AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ ಸಿಎಂ ನಿತೀಶ್​ ಕುಮಾರ್​ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಕರ್ನಾಟಕದಲ್ಲಿ ಬಂಧನ

Death Threat to Nitish Kumar: ಬಿಹಾರ ಸಿಎಂ ನಿತೀಶ್ ಕುಮಾರ್​​ಗೆ ಕೊಲೆ ಬೆದರಿಕೆ ಹಾಕಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ಕರ್ನಾಟಕದ ದಾವಣಗೆರೆಯಿಂದ ಬಂಧಿಸಲಾಗಿದೆ. ಸಂದೇಶ ಬಂದಿದ್ದ ಮೊಬೈಲ್ ಸಂಖ್ಯೆಯ ಮೂಲ ಪತ್ತೆಹಚ್ಚುವ ಮೂಲಕ ಆರೋಪಿಯನ್ನು ಕರ್ನಾಟಕ ಪೊಲೀಸರ ಸಹಾಯದೊಂದಿಗೆ ಬಂಧಿಸಿರುವ ಬಿಹಾರ ಪೊಲೀಸರು, ಸದ್ಯ ಆತನನ್ನು ಪಾಟ್ನಾಕ್ಕೆ ಕರೆದೊಯ್ದು ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

ಬಿಹಾರ ಸಿಎಂ ನಿತೀಶ್​ ಕುಮಾರ್​ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ಕರ್ನಾಟಕದಲ್ಲಿ ಬಂಧನ
ನಿತೀಶ್​ ಕುಮಾರ್
ಗಣಪತಿ ಶರ್ಮಾ
|

Updated on: Feb 15, 2024 | 10:19 AM

Share

ಬೆಂಗಳೂರು, ಫೆಬ್ರವರಿ 15: ಬಿಹಾರ ಸಿಎಂ ನಿತೀಶ್​ ಕುಮಾರ್​ಗೆ (Nitish Kumar) ಕೊಲೆ ಬೆದರಿಕೆ (Death Threat) ಹಾಕಿದ್ದ ಆರೋಪಿ ಸೋನು ಪಾಸ್ವಾನ್​ ಅನ್ನು ಕರ್ನಾಟಕದಲ್ಲಿ (Karnataka) ಬಿಹಾರ ಪೊಲೀಸರು ಬಂಧಿಸಿದ್ದಾರೆ. ಸೋನು ಪಾಸ್ವಾನ್ ಕರ್ನಾಟಕದ ದಾವಣಗೆರೆಯಲ್ಲಿ (Davanagere) ರೈಸ್ ಮಿಲ್​ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಆತ ಮೂಲತಃ ಬಿಹಾರದ ಸಮಸ್ತಿಪುರ ನಿವಾಸಿ ಎಂಬುದು ತಿಳಿದುಬಂದಿದೆ. ಬಂಧಿತನನ್ನು ಬುಧವಾರ ರಾತ್ರಿ ಬಿಹಾರದ ಪಾಟ್ನಾಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಯು ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಳ್ಳದಿದ್ದರೆ ಬಾಂಬ್ ಸ್ಫೋಟಿಸಿ ಹತ್ಯೆ ಮಾಡುವುದಾಗಿ ನಿತೀಶ್ ಕುಮಾರ್​ಗೆ ಬೆದರಿಕೆ ಹಾಕಿದ್ದ.

ಆರೋಪಿಯು ಜನವರಿ 30 ರಂದು ಬಿಹಾರದ ಪೊಲೀಸ್ ಮಹಾನಿರ್ದೇಶಕ ಆರ್‌ಎಸ್ ಭಟ್ಟಿ ಅವರಿಗೆ ವಾಟ್ಸಾಪ್ ಸಂದೇಶ ಮತ್ತು ಆಡಿಯೊ ಕ್ಲಿಪ್ ಕಳುಹಿಸಿದ್ದ. ಡಿಜಿಪಿಗೆ ಕಳುಹಿಸಿದ ಸಂದೇಶ ಮತ್ತು ಆಡಿಯೊ ಕ್ಲಿಪ್‌ನಲ್ಲಿ, ‘ಬಿಜೆಪಿಯಿಂದ ಬೇರ್ಪಡದಿದ್ದರೆ ಸಿಎಂ ನಿತೀಶ್ ಕುಮಾರ್ ಮತ್ತು ಇತರ ಶಾಸಕರನ್ನು ಬಾಂಬ್ ಸ್ಫೋಟಿಸಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಬಿಹಾರ ಪೊಲೀಸರು ಈ ಬಗ್ಗೆ ತಕ್ಷಣವೇ ತನಿಖೆ ಆರಂಭಿಸಿದ್ದು, ಆರೋಪಿಯ ಪತ್ತೆಗೆ ಬಲೆಬೀಸಿದ್ದರು.

ಡಿಜಿಪಿಗೆ ಸಂದೇಶ ಬಂದಿದ್ದ ಮೊಬೈಲ್ ಸಂಖ್ಯೆಯ (8431233508) ಮೂಲ ಪರಿಶೀಲಿಸಿದಾಗ ಆ ಸ್ಥಳ ಕರ್ನಾಟಕದ ದಾವಣಗೆರೆ ಎಂಬದು ತಿಳಿದುಬಂದಿದೆ. ಆರೋಪಿಗಳ ಪತ್ತೆಗೆ ಬಿಹಾರ ಪೊಲೀಸರ ತಂಡ ಕರ್ನಾಟಕಕ್ಕೆ ಬಂದಿತ್ತು. ನಂತರ ಕರ್ನಾಟಕ ಪೊಲೀಸರ ಸಹಾಯದಿಂದ ಆರೋಪಿಯನ್ನು ದಾವಣಗೆರೆಯಲ್ಲಿ ಬಂಧಿಸಲಾಗಿದೆ. ಆರೋಪಿಯು ದಾವಣಗೆರೆಯ ಬಿಎನ್‌ಎಂ ಹೈಟೆಕ್ ಆಗ್ರೋ ಇಂಡಸ್ಟ್ರೀಸ್ ರೈಸ್ ಮಿಲ್‌ನಲ್ಲಿ ಗೋಣಿಚೀಲ ಹೊಲಿಗೆ ಕೆಲಸ ಮಾಡುತ್ತಿದ್ದ.

ಇದನ್ನೂ ಓದಿ: ಮೂರನೇ ದಿನಕ್ಕೆ ಕಾಲಿಟ್ಟ ರೈತರ ಚಳವಳಿ, ಪಂಜಾಬ್​ನಲ್ಲಿ ಇಂದು ರೈಲು ತಡೆದು ಪ್ರತಿಭಟನೆ

ಬಿಹಾರದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಬಡತನಕ್ಕೆ ಅಲ್ಲಿನ ಸರ್ಕಾರವೇ ಹೊಣೆ ಎಂದು ವಿಚಾರಣೆ ವೇಳೆ ಆತ ದೂರಿದ್ದಾನೆ. ಆರೋಪಿಯ ಕುಟುಂಬದವರು ಹಸನ್‌ಪುರದ (ಸಮಸ್ತಿಪುರ) ದಯಾನಗರದಲ್ಲಿ ವಾಸಿಸುತ್ತಿದ್ದಾರೆ. ಇಷ್ಟು ಕ್ಲಿಪ್‌ಗಳನ್ನು ಕಳುಹಿಸಿದ ನಂತರವೂ ಬಿಹಾರದಲ್ಲಿ ಅದಕ್ಕೆ ಸಂಬಂಧಿಸಿದ ಯಾವುದೇ ಚಲನವಲನ ಕಂಡುಬಂದಿರಲಿಲ್ಲ. ಆದ್ದರಿಂದ ಎಲ್ಲಾ ಕ್ಲಿಪ್‌ಗಳನ್ನು ಕೆಲವು ಮಾಧ್ಯಮಗಳಿಗೆ ನೀಡಲು ಹೊರಟಿದ್ದಾಗಿ ಸೋನು ಹೇಳಿದ್ದಾನೆ. ಆದರೆ ಅದಕ್ಕೂ ಮೊದಲು ಆತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ