AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಭ್ರಷ್ಟ ಅಧಿಕಾರಿ ದೇವೇಂದ್ರಪ್ಪ ಮನೆ ಮೇಲೆ ಮತ್ತೆ ದಾಳಿ.. ಆಪ್ತ ಶ್ರೀನಿವಾಸ್ ಎಸಿಬಿ ವಶಕ್ಕೆ

ಷ್ಟ ಅಧಿಕಾರಿ, BBMP ನಗರ ಯೋಜನೆ ಪ್ರಭಾರ ಸಹಾಯಕ ನಿರ್ದೇಶಕ S.N.ದೇವೇಂದ್ರಪ್ಪಗೆ ಮತ್ತೆ ಎಸಿಬಿ ಶಾಕ್ ಕೊಟ್ಟಿದೆ. ದೇವೇಂದ್ರಪ್ಪ ಅವರ ಅಮೃತನಗರದ ಮನೆ, ಹಲಸೂರಿನ ಗುಪ್ತ ಲೇಔಟ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

BBMP ಭ್ರಷ್ಟ ಅಧಿಕಾರಿ ದೇವೇಂದ್ರಪ್ಪ ಮನೆ ಮೇಲೆ ಮತ್ತೆ ದಾಳಿ.. ಆಪ್ತ ಶ್ರೀನಿವಾಸ್ ಎಸಿಬಿ ವಶಕ್ಕೆ
ಕಂತೆ ಕಂತೆ ನೋಟುಗಳು, ಸ್ಟಾಂಪ್​ಗಳು, ದುಬಾರಿ ಕಾರುಗಳು, ಮದ್ಯದ ಬಾಟಲಿಗಳು -ಇದು BBMP ಸಹಾಯಕ ನಿರ್ದೇಶಕನ ಭರ್ಜರಿ ದರ್ಬಾರು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Mar 02, 2021 | 3:26 PM

Share

ಬೆಂಗಳೂರು: ಭ್ರಷ್ಟ ಅಧಿಕಾರಿ, BBMP ನಗರ ಯೋಜನೆ ಪ್ರಭಾರ ಸಹಾಯಕ ನಿರ್ದೇಶಕ S.N.ದೇವೇಂದ್ರಪ್ಪಗೆ ಮತ್ತೆ ಎಸಿಬಿ ಶಾಕ್ ಕೊಟ್ಟಿದೆ. ದೇವೇಂದ್ರಪ್ಪ ಅವರ ಅಮೃತನಗರದ ಮನೆ, ಹಲಸೂರಿನ ಗುಪ್ತ ಲೇಔಟ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಫೆಬ್ರವರಿ 5ರಂದು ₹20 ಲಕ್ಷ ಲಂಚ ಸ್ವೀಕರಿಸುವಾಗ S.N.ದೇವೇಂದ್ರಪ್ಪ ಎಸಿಬಿ ಬಲೆಗೆ ಬಿದ್ದಿದ್ದರು. ಸದ್ಯ ದೇವೇಂದ್ರಪ್ಪ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

ದೇವೇಂದ್ರಪ್ಪನ ಆಪ್ತ ಶ್ರೀನಿವಾಸ ಮೂರ್ತಿ ಎಸಿಬಿ ವಶಕ್ಕೆ ಇನ್ನು ದೇವೇಂದ್ರಪ್ಪನ ಆಪ್ತನಾಗಿರುವ ಶ್ರೀನಿವಾಸ ಮೂರ್ತಿ ಮನೆ ಮೇಲೂ ದಾಳಿ ನಡೆದಿದೆ. ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. ದೇವೇಂದ್ರಪ್ಪನ ಆಪ್ತ ಶ್ರೀನಿವಾಸ ಮೂರ್ತಿ ಹಾಗೂ ಅವರ ಮನೆಯಲ್ಲಿ ಸಿಕ್ಕ ದಾಖಲೆಗಳನ್ನು ಎಸಿಬಿ ವಶಕ್ಕೆ ಪಡೆದಿದ್ದಾರೆ. ಎಸಿಬಿ ವಾಹನದಲ್ಲೇ ಶ್ರೀನಿವಾಸ್ ಮೂರ್ತಿಗೆ ಸೇರಿದ ಮತ್ತೊಂದು ಸ್ಥಳಕ್ಕೆ ಕರೆದೊಯ್ಯಲಾಗಿದೆ. ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಡೆದಿದೆ.

ಕಳೆದ ತಿಂಗಳ 8ರಂದು ಸಹ ದೇವೇಂದ್ರಪ್ಪನ ಮನೆ ಮೇಲೆ ಎಸಿಬಿ ದಾಳಿ ನಡೆಸಿತ್ತು. ದಾಳಿಗೂ ಮುನ್ನ ಲೆಕ್ಕಕ್ಕೆ ಸಿಗದ ಲಕ್ಷ ಲಕ್ಷ ನಗದು ಸಿಕ್ಕಿತ್ತು. ಪತ್ತೆಯಾದ ಹಣ ಮೂಲಕ ಅಂದು ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಅಪಾರ ಪ್ರಮಾಣದ ಆಸ್ತಿ, ನೂರುಗಟ್ಟಲೇ ಲೀಟರ್ ಮದ್ಯದ ಬಾಟಲ್​ಗಳು ಪತ್ತೆಯಾಗಿದ್ದವು. ದೇವೇಂದ್ರಪ್ಪ ಕಾರಿನಲ್ಲಿ 50ಕ್ಕೂ ಹೆಚ್ಚು ಬಿಬಿಎಂಪಿ‌ ಕಡತಗಳು, ಮೇಲಾಧಿಕಾರಿಗಳ ಹೆಸರಿನ ಸೀಲುಗಳು, ಸೂಕ್ತ ಲೆಕ್ಕವಿಲ್ಲದ 7.40 ಲಕ್ಷ ನಗದು ಸೇರಿ ಒಟ್ಟಾರೆ 27 ಲಕ್ಷದ 40 ಸಾವಿರ ರೂ ಹಣ ವಶಕ್ಕೆ ಪಡೆಯಲಾಗಿತ್ತು.

ದೇವೇಂದ್ರಪ್ಪಗೆ ಸೇರಿದ ಬ್ಯಾಂಕ್​ ಲಾಕರ್ ಪತ್ತೆ ಅಮೃತನಗರದ ನಿವಾಸದ ಮೇಲೆ ದಾಳಿ ವೇಳೆ ದೇವೇಂದ್ರಪ್ಪನಿಗೆ ಸೇರಿದ ಬ್ಯಾಂಕ್​ ಲಾಕರ್ ಪತ್ತೆಯಾಗಿದೆ. ಎಸಿಬಿ ತಂಡ ಬ್ಯಾಂಕ್ ಲಾಕರ್ ಓಪನ್​ಗೆ ಮುಂದಾಗಿದೆ. ಸದ್ಯ ಲಾಕರ್ ನಲ್ಲಿ ಮಹತ್ವದ ದಾಖಲೆ ಹಾಗೂ ವಸ್ತುಗಳು ಸಿಗುವ ನಿರೀಕ್ಷೆ ಇದೆ.

ಇದನ್ನೂ ಓದಿ: BBMP Director ACB raid ಕಂತೆ ಕಂತೆ ನೋಟು, ಸ್ಟಾಂಪ್, ದುಬಾರಿ ಕಾರುಗಳು, ಮದ್ಯದ ಬಾಟಲಿಗಳು -ಇದು BBMP ಸಹಾಯಕ ನಿರ್ದೇಶಕನ ಕಾರು ಬಾರು

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ