Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲೆ ಮಾಜಿ ಸಚಿವ ಹೆಚ್​ಎಂ ರೇವಣ್ಣ ಹಲ್ಲೆ ಆರೋಪ, ದೂರು ದಾಖಲು

ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹೆಚ್.ಎಂ. ರೇವಣ್ಣ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ನಂದಿನಿ ನಾಗರಾಜ್ ಎಂಬ ಕಾಂಗ್ರೆಸ್ ಕಾರ್ಯಕರ್ತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರೇವಣ್ಣ ಅವರು ಈ ಆರೋಪವನ್ನು ತಳ್ಳಿಹಾಕಿದ್ದು, ಮಹಿಳೆ ತಮ್ಮನ್ನು ಕಿರಿಕಿರಿಗೊಳಿಸಿದ್ದರು ಎಂದು ಹೇಳಿದ್ದಾರೆ. ಅಲ್ಲದೆ, ಮಹಿಳೆ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹಿಳೆ ಮೇಲೆ ಮಾಜಿ ಸಚಿವ ಹೆಚ್​ಎಂ ರೇವಣ್ಣ ಹಲ್ಲೆ ಆರೋಪ, ದೂರು ದಾಖಲು
ಹೆಚ್​ಎಮ್​ ರೇವಣ್ಣ
Follow us
Shivaprasad
| Updated By: ವಿವೇಕ ಬಿರಾದಾರ

Updated on: Mar 18, 2025 | 12:57 PM

ಬೆಂಗಳೂರು, ಮಾರ್ಚ್​ 18: ಮಾಜಿ ಸಚಿವ ಹೆಚ್.ಎಂ.ರೇವಣ್ಣ (HM Revanna) ಕಾಂಗ್ರೆಸ್ (Congress) ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಬೆಂಗಳೂರಿನ ಹೈ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ತಮ್ಮ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಮಾಜಿ ಸಚಿವ ಹೆಚ್​ಎಂ ರೇವಣ್ಣ ಸ್ಪಷ್ಟನೆ ನೀಡಿದ್ದಾರೆ.

ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಹೆಚ್​.ಎಂ.ರೇವಣ್ಣ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ಸೋಮವಾರ  (ಮಾರ್ಚ್.17) ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ​ಕಾಂಗ್ರೆಸ್​ ಕಾರ್ಯಕರ್ತೆ ನಂದಿನಿ ನಾಗರಾಜ್ ಆರೋಪಿಸಿದ್ದಾರೆ. ಈ ಸಂಬಂಧ ಹೆಚ್​ಎಂ ರೇವಣ್ಣ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತೆ ನಂದಿನಿ ನಾಗರಾಜ್ ಬೆಂಗಳೂರಿನ (Bengaluru) ಹೈಗ್ರೌಂಡ್ಸ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ಸಾಕ್ಷ್ಯಧಾರಗಳನ್ನು ಓದಗಿಸುವಂತೆ ನಂದಿನಿ ಅವರಿಗೆ ನೋಟಿಸ್ ನೀಡಿದ್ದಾರೆ.

ಹೆಚ್​ಎಂ ರೇವಣ್ಣ ಸ್ಪಷ್ಟನೆ

ಪ್ರಕರಣ ಸಂಬಂಧ ಹೆಚ್.ಎಂ.ರೇವಣ್ಣ ಟಿವಿ9ಗೆ ಸ್ಪಷ್ಟನೆ ನೀಡಿದ್ದಾರೆ. “ಆ ಮಹಿಳೆ ನನಗೆ ಕಿರಿಕಿರಿ ಮಾಡಿಕೊಂಡು ಗಲಾಟೆ ಮಾಡುತ್ತಿದ್ದರು. ಆ ಮಹಿಳೆ ಯಾರು ಅನ್ನೋದನ್ನೂ ನಾನು ನೋಡಿಲ್ಲ. ಪದೇ ಪದೇ ರಾಹುಲ್ ಗಾಂಧಿ ಎಂದು ಹೇಳುತ್ತಿದ್ದಳು. ಕೊಲೆ ಮಾಡಲು ಬಂದಿದ್ದರು, ಹೊಡೆದರು ಅನ್ನೋದು ಸರಿಯಲ್ಲ. ವಿಡಿಯೋ ಮಾಡಬೇಡಮ್ಮ ಅಂತಾ ಮೊಬೈಲ್​ ತಳ್ಳಿದ್ದು ನಿಜ. ನಾವು ಯಾರೂ ಆಕೆಯ ಮೇಲೆ ಹಲ್ಲೆ ಮಾಡಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ
Image
ಕಾಂಗ್ರೆಸ್ ಮುಖಂಡರು ದೆಹಲಿಗೆ ಹೋದಾಗ ಕುತೂಹಲ ಹುಟ್ಟೋದು ಸಹಜ!
Image
ಮಹದೇವಪ್ಪ ಮನೆಯಲ್ಲಿ ಎಸ್​ಸಿ ಎಸ್​ಟಿ ನಾಯಕರ ಸಭೆಯ ರಹಸ್ಯವೇನು?
Image
ಕೋಲಾರ ಕಾಂಗ್ರೆಸ್​ ನಾಯಕ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
Image
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ರಿಮಿನಲ್​ಗಳದ್ದೇ ದರ್ಬಾರು: ಸಿಟಿ ರವಿ

ಇದನ್ನೂ ಓದಿ: Karnataka Budget Session: ಸದನದಲ್ಲಿ ಮತ್ತೊಮ್ಮೆ ಭಾಷಾ ಶಿಸ್ತಿನ ಚೌಕಟ್ಟು ಮೀರಿದ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ

“ಅಧಿಕಾರಿಯನ್ನು ವರ್ಗಾವಣೆ ಮಾಡಿಸುವುದಾಗಿ ಮಹಿಳೆ ಫೋನ್​ಪೇ ಮೂಲಕ 1 ಲಕ್ಷ ರೂ. ದುಡ್ಡು ಪಡೆದಿದ್ದಾಳೆ. ನಾನು ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ” ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು