AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ BSY ನೈಟ್​ ಕರ್ಫ್ಯೂ, ಲಾಕ್​ಡೌನ್, ಸೀಲ್​ಡೌನ್​​ ಘೋಷಿಸದೆ ಇರಲು ಇದಾ ಅಸಲಿ ಕಾರಣ?

ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು, ತಜ್ಞರ ಜೊತೆ ನಡೆದ ಸಭೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಜಾರಿಗೊಳಿಸಲು ತೀವ್ರ ವಿರೋಧ ವ್ಯಕ್ತವಾಯಿತು ಎಂದು ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸಭೆಯಲ್ಲಿ ಡಿಸಿಎಂ ಅಶ್ವತ್ಥ್​ ನಾರಾಯಣ ತೀವ್ರ ವಿರೋಧ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.

ಸಿಎಂ BSY ನೈಟ್​ ಕರ್ಫ್ಯೂ, ಲಾಕ್​ಡೌನ್, ಸೀಲ್​ಡೌನ್​​ ಘೋಷಿಸದೆ ಇರಲು ಇದಾ ಅಸಲಿ ಕಾರಣ?
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
KUSHAL V
|

Updated on: Mar 15, 2021 | 8:26 PM

Share

ಬೆಂಗಳೂರು: ಕಳೆದ 14 ದಿನಗಳಲ್ಲಿ ಕೊರೊನಾ ಪಾಸಿಟಿವ್ ರೇಟ್ ಹೆಚ್ಚಾಗಿದೆ. ದೇವರ ದಯೆಯಿಂದ ಮರಣ ಪ್ರಮಾಣ ಕಡಿಮೆ ಇದೆ. ಆದರೆ, ಯಾವುದೇ ಕಾರಣಕ್ಕೂ ಜನ ಮೈಮರೆಯಬಾರದು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದರು. ಇದೇ ವೇಳೆ ನೈಟ್​ ಕರ್ಫ್ಯೂ, ಲಾಕ್​ಡೌನ್​ ಅಥವಾ ಸೀಲ್​ಡೌನ್​ ಬಗ್ಗೆ ಸದ್ಯ ಯಾವುದೇ ಚಿಂತನೆ ಇಲ್ಲ ಎಂದು ಕೊವಿಡ್​ ತಜ್ಞರ ಜೊತೆ ಸಭೆ ನಡೆಸಿದ ಬಳಿಕ ಸಿಎಂ ಯಡಿಯೂರಪ್ಪ ಹೇಳಿದ್ದರು.

ಜನರು ಸ್ವತಃ ಜಾಗೃತಿವಹಿಸಿ ಅಂತಹ ಕಠಿಣ ನಿರ್ಧಾರ ಕೈಗೊಳ್ಳದಂತೆ ನಡೆದುಕೊಳ್ಳಬೇಕು ಎಂದು ಎಚ್ಚರಿಸಿದರು. ನಾವು ಕಠಿಣ ನಿಯಮ ಜಾರಿಗೊಳಿಸುವುದು ಬೇಡ ಎಂದೇ ಬಯಸುತ್ತೇವೆ. ಜನತೆಗೂ ಅದೇ ಬಯಕೆ ಇದ್ದರೆ ಅವರೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿಕೊಂಡಿದ್ದರು.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಇಂದು ಸಿಎಂ ಯಡಿಯೂರಪ್ಪ ಸಭೆ ನಡೆಸಿದ್ದರು. ಈ ವೇಳೆ, ವೈದ್ಯರಾದ ಡಾ.ಮಂಜುನಾಥ, ಡಾ.ಸುದರ್ಶನ್ ಬಲ್ಲಾಳ್, ಡಾ.ರವಿ, ಡಾ.ಗಿರಿಧರ ಬಾಬುರವರು ಮುಖ್ಯಮಂತ್ರಿಗಳಿಗೆ ಕೆಲ ಸಲಹೆಗಳನ್ನು ನೀಡಿದ್ದರು.

ಇದೀಗ, ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು, ತಜ್ಞರ ಜೊತೆ ನಡೆದ ಸಭೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಜಾರಿಗೊಳಿಸಲು ತೀವ್ರ ವಿರೋಧ ವ್ಯಕ್ತವಾಯಿತು ಎಂದು ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸಭೆಯಲ್ಲಿ ಡಿಸಿಎಂ ಅಶ್ವತ್ಥ್​ ನಾರಾಯಣ ತೀವ್ರ ವಿರೋಧ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ. ಹೀಗಾಗಿ, ಸಭೆಯಲ್ಲಿ ಯಾವುದೇ ಕಠಿಣ ಕ್ರಮ ತೆಗೆದುಕೊಂಡಿಲ್ಲ ಎಂದು ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ವ್ಯಾಕ್ಸಿನ್ ಹಾಕಿದ್ರಾ?.. ಗೊತ್ತೇ ಆಗ್ಲಿಲ್ಲ -ಕೊರೊನಾ ಲಸಿಕೆ ಪಡೆದ ಬಳಿಕ ನಗೆ ಚಟಾಕಿ ಹಾರಿಸಿದ ಸಿದ್ದರಾಮಯ್ಯ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು