AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಕಿ ಮೇಲೆ ಆಸಿಡ್ ದಾಳಿ; ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ದಂಡ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಅಪರಾಧಿ ಮಹೇಶ್ 2014ರಲ್ಲಿ ಬೈಕ್‌ನಲ್ಲಿ ಬಂದು ಯುವತಿಗೆ ಆಸಿಡ್ ಎರಚಿದ್ದ. ಈ ಸಂಬಂಧ, ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ದಂಡ ವಿಧಿಸಿತ್ತು. ಈ ಬಗ್ಗೆ, ಆಸಿಡ್ ದಾಳಿ ಸಮಾಜಘಾತುಕ ಕೃತ್ಯ ಎಂದು ಹೈಕೋರ್ಟ್ ಹೇಳಿದೆ.

ಶಿಕ್ಷಕಿ ಮೇಲೆ ಆಸಿಡ್ ದಾಳಿ; ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ದಂಡ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on:Jul 24, 2021 | 11:10 PM

Share

ಬೆಂಗಳೂರು: ಶಿಕ್ಷಕಿ ಮೇಲೆ ಆಸಿಡ್ ದಾಳಿ ನಡೆಸಿದ 2014ರ ಪ್ರಕರಣ ಒಂದಕ್ಕೆ ಸಂಬಂಧಿಸಿ ಇಂದು ನ್ಯಾಯಾಲಯ ತೀರ್ಪು ನೀಡಿದೆ. ಶಿಕ್ಷಕಿ ಮೇಲೆ ಆಸಿಡ್ ದಾಳಿ ಮಾಡಿದ್ದವನಿಗೆ ಕರ್ನಾಟಕ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ನಿವಾಸಿ ಮಹೇಶ್ ಎಂಬಾತ ವಿವಾಹ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಆಸಿಡ್ ದಾಳಿ ನಡೆಸಿದ್ದ. ಇದೀಗ ಹೈಕೋರ್ಟ್ ಆಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ದಂಡ ಶಿಕ್ಷೆ ತೀರ್ಪು ಎತ್ತಿ ಹಿಡಿದಿದೆ.

ಅಪರಾಧಿ ಮಹೇಶ್ 2014ರಲ್ಲಿ ಬೈಕ್‌ನಲ್ಲಿ ಬಂದು ಯುವತಿಗೆ ಆಸಿಡ್ ಎರಚಿದ್ದ. ಈ ಸಂಬಂಧ, ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ದಂಡ ವಿಧಿಸಿತ್ತು. ಈ ಬಗ್ಗೆ, ಆಸಿಡ್ ದಾಳಿ ಸಮಾಜಘಾತುಕ ಕೃತ್ಯ ಎಂದು ಹೈಕೋರ್ಟ್ ಹೇಳಿದೆ.

ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ ಕೋರ್ಟ್, ಯುವತಿಗೆ ಆರ್ಥಿಕ ನೆರವು ಒದಗಿಸುವಂತೆಯೂ ಸೂಚನೆ ನೀಡಿದೆ. ಈ ಬಗ್ಗೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ನ್ಯಾ.ಬಿ. ವೀರಪ್ಪ, ನ್ಯಾ.ವಿ. ಶ್ರೀಶಾನಂದ್‌ ಅವರಿದ್ದ ಪೀಠ ಆದೇಶ ಹೊರಡಿಸಿದೆ.

ಎಫ್​ಐಆರ್ ಆದರೂ ಬಂಧಿಸದಿದ್ದವರ ಮಾಹಿತಿ ಸಂಗ್ರಹಿಸಲು ಕಮಲ್ ಪಂತ್ ಸೂಚನೆ ಎಫ್​ಐಆರ್ ಆದರೂ ಬಂಧಿಸದಿದ್ದವರ ಮಾಹಿತಿ ಸಂಗ್ರಹಿಸಿ ಪರಿಶೀಲನೆ ನಡೆಸಲು ಬೆಂಗಳೂರು ನಗರದ ಎಲ್ಲಾ ಡಿಸಿಪಿಗಳಿಗೆ ಪೊಲೀಸ್ ಕಮಿಷನರ್​ ಸೂಚನೆ ನೀಡಿದ್ದಾರೆ. ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೀಗೆ ಸೂಚಿಸಿದ್ದಾರೆ. ರೌಡಿಶೀಟರ್​ ಬಬ್ಲಿ ಕೊಲೆ ಕೇಸ್ ನಂತರ ಆಯುಕ್ತರು ಹೀಗೆ ಸೂಚನೆ ನೀಡಿದ್ದಾರೆ.

ಕೋರಮಂಗಲದ ಯೂನಿಯನ್​ ಬ್ಯಾಂಕ್​ನಲ್ಲಿ ರೌಡಿ ಶೀಟರ್ ಬಬ್ಲಿ ಹತ್ಯೆಯಾಗಿತ್ತು. ಹತ್ಯೆಯಾದ ಬಬ್ಲಿ, ಕೊಲೆ ಯತ್ನ ಕೇಸ್​ನಲ್ಲಿ ಆರೋಪಿಯಾಗಿದ್ದ. ಅಶೋಕನಗರ ಠಾಣೆಯಲ್ಲಿ ಬಬ್ಲಿ ವಿರುದ್ಧ ಕೇಸ್ ದಾಖಲಾಗಿತ್ತು. ಆದರೂ ಬಬ್ಲಿಯನ್ನು ಅಶೋಕನಗರ ಪೊಲೀಸರು ಬಂಧಿಸಿರಲಿಲ್ಲ. ಬಬ್ಲಿ ಹತ್ಯೆ ಕೇಸ್​ ಹಿನ್ನೆಲೆಯಲ್ಲಿ ಎಲ್ಲಾ ಪೊಲೀಸ್ ಠಾಣೆಯಲ್ಲಿ ಪರಿಶೀಲನೆ ನಡೆಸಬೇಕು. ಎಫ್​ಐಆರ್ ಆಗಿದ್ದರೂ ಬಂಧನವಾಗದ ಆರೋಪಿಗಳ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಬೆಂಗಳೂರು ಪೊಲೀಸ್ ಕಮಿಷನರ್​ ಕಮಲ್ ಪಂತ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಇಲ್ಲಿಯವರೆಗೂ ಸತ್ತಂತೆ ಇದ್ದೆ, ಈ ತೀರ್ಪು ಉಸಿರಾಡುವಂತೆ ಮಾಡಿದೆ: ಆ್ಯಸಿಡ್ ದಾಳಿ ಸಂತ್ರಸ್ತೆ

BMTC ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ದಾಳಿ

(Acid Attack on Woman Teacher from Davanagere in 2014 Karnataka High Court on this)

Published On - 11:06 pm, Sat, 24 July 21

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್