AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಮೈಸೂರಿನಲ್ಲಿ ಪ್ರತ್ಯೇಕ ಅಪಘಾತ.. ಕುಡಿದ ಮತ್ತಿನಲ್ಲಿ BSNLನ ನಿವೃತ್ತ ಉದ್ಯೋಗಿ ಮೇಲೆ ಕಾರು ಹತ್ತಿಸಿದ ಪಿಡಬ್ಲ್ಯುಡಿ ಎಇಇ

ಕಂಠಪೂರ್ತಿ ಕುಡಿದು ಕಾರು ಚಲಾಯಿಸುತ್ತಿದ್ದ ಪಿಡಬ್ಲ್ಯುಡಿ ಎಇಇ ಷಣ್ಮುಗಂ ಯಮನಾಗಿ BSNLನ ನಿವೃತ್ತ ಉದ್ಯೋಗಿ ಎ.ಆನಂದ್​ರ ಜೀವ ತೆಗೆದಿದ್ದಾರೆ. ಮದ್ಯದ ಅಮಲಿನಲ್ಲಿ ಪಾದಚಾರಿ ಮೇಲೆ ಕಾರು ಹತ್ತಿಸಿದ್ದಾರೆ. ಈ ಪರಿಣಾಮ BSNLನ ನಿವೃತ್ತ ಉದ್ಯೋಗಿ ಎ.ಆನಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಂಗಳೂರು ಮೈಸೂರಿನಲ್ಲಿ ಪ್ರತ್ಯೇಕ ಅಪಘಾತ.. ಕುಡಿದ ಮತ್ತಿನಲ್ಲಿ BSNLನ ನಿವೃತ್ತ ಉದ್ಯೋಗಿ ಮೇಲೆ ಕಾರು ಹತ್ತಿಸಿದ ಪಿಡಬ್ಲ್ಯುಡಿ ಎಇಇ
ಅಪಘಾತದ ದೃಶ್ಯ
ಆಯೇಷಾ ಬಾನು
|

Updated on:Mar 29, 2021 | 8:37 AM

Share

ಮಂಗಳೂರು: ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು ಆತ ಮೃತಪಟ್ಟಿರುವ ಘಟನೆ ಮಂಗಳೂರಿನ ಸರ್ಕ್ಯೂಟ್ ಹೌಸ್ ರಸ್ತೆಯ ಬಳಿ ನಡೆದಿದೆ. ಅಪಘಾತದಲ್ಲಿ ಪಾದಚಾರಿ BSNLನ ನಿವೃತ್ತ ಉದ್ಯೋಗಿ ಎ.ಆನಂದ್ ಮೃತಪಟ್ಟಿದ್ದಾರೆ. ಹಾಗೂ ಪಾನಮತ್ತ ಪಿಡಬ್ಲ್ಯುಡಿ ಎಇಇ ಷಣ್ಮುಗಂ ಅಪಘಾತ ಮಾಡಿದ್ದು ಮಂಗಳೂರು ಪೂರ್ವ ಸಂಚಾರಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕಂಠಪೂರ್ತಿ ಕುಡಿದು ಕಾರು ಚಲಾಯಿಸುತ್ತಿದ್ದ ಪಿಡಬ್ಲ್ಯುಡಿ ಎಇಇ ಷಣ್ಮುಗಂ ಯಮನಾಗಿ BSNLನ ನಿವೃತ್ತ ಉದ್ಯೋಗಿ ಎ.ಆನಂದ್​ರ ಜೀವ ತೆಗೆದಿದ್ದಾರೆ. ಮದ್ಯದ ಅಮಲಿನಲ್ಲಿ ಪಾದಚಾರಿ ಮೇಲೆ ಕಾರು ಹತ್ತಿಸಿದ್ದಾರೆ. ಈ ಪರಿಣಾಮ BSNLನ ನಿವೃತ್ತ ಉದ್ಯೋಗಿ ಎ.ಆನಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಪ್ರಕರಣದಿಂದ ತಪ್ಪಿಸಿಕೊಳ್ಳಲು ಈತ ನನ್ನ ತಮ್ಮ ಎಂದು ಹೇಳಿ ಪೊಲೀಸರಿಗೆ ದಿಕ್ಕು ತಪ್ಪಿಸುವ ಪ್ರಯತ್ನ ಸಹ ಮಾಡಿದ್ದಾರೆ. ಆದ್ರೆ ಆರೋಪಿಯ ಚಲಾಕಿ ತನ ಅರಿತ ಮಂಗಳೂರು ಪೂರ್ವ ಸಂಚಾರಿ ಪೊಲೀಸರು ಪಿಡಬ್ಲ್ಯುಡಿ ಇಂಜಿನಿಯರ್ ಷಣ್ಮುಗಂನನ್ನು ಬಂಧಿಸಿದ್ದಾರೆ. ಸದ್ಯ ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಪೊಲೀಸರು ಸಾಕ್ಷ್ಯಾಧಾರ ಕಲೆ ಹಾಕಿ ದೂರು ದಾಖಲಿಸಿಕೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಪಲ್ಟಿಯಾದ ಟಾಟಾಏಸ್ ಚಾಲಕನ ನಿಯಂತ್ರಣ ತಪ್ಪಿ ಮದುವೆಗೆ ಹೊರಟಿದ್ದ ಟಾಟಾ ಏಸ್ ವಾಹನ ಪಲ್ಟಿಯಾಗಿ ನಾಲೆಗೆ ಬಿದ್ದ ಘಟನೆ ಮೈಸೂರಿನ ಕೆ.ಆರ್.ನಗರದ ಹೊಸೂರು-ಹಳಿಯೂರು ರಸ್ತೆಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಪುಷ್ಪಲತಾ(10), ಪಲ್ಲವಿ(9) ಮೃತ ದುರ್ದೈವಿಗಳು. ನಾಲೆಯಲ್ಲಿ ನೀರಿಲ್ಲದ ಕಾರಣ ಬಾರಿ ಅನಾಹುತವೊಂದು ತಪ್ಪಿದೆ. ಅಪಘಾತ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜೋಡಿ ಎತ್ತಿನಗಾಡಿ ಓಟ ಸ್ಪರ್ಧೆ ವೇಳೆ ಇಬ್ಬರು ಯುವಕರ ಮೇಲೆ ಜೋಡೆತ್ತಿನ ಗಾಡಿ ಹರಿದು ಯುವಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ಹೊರವಲಯದಲ್ಲಿ ನಡೆದಿದೆ. ಗಾಯಾಳುಗಳಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ದಾಮರದುರ್ಗಂ ಬಳಿ ಅಪಘಾತ; ಲಾರಿ, ಟೆಂಪೊ ನಡುವೆ ಡಿಕ್ಕಿಯಾಗಿ 8 ಜನರ ಸಾವು

Published On - 7:20 am, Mon, 29 March 21

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ