AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆ ಮೇಲೆ ಮಾಜಿ ಸಚಿವ ಹೆಚ್​ಎಂ ರೇವಣ್ಣ ಹಲ್ಲೆ ಆರೋಪ, ದೂರು ದಾಖಲು

ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹೆಚ್.ಎಂ. ರೇವಣ್ಣ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ನಂದಿನಿ ನಾಗರಾಜ್ ಎಂಬ ಕಾಂಗ್ರೆಸ್ ಕಾರ್ಯಕರ್ತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರೇವಣ್ಣ ಅವರು ಈ ಆರೋಪವನ್ನು ತಳ್ಳಿಹಾಕಿದ್ದು, ಮಹಿಳೆ ತಮ್ಮನ್ನು ಕಿರಿಕಿರಿಗೊಳಿಸಿದ್ದರು ಎಂದು ಹೇಳಿದ್ದಾರೆ. ಅಲ್ಲದೆ, ಮಹಿಳೆ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹಿಳೆ ಮೇಲೆ ಮಾಜಿ ಸಚಿವ ಹೆಚ್​ಎಂ ರೇವಣ್ಣ ಹಲ್ಲೆ ಆರೋಪ, ದೂರು ದಾಖಲು
ಹೆಚ್​ಎಮ್​ ರೇವಣ್ಣ
ಶಿವಪ್ರಸಾದ್​ ಬಿ.
| Edited By: ವಿವೇಕ ಬಿರಾದಾರ|

Updated on: Mar 18, 2025 | 12:57 PM

Share

ಬೆಂಗಳೂರು, ಮಾರ್ಚ್​ 18: ಮಾಜಿ ಸಚಿವ ಹೆಚ್.ಎಂ.ರೇವಣ್ಣ (HM Revanna) ಕಾಂಗ್ರೆಸ್ (Congress) ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಬೆಂಗಳೂರಿನ ಹೈ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ತಮ್ಮ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ಮಾಜಿ ಸಚಿವ ಹೆಚ್​ಎಂ ರೇವಣ್ಣ ಸ್ಪಷ್ಟನೆ ನೀಡಿದ್ದಾರೆ.

ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಹೆಚ್​.ಎಂ.ರೇವಣ್ಣ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ಸೋಮವಾರ  (ಮಾರ್ಚ್.17) ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ​ಕಾಂಗ್ರೆಸ್​ ಕಾರ್ಯಕರ್ತೆ ನಂದಿನಿ ನಾಗರಾಜ್ ಆರೋಪಿಸಿದ್ದಾರೆ. ಈ ಸಂಬಂಧ ಹೆಚ್​ಎಂ ರೇವಣ್ಣ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತೆ ನಂದಿನಿ ನಾಗರಾಜ್ ಬೆಂಗಳೂರಿನ (Bengaluru) ಹೈಗ್ರೌಂಡ್ಸ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು, ಸಾಕ್ಷ್ಯಧಾರಗಳನ್ನು ಓದಗಿಸುವಂತೆ ನಂದಿನಿ ಅವರಿಗೆ ನೋಟಿಸ್ ನೀಡಿದ್ದಾರೆ.

ಹೆಚ್​ಎಂ ರೇವಣ್ಣ ಸ್ಪಷ್ಟನೆ

ಪ್ರಕರಣ ಸಂಬಂಧ ಹೆಚ್.ಎಂ.ರೇವಣ್ಣ ಟಿವಿ9ಗೆ ಸ್ಪಷ್ಟನೆ ನೀಡಿದ್ದಾರೆ. “ಆ ಮಹಿಳೆ ನನಗೆ ಕಿರಿಕಿರಿ ಮಾಡಿಕೊಂಡು ಗಲಾಟೆ ಮಾಡುತ್ತಿದ್ದರು. ಆ ಮಹಿಳೆ ಯಾರು ಅನ್ನೋದನ್ನೂ ನಾನು ನೋಡಿಲ್ಲ. ಪದೇ ಪದೇ ರಾಹುಲ್ ಗಾಂಧಿ ಎಂದು ಹೇಳುತ್ತಿದ್ದಳು. ಕೊಲೆ ಮಾಡಲು ಬಂದಿದ್ದರು, ಹೊಡೆದರು ಅನ್ನೋದು ಸರಿಯಲ್ಲ. ವಿಡಿಯೋ ಮಾಡಬೇಡಮ್ಮ ಅಂತಾ ಮೊಬೈಲ್​ ತಳ್ಳಿದ್ದು ನಿಜ. ನಾವು ಯಾರೂ ಆಕೆಯ ಮೇಲೆ ಹಲ್ಲೆ ಮಾಡಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ
Image
ಕಾಂಗ್ರೆಸ್ ಮುಖಂಡರು ದೆಹಲಿಗೆ ಹೋದಾಗ ಕುತೂಹಲ ಹುಟ್ಟೋದು ಸಹಜ!
Image
ಮಹದೇವಪ್ಪ ಮನೆಯಲ್ಲಿ ಎಸ್​ಸಿ ಎಸ್​ಟಿ ನಾಯಕರ ಸಭೆಯ ರಹಸ್ಯವೇನು?
Image
ಕೋಲಾರ ಕಾಂಗ್ರೆಸ್​ ನಾಯಕ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
Image
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕ್ರಿಮಿನಲ್​ಗಳದ್ದೇ ದರ್ಬಾರು: ಸಿಟಿ ರವಿ

ಇದನ್ನೂ ಓದಿ: Karnataka Budget Session: ಸದನದಲ್ಲಿ ಮತ್ತೊಮ್ಮೆ ಭಾಷಾ ಶಿಸ್ತಿನ ಚೌಕಟ್ಟು ಮೀರಿದ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ

“ಅಧಿಕಾರಿಯನ್ನು ವರ್ಗಾವಣೆ ಮಾಡಿಸುವುದಾಗಿ ಮಹಿಳೆ ಫೋನ್​ಪೇ ಮೂಲಕ 1 ಲಕ್ಷ ರೂ. ದುಡ್ಡು ಪಡೆದಿದ್ದಾಳೆ. ನಾನು ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ” ಎಂದು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು