ಮೇಲೆ ಸಹ ದಾಳಿ ನಡೆಸಿದ ಅಧಿಕಾರಿಗಳಿಗೆ ಮೈಸೂರು ನಗರದಲ್ಲಿ 2 ಮನೆ ಹಾಗೂ 5 ಅಂತಸ್ತಿನ ವಾಣಿಜ್ಯ ಕಾಂಪ್ಲೆಕ್ಸ್, ಬೆಂಗಳೂರು ನಗರದ ಅಪಾರ್ಟ್​ಮೆಂಟ್​ ಒಂದರಲ್ಲಿ ಫ್ಲ್ಯಾಟ್​ ನಾಗರಾಜ್ ಹೊಂದಿರುವುದರ ಮಾಹಿತಿ ದೊರೆತಿದೆ.

ಇದಲ್ಲದೆ, ಮೈಸೂರು ನಗರದಲ್ಲಿ 4 ನಿವೇಶನ ಹಾಗೂ ಬೆಂಗಳೂರು ನಗರದಲ್ಲಿ 1 ನಿವೇಶನ ಹೊಂದ್ದಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, 2 ಕೆಜಿ ಚಿನ್ನ, 11 ಕೆಜಿ ಬೆಳ್ಳಿ, 2 ಕಾರು, 9 ಲಕ್ಷ ನಗದು , 15 ಲಕ್ಷ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಸಹ ಪತ್ತೆಯಾಗಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ