AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ BSY ನೈಟ್​ ಕರ್ಫ್ಯೂ, ಲಾಕ್​ಡೌನ್, ಸೀಲ್​ಡೌನ್​​ ಘೋಷಿಸದೆ ಇರಲು ಇದಾ ಅಸಲಿ ಕಾರಣ?

ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು, ತಜ್ಞರ ಜೊತೆ ನಡೆದ ಸಭೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಜಾರಿಗೊಳಿಸಲು ತೀವ್ರ ವಿರೋಧ ವ್ಯಕ್ತವಾಯಿತು ಎಂದು ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸಭೆಯಲ್ಲಿ ಡಿಸಿಎಂ ಅಶ್ವತ್ಥ್​ ನಾರಾಯಣ ತೀವ್ರ ವಿರೋಧ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ.

ಸಿಎಂ BSY ನೈಟ್​ ಕರ್ಫ್ಯೂ, ಲಾಕ್​ಡೌನ್, ಸೀಲ್​ಡೌನ್​​ ಘೋಷಿಸದೆ ಇರಲು ಇದಾ ಅಸಲಿ ಕಾರಣ?
ಬಿ.ಎಸ್​. ಯಡಿಯೂರಪ್ಪ (ಸಂಗ್ರಹ ಚಿತ್ರ)
KUSHAL V
|

Updated on: Mar 15, 2021 | 8:26 PM

Share

ಬೆಂಗಳೂರು: ಕಳೆದ 14 ದಿನಗಳಲ್ಲಿ ಕೊರೊನಾ ಪಾಸಿಟಿವ್ ರೇಟ್ ಹೆಚ್ಚಾಗಿದೆ. ದೇವರ ದಯೆಯಿಂದ ಮರಣ ಪ್ರಮಾಣ ಕಡಿಮೆ ಇದೆ. ಆದರೆ, ಯಾವುದೇ ಕಾರಣಕ್ಕೂ ಜನ ಮೈಮರೆಯಬಾರದು ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದರು. ಇದೇ ವೇಳೆ ನೈಟ್​ ಕರ್ಫ್ಯೂ, ಲಾಕ್​ಡೌನ್​ ಅಥವಾ ಸೀಲ್​ಡೌನ್​ ಬಗ್ಗೆ ಸದ್ಯ ಯಾವುದೇ ಚಿಂತನೆ ಇಲ್ಲ ಎಂದು ಕೊವಿಡ್​ ತಜ್ಞರ ಜೊತೆ ಸಭೆ ನಡೆಸಿದ ಬಳಿಕ ಸಿಎಂ ಯಡಿಯೂರಪ್ಪ ಹೇಳಿದ್ದರು.

ಜನರು ಸ್ವತಃ ಜಾಗೃತಿವಹಿಸಿ ಅಂತಹ ಕಠಿಣ ನಿರ್ಧಾರ ಕೈಗೊಳ್ಳದಂತೆ ನಡೆದುಕೊಳ್ಳಬೇಕು ಎಂದು ಎಚ್ಚರಿಸಿದರು. ನಾವು ಕಠಿಣ ನಿಯಮ ಜಾರಿಗೊಳಿಸುವುದು ಬೇಡ ಎಂದೇ ಬಯಸುತ್ತೇವೆ. ಜನತೆಗೂ ಅದೇ ಬಯಕೆ ಇದ್ದರೆ ಅವರೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿನಂತಿಸಿಕೊಂಡಿದ್ದರು.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜೊತೆ ಇಂದು ಸಿಎಂ ಯಡಿಯೂರಪ್ಪ ಸಭೆ ನಡೆಸಿದ್ದರು. ಈ ವೇಳೆ, ವೈದ್ಯರಾದ ಡಾ.ಮಂಜುನಾಥ, ಡಾ.ಸುದರ್ಶನ್ ಬಲ್ಲಾಳ್, ಡಾ.ರವಿ, ಡಾ.ಗಿರಿಧರ ಬಾಬುರವರು ಮುಖ್ಯಮಂತ್ರಿಗಳಿಗೆ ಕೆಲ ಸಲಹೆಗಳನ್ನು ನೀಡಿದ್ದರು.

ಇದೀಗ, ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು, ತಜ್ಞರ ಜೊತೆ ನಡೆದ ಸಭೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಜಾರಿಗೊಳಿಸಲು ತೀವ್ರ ವಿರೋಧ ವ್ಯಕ್ತವಾಯಿತು ಎಂದು ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಸಭೆಯಲ್ಲಿ ಡಿಸಿಎಂ ಅಶ್ವತ್ಥ್​ ನಾರಾಯಣ ತೀವ್ರ ವಿರೋಧ ವ್ಯಕ್ತಪಡಿಸಿದರು ಎಂದು ಹೇಳಲಾಗಿದೆ. ಹೀಗಾಗಿ, ಸಭೆಯಲ್ಲಿ ಯಾವುದೇ ಕಠಿಣ ಕ್ರಮ ತೆಗೆದುಕೊಂಡಿಲ್ಲ ಎಂದು ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ವ್ಯಾಕ್ಸಿನ್ ಹಾಕಿದ್ರಾ?.. ಗೊತ್ತೇ ಆಗ್ಲಿಲ್ಲ -ಕೊರೊನಾ ಲಸಿಕೆ ಪಡೆದ ಬಳಿಕ ನಗೆ ಚಟಾಕಿ ಹಾರಿಸಿದ ಸಿದ್ದರಾಮಯ್ಯ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ