AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರು ಖರೀದಿಸಲು ಬಂದು, ಟೆಸ್ಟ್ ಡ್ರೈವ್ ಅಂತಾ ಹೇಳಿ ಕಾರು ಸಮೇತ ಪರಾರಿಯಾಗಿದ್ದ ಆರೋಪಿಯ ಬಂಧನ

ಆರೋಪಿ ವೆಂಕಟೇಶ್ ಓಎಲ್ಎಕ್ಸ್ ನಲ್ಲಿ ಆ್ಯಡ್ ನೋಡಿ ಕಾರು ಖರೀದಿಸಲು ಬಂದು ಮಾಲಿಕನಿಂದ ಟೆಸ್ಟ್ ಡ್ರೈವ್ ಅಂತಾ ಹೇಳಿ ಕಾರು ಸಮೇತ ಪರಾರಿಯಾಗಿದ್ದನು.

ಕಾರು ಖರೀದಿಸಲು ಬಂದು, ಟೆಸ್ಟ್ ಡ್ರೈವ್ ಅಂತಾ ಹೇಳಿ ಕಾರು ಸಮೇತ ಪರಾರಿಯಾಗಿದ್ದ ಆರೋಪಿಯ ಬಂಧನ
ಕಾರು ಕದ್ದು ಪರಾರಿಯಾಗಿದ್ದ ಆರೋಪಿ ವೆಂಕಟೇಶ ಬಂಧನ
TV9 Web
| Edited By: |

Updated on:May 15, 2022 | 11:15 AM

Share

ಬೆಂಗಳೂರು: ವ್ಯಕ್ತಿಯೋರ್ವ ಓಎಲ್ಎಕ್ಸ್ ನಲ್ಲಿ ಆ್ಯಡ್ ನೋಡಿ ಕಾರು ಖರೀದಿಸಲು ಬಂದು ಮಾಲಿಕನಿಂದ ಟೆಸ್ಟ್ ಡ್ರೈವ್ ಅಂತಾ ಹೇಳಿ ಕಾರು ತೆಗೆದುಕೊಂಡು ಪರಾರಿಯಾಗಿರುವ ಘಟನೆ ಹೆಬ್ಬಾಳ-ಕೆಂಪಾಪುರದಲ್ಲಿ ನಡೆದಿದೆ. ರವೀಂದ್ರ ಎಂಬಾತ ಕೆಎ 04 ಎಂಆರ್ 9378 ನಂ ಬ್ರಿಜ್ಜಾ ಕಾರು ಮಾರಟಕ್ಕಿದೆ ಎಂದು ಓಎಲ್ಎಕ್ಸ್ ನಲ್ಲಿ ಆ್ಯಡ್ ಹಾಕಿದ್ದರು. ಕಾರು ಬೇಕಿದೆ ಎಂದು ಆರೋಪಿ ವೆಂಕಟೇಶ್, ಕಾರು ಮಾಲಿಕ ರವೀಂದ್ರ ಅವರನ್ನು ಸಂಪರ್ಕಿಸಿದ್ದನು. ಜನವರಿ 30 ರಂದು ಕಾರು ಖರೀದಿಗಾಗಿ ಆರೋಪಿ ಬಂದಿದ್ದನು. ಆರೋಪಿ ಕಾರು ಖರೀದಿಸಲು ಬಂದು ಟೆಸ್ಟ್ ಡ್ರೈವ್ ಅಂತಾ ಹೇಳಿ ಕಾರು ಸಮೇತ ಪರಾರಿಯಾಗಿದ್ದನು. ಕಾರು ಕಳೆದುಕೊಂಡು‌ ಕಂಗಾಲಾಗಿದ್ದ ಮಾಲೀಕನು, ಅಮೃತಹಳ್ಳಿ ಠಾಣೆಗೆ ಬಂದು ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿ‌ಯನ್ನು ಬಂಧಿಸಿದ್ದಾರೆ.

ವೆಂಕಟೇಶ್ ನಾಯ್ಕ್ ಬಾಗೇಪಲ್ಲಿ ಮೂಲದವನಾಗಿದ್ದು, ತನ್ನ ಹೆಂಡತಿಯನ್ನು ಗ್ರಾಮಪಂಚಾಯ್ತಿ ಎಲೆಕ್ಷನ್ ಗೆ ನಿಲ್ಲಿಸಿದ್ದನು. ಎಲೆಕ್ಷನ್ ಗಾಗಿ ಸಾಕಷ್ಟು ಹಣ ಖರ್ಚು ಮಾಡಿದ್ದನು. ಎಲೆಕ್ಷನ್ ಖರ್ಚಿಗಾಗಿ ಮೈತುಂಬ ಸಾಲ ಮಾಡಿಕೊಂಡಿದ್ದನು. ಹಾಗಾಗಿ ತನ್ನ ಬಳಿ ಇದ್ದ ಗ್ರೇ ಬಣ್ಣದ ಬ್ರಿಜ್ಜಾ ಕಾರು ಮಾರಾಟ ಮಾಡಿದ್ದನು. ಆದರೆ ದುರಾದೃಷ್ಟಕ್ಕೆ ವೆಂಕಟೇಶ್ ಹೆಂಡತಿ ಚುನಾವಣೆಯಲ್ಲಿ ಸೋತಿದ್ದಳು. ಕಾರು ಇಲ್ಲ ಅಂದರೆ ಊರಲ್ಲಿ ಅವಮಾನ ಆಗತ್ತೆ ಅಂತ ಅಂದುಕೊಂಡಿದ್ದನು.

ಇದನ್ನೂ ಓದಿ
Image
ಮಂಡ್ಯ ರಸ್ತೆ ಬದಿಯಲ್ಲಿ ರಾಶಿ ರಾಶಿ ದ್ರಾಕ್ಷಿ; ನಾ ಮುಂದು ತಾ ಮುಂದು ಎಂದು ಮುಗಿಬಿದ್ದ ಜನರು
Image
ಒಂದೇ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಗೆಳೆಯರು: ಬೆಂಕಿ ಹಚ್ಚಿ ಓರ್ವ ಗೆಳೆಯನ ಕೊಲೆ
Image
Poetry : ಅವಿತಕವಿತೆ; ಪೆದ್ದಾ, ನನ್ನ ಪ್ರಾಣಪ್ರಿಯವಾದ ಕೊಂಡಿ ನೀನು…
Image
Cherry Benefits: ನಿದ್ರಾಹೀನತೆ ಹೋಗಲಾಡಿಸುವ ಚೆರ್ರಿ ಹಣ್ಣಿನ ಇತರೆ ವಿಶೇಷತೆ ಏನು?

ಹಾಗಾಗಿ ಅದೇ ಬಣ್ಣದ ಕಾರು ಎಗರಿಸಲು ಪ್ಲಾನ್ ಮಾಡಿದ್ದನು. ಓಎಲ್ಎಕ್ಸ್ ನಲ್ಲಿ ಹುಡುಕಾಡಿ ಕಾರು ಮಾಲೀಕನನ್ನು ಸಂಪರ್ಕ ಮಾಡಿದ್ದನು. ಕದ್ದ ಮೊಬೈಲ್ ನಲ್ಲಿ ಮಾಲೀಕನಿಗೆ ಕರೆ ಮಾಡಿದ್ದನು. ಕೃತ್ಯಕ್ಕಾಗಿಯೇ ಮೊಬೈಲ್ ಕಳ್ಳತನಕ್ಕೆ ಕೈ ಹಾಕಿದ್ದನು. ಕಾರು ಖರೀದಿಸಲು ಬರುವಾಗ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಹೇಳಿ ಬೇರೆ ಬೇರೆಯವರ ಬಳಿ ಮೊಬೈಲ್ ಪಡೆದು ಮಾಲೀಕನಿಗೆ ಕರೆ ಮಾಡಿದ್ದನು. ನಂತರ ಬಂದು ಕೀ ಪಡೆದು ಕಾರಿನ ಜೊತೆಗೆ ಪರಾರಿಯಾಗಿದ್ದನು. ಆರೋಪಿಯನ್ನು ಬಂಧಿಸಿಲು, ಎರಡೂವರೆ ಸಾವಿರ ಓಎಲ್ಎಕ್ಸ್ ಐಪಿ ಅಡ್ರೆಸ್ ಜಾಲಾಡಿದ್ದ ಪೊಲೀಸರು, ಸದ್ಯ ಟೆಕ್ನಿಕಲ್ ಎವಿಡೆನ್ಸ್ ಆಧರಿಸಿ ಆರೋಪಿ ಅರೆಸ್ಟ್ ಮಾಡಿದ್ದಾರೆ.

Published On - 11:15 am, Sun, 15 May 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್