AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಟ್​, ಚಿನ್ನ, ಬೆಳ್ಳಿ, ನಗದು… ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆ! Photos

ಬೆಂಗಳೂರು: ಅಧಿಕಾರಿಗಳ ಮೇಲೆ ನಡೆದ ACB ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಕೊಳಚೆ ನಿರ್ಮೂಲನಾ ಅಭಿವೃದ್ದಿ ಮಂಡಳಿಯಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ MS ನಿರಂಜನ್​ ಬಾಬುರ ಮೇಲೆ ದಾಳಿ ನಡೆಸಿದ ACB ಅಧಿಕಾರಿಗಳಿಗೆ ನಿರಂಜನ್​ ಬಾಬು ತುಮಕೂರಿನ ಮಾರುತಿ ನಗರದಲ್ಲಿ ಒಂದು ಬಂಗಲೆ ಹಾಗೂ ಜಿಲ್ಲೆಯಲ್ಲಿ ವಿವಿಧ ಕಡೆ 5 ಮನೆಗಳನ್ನ ಹೊಂದಿರುವುದು ಪತ್ತೆಯಾಗಿದೆ. ಜೊತೆಗೆ, ನಿರಂಜನ್​ ಬಾಬು ತುಮಕೂರು ನಗರ ಹಾಗೂ ಜಿಲ್ಲೆಯಲ್ಲಿ ಒಟ್ಟು 8 ನಿವೇಶನ ಹೊಂದಿದ್ದಾರೆ ಎಂಬ […]

ಸೈಟ್​, ಚಿನ್ನ, ಬೆಳ್ಳಿ, ನಗದು... ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆ! Photos
KUSHAL V
| Edited By: |

Updated on: Aug 27, 2020 | 4:09 PM

Share

ಬೆಂಗಳೂರು: ಅಧಿಕಾರಿಗಳ ಮೇಲೆ ನಡೆದ ACB ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಕೊಳಚೆ ನಿರ್ಮೂಲನಾ ಅಭಿವೃದ್ದಿ ಮಂಡಳಿಯಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ MS ನಿರಂಜನ್​ ಬಾಬುರ ಮೇಲೆ ದಾಳಿ ನಡೆಸಿದ ACB ಅಧಿಕಾರಿಗಳಿಗೆ ನಿರಂಜನ್​ ಬಾಬು ತುಮಕೂರಿನ ಮಾರುತಿ ನಗರದಲ್ಲಿ ಒಂದು ಬಂಗಲೆ ಹಾಗೂ ಜಿಲ್ಲೆಯಲ್ಲಿ ವಿವಿಧ ಕಡೆ 5 ಮನೆಗಳನ್ನ ಹೊಂದಿರುವುದು ಪತ್ತೆಯಾಗಿದೆ. ಜೊತೆಗೆ, ನಿರಂಜನ್​ ಬಾಬು ತುಮಕೂರು ನಗರ ಹಾಗೂ ಜಿಲ್ಲೆಯಲ್ಲಿ ಒಟ್ಟು 8 ನಿವೇಶನ ಹೊಂದಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಇದಲ್ಲದೆ, ಬೆಂಗಳೂರಿನ ದೇವನಹಳ್ಳಿಯಲ್ಲಿ ಒಂದು ಸೈಟ್, 1.5 ಕೆಜಿ ಚಿನ್ನ, 3.5 ಕೆಜಿ ಬೆಳ್ಳಿ, 2 ಕಾರು ಮತ್ತು 5 ಲಕ್ಷ ನಗದು ಸಹ ಪತ್ತೆಯಾಗಿದೆ. ಜೊತೆಗೆ, ವಿವಿಧ ಬ್ಯಾಂಕ್​ನಲ್ಲಿ 20 ಲಕ್ಷ ರೂಪಾಯಿ ನಗದು ಮತ್ತು 54 ಲಕ್ಷ ರೂಪಾಯಿ ಮೌಲ್ಯದ ಗೃಹೋಪಯೊಗಿ ವಸ್ತುಗಳು ಸಹ ದೊರೆತಿದೆ. ಇನ್ನು ಮೈಸೂರು ಮಹಾನಗರ ಪಾಲಿಕೆಯಲ್ಲಿ ಅಭಿವೃದ್ದಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹೆಚ್​ ನಾಗರಾಜ್​ರ ಮೇಲೆ ಸಹ ದಾಳಿ ನಡೆಸಿದ ಅಧಿಕಾರಿಗಳಿಗೆ ಮೈಸೂರು ನಗರದಲ್ಲಿ 2 ಮನೆ ಹಾಗೂ 5 ಅಂತಸ್ತಿನ ವಾಣಿಜ್ಯ ಕಾಂಪ್ಲೆಕ್ಸ್, ಬೆಂಗಳೂರು ನಗರದ ಅಪಾರ್ಟ್​ಮೆಂಟ್​ ಒಂದರಲ್ಲಿ ಫ್ಲ್ಯಾಟ್​ ನಾಗರಾಜ್ ಹೊಂದಿರುವುದರ ಮಾಹಿತಿ ದೊರೆತಿದೆ.

ಇದಲ್ಲದೆ, ಮೈಸೂರು ನಗರದಲ್ಲಿ 4 ನಿವೇಶನ ಹಾಗೂ ಬೆಂಗಳೂರು ನಗರದಲ್ಲಿ 1 ನಿವೇಶನ ಹೊಂದ್ದಿದ್ದಾರೆ ಎಂದು ತಿಳಿದುಬಂದಿದೆ. ಜೊತೆಗೆ, 2 ಕೆಜಿ ಚಿನ್ನ, 11 ಕೆಜಿ ಬೆಳ್ಳಿ, 2 ಕಾರು, 9 ಲಕ್ಷ ನಗದು , 15 ಲಕ್ಷ ಬೆಲೆಬಾಳುವ ಗೃಹೋಪಯೋಗಿ ವಸ್ತುಗಳು ಸಹ ಪತ್ತೆಯಾಗಿದೆ.

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!